2nd Puc Results 2025: ದ್ವಿತೀಯ ಪಿಯುಸಿ ಫಲಿತಾಂಶ ವೀಕ್ಷಣೆಗೆ ವೆಬ್ಸೈಟ್ಗಳ ವಿವರ ಇಲ್ಲಿದೆ
2nd Puc Results 2025: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಈಗಾಗಲೇ ಮುಗಿದಿದೆ. ಇಂದು ಅಂದರೆ (ಏಪ್ರಿಲ್ 8) ಫಲಿತಾಂಶ ಘೋಷಣೆಯಾಗಿದೆ. ಹಾಗಾದ್ರೆ ಯಾವೆಲ್ಲಾ ವೆಬ್ಸೈಟ್ಗಳಲ್ಲಿ ರಿಸಲ್ಟ್ ವೀಕ್ಷಣೆ ಮಾಡಬಹುದು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಮಾರ್ಚ್ 1ರಿಂದ 20ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡದಿದ್ದವು. ಇಂದು (ಏಪ್ರಿಲ್ 8) 12.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದಾರೆ.

ಯಾವ ವೆಬ್ಸೈಟ್ನಲ್ಲಿ ಫಲಿತಾಂಶ ವೀಕ್ಷಿಸಬಹುದು?: ಇಂದು ಮಧ್ಯಾಹ್ನ 1.30ರ ವೇಳೆಗೆ ಫಲಿತಾಂಶವನ್ನು ಆನ್ಲೈನ್ಲ್ಲಿ ವೀಕ್ಷಣೆ ಮಾಡಬಹುದು. ಅಧಿಕೃತ ವೆಬ್ಸೈಟ್ https://karresults.nic.in ಅಥವಾ kseab.karnataka.gov.inಗೆ ಭೇಟಿ ನೀಡಿ ಫಲಿತಾಂಶವನ್ನು ನೋಡಬಹುದಾಗಿದೆ.
ಫಲಿತಾಂಶ ಪರಿಶೀಲನೆ ವಿಧಾನಗಳು
* ಅಭ್ಯರ್ಥಿಗಳು ಮೊದಲು ಗೂಗಲ್ನಲ್ಲಿ ಅಧಿಕೃತ ವೆಬ್ಸೈಟ್ karresults.nic.in ಅಥವಾ kseab.karnataka.gov.inಗೆ ಭೇಟಿ ನೀಡಬೇಕು.
* ಹೋಂ ಪೇಜ್ನಲ್ಲಿ Second PU Results 2025 ಲಿಂಕ್ ಕ್ಲಿಕ್ ಮಾಡಬೇಕು.
* ನೋಂದಣಿ ಸಂಖ್ಯೆ ಮತ್ತು ಪಾಸ್ವರ್ಡ್ ನಮೂದಿಸಬೇಕು.
* Second PU Results 2025 ಎಂದು ಸ್ಕ್ರೀನ್ನಲ್ಲಿ ಕಾಣಿಸುತ್ತದೆ.
*ಬಳಿಕ ಫಲಿತಾಂಶ ವೀಕ್ಷಣೆ ಮಾಡಬಹುದು.
* ಫಲಿತಾಂಶದ ಪ್ರತಿಯನ್ನು ಪಿಡಿಎಫ್ ಡೌನ್ಲೋಡ್ ಮಾಡಿಕೊಳ್ಳಬಹುದು.
ಈ ಬಾರಿ ದ್ವಿತೀಯ ಪರೀಕ್ಷೆಗೆ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಣಿ ಮಾಡಿಕೊಂಡಿದ್ದರು. ಒಟ್ಟು 1,171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
ಇದೀಗ ಬಂದ ಮಾಹಿತಿ ಪ್ರಕಾರ, ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದೆ. 93.90 ಶೇಕಡಾ ಫಲಿತಾಂಶ ಪಡೆದು ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡರೆ, ದಕ್ಷಿಣ ಕನ್ನಡ ಜಿಲ್ಲೆ 93.57 ಶೇಕಡಾ ಫಲಿತಾಂಶದ ಮೂಲಕ ರಾಜ್ಯದಲ್ಲೇ ಎರಡನೇ ಸ್ಥಾನದಲ್ಲಿದೆ.
ಯಾದಗಿರಿ ಜಿಲ್ಲೆ 48.45 ಶೇಕಡಾ ಫಲಿತಾಂಶದ ಮೂಲಕ ರಾಜ್ಯಕ್ಕೆ ಕೊನೆಯ ಸ್ಥಾನ ಪಡೆದುಕೊಂಡಿದೆ. ಟಾಪ್ 10 ಸ್ಥಾನಗಳಲ್ಲಿ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ದಕ್ಷಿಣ, ಕೊಡಗು, ಬೆಂಗಳೂರು ಉತ್ತರ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ ಕ್ರಮವಾಗಿ ಪಡೆದುಕೊಂಡಿದೆ.
ಕಲಾ ವಿಭಾಗದಲ್ಲಿ ಬಳ್ಳಾರಿ ಮೂಲದ ಸಂಜನಾ ಬಾಯಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರರ. 600 ಅಂಕಗಳಲ್ಲಿ 597 ಅಂಕ ಪಡೆದಿದ್ದಾರೆ. ಇನ್ನು ಬಳ್ಳಾರಿಯ ನಿರ್ಮಲಾಗೆ 596 ಅಂಕಗಳು ಬಂದಿವೆ ಎಂದು ತಿಳಿದುಬಂದಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications