ದ್ವಿತೀಯ ಪಿಯು ಪರೀಕ್ಷೆ-2 ಫಲಿತಾಂಶ ಮೇ 21ರಂದು ಘೋಷಣೆ
ಬೆಂಗಳೂರು, ಮೇ 20: ಕರ್ನಾಟಕದ ದ್ವಿತೀಯ ಪಿಯುಸಿ 2024ರ ಪರೀಕ್ಷೆ-2ರ ಫಲಿತಾಂಶ ಮಂಗಳವಾರ ಮಧ್ಯಾಹ್ನ ಪ್ರಕಟವಾಗಲಿದೆ. 29/4/2024 ರಿಂದ 16/5/2024ರ ತನಕ ರಾಜ್ಯದಲ್ಲಿ ಎರಡನೇ ಪಿಯುಸಿಯ ಪರೀಕ್ಷೆ-2 ನಡೆದಿತ್ತು.
ಸೋಮವಾರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧ್ಯಕ್ಷರಾದ ಎನ್. ಮಂಜುಶ್ರೀ ಸಾಮಾಜಿಕ ಜಾಲತಾಣದಲ್ಲಿ ಫಲಿತಾಂಶ ಮಂಗಳವಾರ ಪ್ರಕಟಿಸುವ ಕುರಿತು ಪೋಸ್ಟ್ ಹಾಕಿದ್ದಾರೆ. ವಿದ್ಯಾರ್ಥಿಗಳು ಮಂಗಳವಾರ ಮಧ್ಯಾಹ್ನ ಆನ್ಲೈನ್ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಬುಧವಾರ ಕಾಲೇಜುಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ.

2024ರ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ದಿನಾಂಕ 29-04-2024 ರಿಂದ 16-05-2024 ರವರೆಗೆ ನಡೆಸಲಾಯಿತು. ಇದರ ಫಲಿತಾಂಶವನ್ನು ದಿನಾಂಕ 21-05-2024ರ ಮಧ್ಯಾಹ್ನ 3 ಗಂಟೆಗೆ https://karresults.nic.in ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಪೋಸ್ಟ್ನಲ್ಲಿ ತಿಳಿಸಲಾಗಿದೆ.
ಏನಿದು ಪಿಯುಸಿ ಪರೀಕ್ಷೆ-2: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲು ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಸಿತ್ತು. 2024ರ ಪರೀಕ್ಷೆ-1ರಲ್ಲಿ ಉತ್ತೀರ್ಣರಾಗಿದ್ದು, ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಇಚ್ಛಿಸಿದ ವಿದ್ಯಾರ್ಥಿಗಳು ಪರೀಕ್ಷೆ-2 ಬರೆದಿದ್ದರು.
ಅಲ್ಲದೇ ಮಾರ್ಚ್ 2024ರ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಸಹ ಪರೀಕ್ಷೆ-2 ಬರೆದಿದ್ದರು. ಪರೀಕ್ಷೆ-1ಕ್ಕೆ ಹೆಸರು ನೋಂದಣಿ ಮಾಡಿಕೊಂಡು ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳು ಸಹ ಪರೀಕ್ಷೆ-2 ಬರೆಯಲು ಅವಕಾಶ ನೀಡಲಾಗಿತ್ತು.
ದ್ವಿತೀಯ ಪಿಯುಸಿ ಪರೀಕ್ಷೆ-2ಗೆ ಹಾಜರಾಗುವ ಪುನಾರಾವರ್ತಿತ ಮತ್ತು ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ಒಂದು ವಿಷಯಕ್ಕೆ ರೂ. 140, ಎರಡು ವಿಷಯಕ್ಕೆ 270 ರೂ. ಮತ್ತು ಮೂರು ಅಥವ ಹೆಚ್ಚಿನ ವಿಷಯಗಳಿಗೆ 400 ರೂ. ಶುಲ್ಕ ನಿಗದಿ ಮಾಡಲಾಗಿತ್ತು. ಆದರೆ ಎಸ್ಸಿ/ ಎಸ್ಟಿ ಹಾಗೂ ಪ್ರವರ್ಗ-1 ವಿದ್ಯಾರ್ಥಿಗಳಿಗೆ ಶುಲ್ಕ ಇರಲಿಲ್ಲ.
ಏಪ್ರಿಲ್ನಲ್ಲಿ 2024ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿತ್ತು. ಪರೀಕ್ಷೆ-1 1/3/2024 ರಿಂದ 22/3/2024ರ ತನಕ ರಾಜ್ಯದ 1124 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿತ್ತು. 70 ಕೇಂದ್ರಗಳಲ್ಲಿ ಮೌಲ್ಯ ಮಾಪನವನ್ನು 25/3/2024 ರಿಂದ 30/4/2024ರ ತನಕ 27,650 ಮೌಲ್ಯ ಮಾಪಕರು ನಡೆಸಿದ್ದರು.
ಪರೀಕ್ಷೆ-1 ಬರೆಯಲು ಅರ್ಹರಾಗಿದ್ದ ವಿದ್ಯಾರ್ಥಿಗಳು 6,98,378. ಎಲ್ಲಾ ವಿಷಯಗಳಿಗೆ 17,299 ವಿದ್ಯಾರ್ಥಿಗಳು ಗೈರಾಗಿದ್ದರು. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು 6,81,079. ಒಟ್ಟು ತೇರ್ಗಡೆಯಾದ ವಿದ್ಯಾರ್ಥಿಗಳು 5,52,690.
2024ರಲ್ಲಿ ಉತ್ತಿರ್ಣಗೊಂಡ ಶೇಕಡಾವಾರು ಪ್ರಮಾಣ 81.15 ಆಗಿತ್ತು. 2023ರಲ್ಲಿ ಪಿಯುಸಿ ಫಲಿತಾಂಶ 74.67ರಷ್ಟಿತ್ತು. ಏಪ್ರಿಲ್ 10ರಂದು ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸಲಾಗಿತ್ತು.
ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಬಿಗಿ ಭದ್ರತೆಯಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಹಾಗೂ ಕಾಲೇಜಿನ ಪ್ರಾಂಶುಪಾಲರ ನಿಗಾದಲ್ಲ ಅಚ್ಚುಕಟ್ಟಾಗಿ ನಡೆಸಲಾಗಿತ್ತು. ಈಗ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ.
ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಲೊಪವಾಗದಂತೆ ಕ್ರಮ ಕೈಗೊಳ್ಳಲಾಗಿತ್ತು. ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಉಪನ್ಯಾಸಕರನ್ನು ವಿಶೇಷ ಜಾಗೃತ ದಳದ ಸದಸ್ಯರನ್ನಾಗಿ ನೇಮಿಸಲಾಗಿತ್ತು.
ಕೊಠಡಿ ಮೇಲ್ವಿಚಾರಕರನ್ನು ಹೊರೆತುಪಡಿಸಿ ಬೇರೆಯವರ ಮೊಬೈಲ್ ಬಳಕೆ ನಿಷೇಧಿಸಲಾಗಿತ್ತು. ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲು ಅನುಮಾನಸ್ಪದ ಜನರು ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು. ಪ್ರತಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ವ್ಯಾಪ್ತಿಯಲ್ಲಿ ಜೆರಾಕ್ಸ್ ಅಂಗಡಿಗಳನ್ನು ಮತ್ತು ಕಂಪ್ಯೂಟರ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಬಂದ್ ಮಾಡಲಾಗಿತ್ತು.
-
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications