2nd PUC Results 2023: ದಕ್ಷಿಣ ಕನ್ನಡಕ್ಕೆ ಮೊದಲ ಸ್ಥಾನ
ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು ದಕ್ಷಿಣ ಕನ್ನಡ ಮೊದಲ ಸ್ಥಾನ ಪಡೆದುಕೊಂಡಿದೆ. ಉಡುಪಿ ಜಿಲ್ಲೆಗೆ ಎರಡನೇ ಸ್ಥಾನ, ಕೊಡಗು ಜಿಲ್ಲೆಗೆ ಮೂರನೇ ಸ್ಥಾನ, ಉತ್ತರ ಕನ್ನಡ ಜಿಲ್ಲೆಗೆ ನಾಲ್ಕನೇ ಸ್ಥಾನ, ಯಾದಗಿರಿಗೆ ಕೊನೆ ಸ್ಥಾನ ಸಿಕ್ಕಿದೆ. ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಮಂಗಳೂರು ವಿದ್ಯಾರ್ಥಿನಿ ಅನನ್ಯಾ 600ಕ್ಕೆ 600 600 ಅಂಕಗಳೊಂದಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಒಂಬತ್ತನೇ ಸ್ಥಾನ, ಬೆಂಗಳೂರು ದಕ್ಷಿಣ ಜಿಲ್ಲೆ ಹತ್ತನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರು ಉತ್ತರ ಜಿಲ್ಲೆಗೆ ಹನ್ನೊಂದನೆ ಸ್ಥಾನ ಸಿಕ್ಕಿದೆ. ಒಟ್ಟು 524,209 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಶೇ.74.67 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕಲಾ ವಿಭಾಗದಲ್ಲಿ ತಬಸ್ಸುಮ್ ರಾಜ್ಯದಲ್ಲಿ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಜಯನಗರದ ಎನ್ಎಂಕೆಆರ್ವಿ ಕಾಲೇಜು ವಿದ್ಯಾರ್ಥಿನಿ ತಬಸ್ಸುಮ್ 600ಕ್ಕೆ 593 ಅಂಕಗಳನ್ನು ಪಡೆದು ರಾಜ್ಯದಲ್ಲಿ ಟಾಪರ್ ರೇಸಿನಲ್ಲಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ದಕ್ಷಿಣ ಕನ್ನಡಕ್ಕೆ ಮೊದಲ ಸ್ಥಾನ#SecondPUCResult #BCNagesh #PUStudents #PUResult #ExamResult #PUStudents pic.twitter.com/Vy3ad6voXv
— oneindiakannada (@OneindiaKannada) April 21, 2023
ಜೊತೆಗೆ ಕೋಲಾರದ ಗಂಗೋತ್ರಿ ಕಾಲೇಜು ವಿದ್ಯಾರ್ಥಿ ಕೌಶಿಕ್ ವಿಜ್ಞಾನ ವಿಭಾಗದಲ್ಲಿ 600ಕ್ಕೆ 596 ಅಂಕಗಳನ್ನು ಪಡೆದು ರಾಜ್ಯದ ಟಾಪ್ ಲಿಸ್ಟ್ನಲ್ಲಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ 600ಕ್ಕೆ 596 ಅಂಕಗಳನ್ನು ವಿದ್ಯಾರ್ಥಿನಿ ಎನ್.ಇಂಚರಾ ಪಡೆದುಕೊಂಡರೆ, ಇದೇ ವಿಭಾಗದಲ್ಲಿ ವರ್ಷಾ ಸತ್ಯ ನಾರಾಯಣ 600ಕ್ಕೆ 596 ಅಂಕಗಳನ್ನು ಪಡೆದುಕೊಂಡಿದ್ದಾರೆ. ಜೊತೆಗೆ ವಿದ್ಯಾರ್ಥಿನಿ ಗಾನಾ 600ಕ್ಕೆ 596 ಅಂಕ, ಸುರಭಿ 600ಕ್ಕೆ 594, 600ಕ್ಕೆ 594 ಅಂಕ ವಿದ್ಯಾರ್ಥಿ ಸ್ವಾತಿ ಎಸ್ ಪೈ, 600ಕ್ಕೆ 596 ಅಂಕಗಳನ್ನು ದಿಶಾ ರಾವ್ ಪಡೆದು ಟಾಪ್ ಲಿಸ್ಟ್ನಲ್ಲಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ 600ಕ್ಕೆ 596 ಅಂಕಗಳನ್ನು ಛಾಯಾ ರವಿಕುಮಾರ್, 600ಕ್ಕೆ 596 ಅಂಕಗಳನ್ನು ಧಾನ್ಯಶ್ರೀ ರಾವ್ ಸೇರಿದಂತೆ ವಿಜ್ಞಾನ ವಿಭಾಗದಲ್ಲಿ 2,07,087 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಟಾಪರ್ ಲಿಸ್ಟ್ ಹೀಗಿದೆ:-
1.ಅಂಕೋಲಾದ ವಿಕಾಸ್ ಸಂಯೋಜಿತ ಪಿಯು ಕಾಲೇಜು ವಿದ್ಯಾರ್ಥಿ ಅನ್ವಿತಾ ಡಿ.ಎನ್ 600ಕ್ಕೆ 596 ಅಂಕ,
2.ಬೆಂಗಳೂರಿನ ಜಯನಗರ ಟ್ರಾನ್ಸೆಂಡ್ ಪಿಯು ಕಾಲೇಜು ವಿದ್ಯಾರ್ಥಿ ಛಾಯಾ ರವಿ ಕುಮಾರ್ 596,
3.ಎಕ್ಸಲೆಂಟ್ ಪಿಯು ಕಾಲೇಜು ಮೂಡುಬಿದರೆ ವಿದ್ಯಾರ್ಥಿ ಖುಷಿ ವೈ ಬಾಗಲಕೋಟೆ 596,
4.ಮಂಗಳೂರು ವಿಕಾಸ್ ಪಿಯು ಕಾಲೇಜು ವಿದ್ಯಾರ್ಥಿ ಸ್ವಾತಿ ಎಸ್ ಪೈ 596,
5.ಬೆಂಗಳೂರು ಕ್ರೈಸ್ಟ್ ಪಿಯು ಕಾಲೇಜು ವಿದ್ಯಾರ್ಥಿ ಧನ್ಯಶ್ರೀ 596,
6.ಬೆಂಗಳೂರಿನ ಜಯನಗರ ಟ್ರಾನ್ಸೆಂಡ್ ಕಾಲೇಜು ವಿದ್ಯಾರ್ಥಿ ವರ್ಷಾ ಸತ್ಯನಾರಾಯಣ 596,
7.ಮೂಡುಬಿದಿರೆ ಆಳ್ವಾಸ್ ಪಿಯು ಕಾಲೇಜು ವಿದ್ಯಾರ್ಥಿ ಕೆ. ದಿಶಾ 596,
8.ಬೆಂಗಳೂರು ರಾಜಾಜಿ ನಗರ ಎಎಸ್ಸಿ ಪಿಯು ಕಾಲೇಜು ವಿದ್ಯಾರ್ಥಿ ಇಂಚರಾ ಎನ್ 596,
9. ಹೊಸೂರು ರೋಡ್ ಬೆಂಗಳೂರು ಕ್ರೈಸ್ಟ್ ಪಿಯು ಕಾಲೇಜು ವಿದ್ಯಾರ್ಥಿ ಗಾನಾ ಜೆ 596,
10. ರಾಜಾಜಿ ನಗರ ಎಎಸ್ಸಿ ಪಿಯು ಕಾಲೇಜು ವಿದ್ಯಾರ್ಥಿ ಶುಭಶ್ರೀ 595,
11. ಚನ್ನಸಂದ್ರ ಆರ್ಎನ್ಎಸ್ ಕಾಲೇಜು ವಿದ್ಯಾರ್ಥಿ ಪ್ರೀತಿ ಸುಧೀರ್ 595,
12. ತುಮಕೂರು ವಿದ್ಯಾನಿಧಿ ಪಿಯು ಕಾಲೇಜು ವಿದ್ಯಾರ್ಥಿ ಚಿನ್ಮಯಿ ಎಂ 595,
13. ಮಂಗಳೂರು ಕೆನರಾ ಪಿಯು ಕಾಲೇಜು ವಿದ್ಯಾರ್ಥಿ ಎನ್.ಪ್ರತೀಕ್ ಮಲ್ಯ 595,
14.ಬೆಂಗಳೂರು ಕ್ರೈಸ್ಟ್ ಅಕಾಡೆಮಿ ಪಿಯು ಕಾಲೇಜು ವಿದ್ಯಾರ್ಥಿ ಲಿಖಿತಾ ಸಿ 595,
15. ಪುತ್ತೂರು ವಿವೇಕಾನಂದ ಕಾಲೇಜು ವಿದ್ಯಾರ್ಥಿ ಆದಿತ್ಯ ನಾರಾಯಣ 595,
16.ತುಮಕೂರು ರೋಡ್ ಜಿಂದಾಲ್ ಪಿಯು ಕಾಲೇಜು ವಿದ್ಯಾರ್ಥಿ ಪ್ರಿಯಾಂಕಾ ಎನ್ 595,
17. ಬೆಂಗಳೂರು ಪದ್ಮನಾಭನಗರ ಕುಮರನ್ಸ್ ಕಾಲೇಜು ವಿದ್ಯಾರ್ಥಿ ಸುಮಂತ್ ಭಟ್ 595,
18. ಬೆಂಗಳೂರು ಜಯನಗರ ಟ್ರಾನ್ಸೆಂಡ್ ಪಿಯು ಕಾಲೇಜು ವಿದ್ಯಾರ್ಥಿ ಯುವರಂಜನ ಶ್ರೀನಿವಾಸ್ ಮುರುಗನ್ 595,
19. ಶಿವಮೊಗ್ಗ ಸ್ವೆಟ್ ಇಂಡಿಪೆಂಡೆಂಟ್ ಕಾಲೇಜು ವಿದ್ಯಾರ್ಥಿ ನೇಹಾಶ್ರೀ 595,
20. ತುಮಕೂರು ವಿದ್ಯಾನಿಧಿ ಪಿಯು ಕಾಲೇಜು ವಿದ್ಯಾರ್ಥಿ ಗೀತಾ 595,
21. ಮೈಸೂರು ಬಿಜಿಎಸ್ ಹೆಣ್ಮಕ್ಕಳ ಪಿಯು ಕಾಲೇಜು ವಿದ್ಯಾರ್ಥಿ ನಿಖಿತಾ ಪಿ 595,
22. ಬೆಂಗಳೂರು ಜಯನಗರ ಸಮುದಾಯ ಕೇಂದ್ರ ಪಿಯು ಕಾಲೇಜು ವಿದ್ಯಾರ್ಥಿ ಸಹನಾ ಎನ್ 595 ಅಂಕ ಪಡೆದು ಟಾಪ್ ಲಿಸ್ಟ್ನಲ್ಲಿದ್ದಾರೆ.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications