ದ್ವಿತೀಯ ಪಿಯುಸಿ ಪರೀಕ್ಷೆ-3; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬೆಂಗಳೂರು, ಮೇ 29: 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ ಮಾಡಲಾಗಿದೆ. ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಅರ್ಜಿ ಸಲ್ಲಿಸಬಹುದು.
ಈ ಕುರಿತು ಅಧ್ಯಕ್ಷರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ, ಬೆಂಗಳೂರು ಆದೇಶ ಹೊರಡಿಸಿದ್ದಾರೆ. ಈ ಮೊದಲು 28/5/2024ರ ತನಕ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ನೀಡಲಾಗಿತ್ತು.

ವಿದ್ಯಾರ್ಥಿಗಳು, ಪೋಷಕರ ದೂರವಾಣಿ ಕರೆಗಳ ಹಿನ್ನಲೆಯಲ್ಲಿ ದಿನಾಂಕ ವಿಸ್ತರಣೆ ಮಾಡಲಾಗಿದೆ. ಪರಿಷ್ಕೃತ ಆದೇಶದಂತೆ ವಿದ್ಯಾರ್ಥಿಗಳು ಕಾಲೇಜಿಗೆ ಪರೀಕ್ಷಾ ಶುಲ್ಕ ಪಾವತಿಸಲು ಕೊನೆಯ ದಿನಾಂಕ ದಂಡ ರಹಿತ 31/5/2024. ದಂಡ ಸಹಿತವಾಗಿ (50 ರೂ.) 1/6/2024 ರಿಂದ 3/6/2024.
2024ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ದಿನಾಂಕ 28-05-2024ರ ತನಕ ದಿನಾಂಕ ನಿಗದಿಪಡಿಸಲಾಗಿತ್ತು. ವಿದಾರ್ಥಿಗಳ ದೂರವಾಣಿ ಕರೆಗಳ ಮೇರೆಗೆ ಸದರಿ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ವಿಸ್ತರಿಸಿ ಆದೇಶಿಸಲಾಗಿದೆ. ಇದು ವಿದ್ಯಾರ್ಥಿಗಳಿಗೆ ಅಂತಿಮ ಅವಕಾಶವಾಗಿದ್ದು, ಮುಂದೆ ಯಾವುದೇ ಕಾರಣಕ್ಕೂ ದಿನಾಂಕವನ್ನು ವಿಸ್ತರಿಸಲಾಗುವುದಿಲ್ಲ ಎಂದು ಆದೇಶ ಹೇಳಿದೆ.
ಎಲ್ಲಾ ಕಾಲೇಜಿನ ಪ್ರಾಂಶುಪಾಲರುಗಳು ದಿನಾಂಕ ವಿಸ್ತರಣೆ ಮಾಡಿರುವ ಕುರಿತು ಕಡ್ಡಾಯವಾಗಿ ಕಾಲೇಜಿನ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು ಎಂದು ಸೂಚನೆ ನೀಡಲಾಗಿದೆ. ಕಾಲೇಜಿನ ಪ್ರಾಂಶುಪಾಲರು ಪರೀಕ್ಷೆ ಶುಲ್ಕವನ್ನು ಒಂದೇ ಕಂತಿನಲ್ಲಿ ಖಜಾನೆಗೆ ಸಂದಾಯ ಮಾಡಬೇಕಾದ ದಿನಾಂಕ ದಂಡರಹಿತವಾಗಿ 1/6/2024. ದಂಡ ಸಹಿತ (ದಿನಕ್ಕೆ 50 ರೂ. ನಂತೆ) 1/6/2024 ರಿಂದ 3/6/2024ರ ತನಕ.
ಪುನರಾವರ್ತಿತ ಹಾಗೂ ಫಲಿತಾಂಶ ಉನ್ನತೀಕರಣಕ್ಕಾಗಿ ವಿದ್ಯಾರ್ಥಿಗಳ ಮಾಹಿತಿಯನ್ನು ಮಂಡಲಿಯ ಪಿಯು ಎಕ್ಸಾಂ ಪೋರ್ಟಲ್ ಲಾಗಿನ್ನಲ್ಲಿ ಅಪ್ಡೇಟ್ ಮಾಡಲು ಕೊನೆಯ ದಿನಾಂಕ ದಂಡ ರಹಿತವಾಗಿ 3/6/2024. ದಂಡ ಸಹಿತವಾಗಿ (ದಿನಕ್ಕೆ 50 ರೂ.ನಂತೆ) 5/6/2024.
ಕಾಲೇಜಿನ ಪ್ರಾಂಶುಪಾಲರು ಪರೀಕ್ಷಾ ಅರ್ಜಿಗಳನ್ನು ಮೂಲ ಚಲನ್ ಸಹಿತ ಜಿಲ್ಲಾ ಉಪ ನಿರ್ದೇಶಕರ ಕಛೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕಾದ ದಿನಾಂಕ 4/6/2024, ದಂಡ ಸಹಿತವಾಗಿ (ದಿನಕ್ಕೆ 50 ರೂ.) 6/6/2024.
ಜಿಲ್ಲಾ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರವರು ಪ್ರಾಂಶುಪಾಲರಿಂದ ಸ್ವೀಕರಿಸಿದ ಪರೀಕ್ಷಾ ಅರ್ಜಿಗಳನ್ನು ಮಂಡಲಿಯ ಜಾಲತಾಣದ PU EXAM Portal ಲಾಗಿನ್ನಲ್ಲಿ ಅಪ್ಡೇಟ್ ಮಾಡಿರುವುದನ್ನು ಖಾತ್ರಿಪಡಿಸಿಕೊಂಡು ಪ್ರಾಂಶುಪಾಲರಿಂದ ಅಪ್ಡೇಟ್ ಮಾಡಿರುವುದಕ್ಕೆ ಸಂಬಂಧಿಸಿದಂತೆ ಮುಚ್ಚಳಿಕೆ ಪತ್ರ ಪಡೆದ ನಂತರ ಕಾಲೇಜುವಾರು ಕ್ರೋಢೀಕೃತ ವಿದ್ಯಾರ್ಥಿಗಳ ಪಟ್ಟಿ, ಶುಲ್ಕ ಪಾವತಿಸಿರುವ ಮೂಲ ಚಲನ್ ಹಾಗೂ ಚೆಕ್ ಲಿಸ್ಟ್ ಅನ್ನು ಖುದ್ದಾಗಿ ಮಂಡಲಿಗೆ ದಿನಾಂಕ 7/6/2024ರಂದು ಸಲ್ಲಿಸಲು ಸೂಚಿಸಿದೆ.
-
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ












Click it and Unblock the Notifications