ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ, ಇಬ್ಬರು ಆರೋಪಿಗಳಿಗೆ ಜಾಮೀನು
ಬೆಂಗಳೂರು, ಸೆಪ್ಟೆಂಬರ್ 02 : ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ಇಬ್ಬರು ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಈಗಾಗಲೇ ಈ ಪ್ರಕರಣದಲ್ಲಿ 5 ಆರೋಪಿಗಳಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಗುರುವಾರ ಕರ್ನಾಟಕ ಹೈಕೋರ್ಟ್ ಪ್ರಕರಣದ ಆರೋಪಿಗಳಾದ ಟ್ಯುಟೋರಿಯಲ್ ಮುಖ್ಯಸ್ಥ ಮುರಳೀಧರ್ ಮತ್ತು ಸತೀಶ್ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣ ಇತರ ಆರೋಪಿಗಳಿಗೂ ಜಾಮೀನು ನೀಡಲಾಗಿದೆ. ಇದೇ ಆಧಾರದ ಮೇಲೆ ಇಬ್ಬರಿಗೆ ಜಾಮೀನು ನೀಡಲಾಗಿದೆ.[ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ, ಗಂಗಬೈರಯ್ಯಗೆ ಜಾಮೀನು]

ಈ ಆರೋಪಿಗಳು ಮೊದಲ ಆರೋಪಿ ಮಂಜುನಾಥ್ಗೆ ಹಣ ನೀಡಿ ಪ್ರಶ್ನೆ ಪತ್ರಿಕೆಯನ್ನು ಖರೀದಿಸಿದ್ದಾರೆ ಎಂಬ ಆರೋಪವಿದೆ. ಆರೋಪಿಗಳು ಪ್ರತ್ಯೇಕವಾಗಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಬಿ.ಶ್ರೀನಿವಾಸ ಗೌಡ ಅವರಿದ್ದ ಪೀಠ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.[ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ, ನಾಲ್ವರಿಗೆ ಜಾಮೀನು]
ಜಾಮೀನು ಸಿಕ್ಕಿದವರು : ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದ ತನಿಖೆಯನ್ನು ಸಿಐಡಿ ನಡೆಸುತ್ತಿದೆ. ಇದುವರೆಗೂ ಪ್ರಕರಣದ ಆರೋಪಿಗಳಾದ ಎಂ.ವಿ.ರುದ್ರಪ್ಪ, ಕೆ.ಎಸ್.ರಂಗನಾಥ್, ಬಿ.ಅನಿಲ್ ಕುಮಾರ್ ಮತ್ತು ಮಾಜಿ ಬಿಬಿಎಂಪಿ ಸದಸ್ಯ ಗಂಗಬೈರಯ್ಯ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.












Click it and Unblock the Notifications