ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಆಲ್ ದಿ ಬೆಸ್ಟ್ ಹೇಳಿದ ಸಚಿವ ಬಿ.ಸಿ. ನಾಗೇಶ್
ಬೆಂಗಳೂರು, ಏಪ್ರಿಲ್ 22: ರಾಜ್ಯದಾದ್ಯಂತ ಇಂದಿನಿಂದ (ಏ.22) ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗಿದೆ. ಈಗಾಗಲೇ ಎಸ್ಎಸ್ಎಲ್ಸಿ ಪರೀಕ್ಷೆಗಳು ಯಾವುದೇ ಗೊಂದಲಗಳಿಲ್ಲದೆ ಯಶಸ್ವಿಯಾಗಿದೆ.
ದ್ವಿತೀಯ ಪಿಯುಸಿಯಲ್ಲೂ ಯಾವುದೇ ಗೊಂದಲವಿಲ್ಲದೇ ನಡೆಸಲು ಶಿಕ್ಷಣ ಇಲಾಖೆ ಸಂಪೂರ್ಣವಾಗಿ ಸಜ್ಜಾಗಿದ್ದು, ಉಡುಪಿ ಪಿಯು ಕಾಲೇಜು ವಿದ್ಯಾರ್ಥಿನಿಯರಿಂದ ಪ್ರಾರಂಭವಾದ ಹಿಜಾಬ್ ಗೊಂದಲಕ್ಕೀಡಾಗಿತ್ತು. ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು. ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ಮಾಡಿಕೊಡುವುದಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.
ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ಇನ್ನು ಶುಕ್ರವಾರ ಚಿಕ್ಕಮಗಳೂರು ಜಿಲ್ಲೆಗೆ ಭೇಟಿ ನೀಡಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಉರ್ದು ಶಾಲೆ ಮುಚ್ಚುವ ಚಿಂತನೆ ಇಲ್ಲ. ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಒಂಟಿ ಶಾಲೆಗಳನ್ನು ವಿಲೀನ ಮಾಡಲಾಗುವುದು ಎಂದು ತಿಳಿಸಿದರು.

ಕಲಿಕೆ ಹಾಗೂ ಮಕ್ಕಳ ನಡುವೆ ಪ್ರತಿಸ್ಪರ್ಧೆ, ಉತ್ತಮ ಶಿಕ್ಷಣ ನೀಡುವ ಉದ್ದೇಶದಿಂದ ಶಾಲೆಗಳ ವಿಲೀನ ಮಾಡಲಾಗುವುದು. ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ, ಬದಲಾಗಿ ವಿಲೀನ ಮಾಡುತ್ತೇವೆ. ಕನ್ನಡ ಶಾಲೆ, ಉರ್ದು, ಮರಾಠಿ, ತಮಿಳು ಶಾಲೆ ಯಾವುದೇ ಇದ್ದರೂ ಸಹ ವಿಲೀನ ಮಾಡಲಾಗುವುದು ಎಂದರು.
ದ್ವಿತೀಯ ಪಿಯುಸಿ ಕುರಿತು ಮಾತನಾಡಿದ ಶಿಕ್ಷಣ ಸಚಿವರು, ವಿದ್ಯಾರ್ಥಿಗಳು ತುಂಬಾ ವಿಶ್ವಾಸದಲ್ಲಿದ್ದಾರೆ. ರಾಜ್ಯದಲ್ಲಿ ಬಾಲಕರು ಮತ್ತು ಬಾಲಕಿಯರು ಸಮಪಾಲು ಬರೆಯುತ್ತಿದ್ದಾರೆ. ಅಧಿಕಾರಿಗಳ ಮೇಲೆ ವಿಶ್ವಾಸವಿದೆ ಪರೀಕ್ಷೆ ಉತ್ತಮವಾಗಿ ನಡೆಯುತ್ತದೆ ಎಂದು ಚಿಕ್ಕಮಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಶುಭ ಕೋರುತ್ತೇನೆ. ಎರಡು ವರ್ಷದಿಂದ ಮಕ್ಕಳಿಗೆ ಪರೀಕ್ಷೆ ಇರಲಿಲ್ಲ, ಈಗ ಎಲ್ಲಾ ಮಕ್ಕಳು ಧೈರ್ಯದಿಂದಿದ್ದಾರೆ. ಸಿದ್ಧತೆ ಹೇಗಿದೆ ಎಂಬುದನ್ನು ನೋಡುವುದಕ್ಕೆ ಚಿಕ್ಕಮಗಳೂರಿಗೆ ಬಂದಿದ್ದೆ. ಎಲ್ಲಾ ಸಿದ್ಧತೆಗಳು ಶಿಕ್ಷಕರು ಅಚ್ಚುಕಟ್ಟಾಗಿ ಮಾಡಿದ್ದಾರೆ. ಶಿಕ್ಷಕರು ಮಕ್ಕಳಿಗೆ ಧೈರ್ಯ ತುಂಬಿ ಪರೀಕ್ಷೆ ಬರೆಸುತ್ತಾರೆಂದು ವಿಶ್ವಾಸ ನನಗಿದೆ ಎಂದು ಸಚಿವ ಬಿ.ಸಿ. ನಾಗೇಶ್ ಪ್ರತಿಕ್ರಿಯಿಸಿದರು.
ಹಾಸನದಲ್ಲಿ ಉತ್ಸಾಸದಿಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ ವಿದ್ಯಾರ್ಥಿಗಳು
ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಿದ್ದು, ಹಾಸನದಲ್ಲಿ ವಿದ್ಯಾರ್ಥಿಗಳು ಉತ್ಸಾಸದಿಂದ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದರು. ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸದೆ ಪರೀಕ್ಷೆ ಬರೆಯಲು ಬಂದಿದ್ದಾರೆ.
ಹಾಸನ ನಗರದ ಗಂಧದಕೋಠಿಯಲ್ಲಿರುವ ಬಾಲಕಿಯರ ವಿಭಜಿತ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಮವಸ್ತ್ರ ಧರಸಿ ಪರೀಕ್ಷೆಗೆ ಹಾಜರಾದರು. ಪರೀಕ್ಷಾ ಕೇಂದ್ರದ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
Recommended Video
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications