Karnataka 2nd PUC Result 2022 : ದ್ವಿತೀಯ ಪಿಯು ಫಲಿತಾಂಶ ಬೆಳಗ್ಗೆ 11.30 ಗಂಟೆಗೆ ಪ್ರಕಟ
ಬೆಂಗಳೂರು, ಜೂನ್ 18: ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದ ಸಮಯ ಬಂದೇ ಬಿಟ್ಟಿದೆ. ಶನಿವಾರ (ಜೂನ್ 18ಕ್ಕೆ) ಪಿಯು ಪದವಿ ಪೂರ್ವ ಶಿಕ್ಷಣ ಇಲಾಖೆ ಫಲಿತಾಂಶವನ್ನು ಪ್ರಕಟಿಸಲಿದೆ. ಇಂದು ಬೆಳಗ್ಗೆ 11.30 ಗಂಟೆಗೆ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ. ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ http://karresult.nic.in/ ನಲ್ಲಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಈ ವೆಬ್ಸೈಟ್ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.
ದ್ವಿತೀಯ ಪಿಯುಸಿ 2021-22ನೇಸಾಲಿನ ಫಲಿತಾಂಶವನ್ನು ಜೂನ್ 18 ರಂದು ಪ್ರಕಟಿಸಲಿದೆ. ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ http://karresult.nic.in/ ನಲ್ಲಿ ಪಡೆಯಬಹುದಾಗಿದೆ. ವಿದ್ಯಾರ್ಥಿಗಳು ಈ ವೆಬ್ಸೈಟ್ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.
ಮೊಬೈಲ್ನಲ್ಲೂ ಸಿಗಲಿದೆ ಫಲಿತಾಂಶ
ಪಿಯುಸಿ ಪರೀಕ್ಷೆಯನ್ನು ಬರೆದಿರುವ ವಿದ್ಯಾರ್ಥಿಗಳು ಪರೀಕ್ಷೆಯ ಸಂದರ್ಭದಲ್ಲಿ ನೀಡಲಾಗಿರುವ ರಿಜಿಸ್ಟರ್ ಮಾಡಿರುವ ಮೊಬೈಲ್ ನಂಬರ್ಗೆ ಫಲಿತಾಂಶವನ್ನು ಕಳುಹಿಸುವ ವ್ಯವಸ್ಥೆಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ನೀಡಲಿದೆ.

ಪರೀಕ್ಷೆ ಹಾಜರಾಗಿದ್ದ ವಿದ್ಯಾರ್ಥಿಗಳು ಎಷ್ಟು?
ಹಿಜಾಬ್ ಗೊಂದಲದ ನಡುವೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು. ಏಪ್ರಿಲ್ 22 ರಿಂದ ಮೇ 18ರ ವರೆಗೂ ಪರೀಕ್ಷೆಗಳು ನಡೆದಿದ್ದವು. 6,84,255 ವಿದ್ಯಾರ್ಥಿಗಳು 2021-22ನೇ ಸಾಲಿನಲ್ಲಿ ಪರೀಕ್ಷೆಯನ್ನು ಬರೆದಿದ್ದರು. ಈ ಪೈಕಿ 3,46,936 ವಿದ್ಯಾರ್ಥಿಗಳು ಹಾಗೂ 3,37,319 ವಿದ್ಯಾರ್ಥಿನಿಯರು ಪರೀಕ್ಷೆಯನ್ನು ಬರೆದಿದ್ದಾರೆ. 6,00,519 ಫ್ರಷರ್ ವಿದ್ಯಾರ್ಥಿಗಳಾಗಿದ್ದು , 61,808 ಪುನಾರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು ಫಲಿತಾಂಶದ ನಿರೀಕ್ಷೆಯಲ್ಲಿ ಕಾಯುತ್ತಿದ್ದಾರೆ.

ದ್ವಿತೀಯ ಪಿಯುಸಿ ಫಲಿತಾಂಶವನ್ನು ಪಡೆಯುವುದು ಹೇಗೆ?
* ಪದವಿಪೂರ್ವ ಅಧಿಕೃತ ವೆಬ್ ಸೈಟ್ http://karresult.nic.in/ ಹೋಗಿ ಕ್ಲಿಕ್ ಮಾಡಿ.
* ಎಸ್ಎಸ್ಎಲ್ಸಿ ಮಾದರಿಯಲ್ಲೇ ಹೊಮ್ ಪೇಜ್ ತೆರೆದುಕೊಂಡು ಪಿಯುಸಿ ರಿಸಲ್ಟ್ ಲಿಂಕ್ ಬ್ಲಿಂಕ್ ಆಗುತ್ತಿರುತ್ತೆ ಅದನ್ನು ಕ್ಲಿಕ್ ಮಾಡಿ.
* ನೋಂದಣಿ ನಂಬರ್ ಅನ್ನು ಎಂಟ್ರಿ ಮಾಡಿ ಸಬ್ಮಿಟ್ ಬಟನ್ ಅನ್ನು ಕ್ಲಿಕ್ ಮಾಡಿದರೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.
* ಫಲಿತಾಂಶವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು ಅಥವಾ ಪ್ರಿಂಟ್ಔಟ್ ತೆಗೆದುಕೊಳ್ಳಬಹುದು.
Recommended Video
-
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications