2nd PUC: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ ಬದಲಾವಣೆ; ಪರಿಷ್ಕೃತ ವೇಳಾಪಟ್ಟಿ ಪ್ರಕಟ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ದಿನಾಂಕದಲ್ಲಿ ಬದಲಾವಣೆ ಮಾಡಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದೆ.
ಈ ಹಿಂದೆ ಬಿಡುಗಡೆಗೊಳಿಸಿದ್ದ ದಿನಾಂಕ ಬದಲಾವಣೆ ಮಾಡಿದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಇದೀಗ ಹೊಸದಾಗಿ ಪ್ರಕಟಣೆಯನ್ನು ಹೊರಡಿಸಿದ್ದು, ಪರಿಷ್ಕೃತ ಪೂರಕ ಪರೀಕ್ಷೆ ವೇಳಾಪಟ್ಟಿಯ ಪ್ರಕಾರ ಮೇ 23ರಿಂದ ಜೂನ್ 3 ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಿಗದಿಯಾಗಿದೆ.

ಈ ಹಿಂದೆ ದಿನಾಂಕ ಮೇ 22, 2023ರಿಂದ ಜೂನ್ 2, 2023ರವರೆಗೆ ನಡೆಸಲು ಈಗಾಗಲೇ ವೇಳಾಪಟ್ಟಿ ಬಿಡುಗಡೆ ಮಾಡಲಾಗಿತ್ತು. ಆದರೆ ಸಿಇಟಿಯ ಕನ್ನಡ ಭಾಷಾ ಪರೀಕ್ಷೆಯನ್ನು ಮೇ 22, 2023ರಂದು ನಡೆಸುತ್ತಿರುವ ಕಾರಣ, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ ಬದಲಾವಣೆ ಮಾಡಲಾಗಿದೆ.
ಪರಿಷ್ಕೃತ ಪೂರಕ ಪರೀಕ್ಷೆ ವೇಳಾಪಟ್ಟಿ
ಮೇ 23: ಕನ್ನಡ, ಅರೇಬಿಕ್
ಮೇ 24: ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ
ಮೇ 25: ಇಂಗ್ಲಿಷ್
ಮೇ 26: ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ 27: ಇತಿಹಾಸ, ಸಂಖ್ಯಾಶಾಸ್ತ್ರ
ಮೇ 29: ಹಿಂದಿ
ಮೇ 30: ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
ಮೇ 31: ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
ಜೂನ್ 1: ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
ಜೂನ್ 2: ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
ಜೂನ್ 3: ಅರ್ಥಶಾಸ್ತ್ರ, ಜೀವಶಾಸ್ತ್ರ
ಪರಿಷ್ಕೃತ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಅಧಿಕೃತ ವೆಬ್ಸೈಟ್ https://kseab.karnataka.gov.in ರಲ್ಲಿ ವೀಕ್ಷಿಸಬಹುದು.
ಇನ್ನು ಪರೀಕ್ಷೆಯ ದಿನಾಂಕಗಳಂದು ವಿದ್ಯಾರ್ಥಿಗಳು ಎಂದಿನಂತೆ ಪರೀಕ್ಷೆ ಹಾಲ್ ಟಿಕೆಟ್ ಅನ್ನು ತಮ್ಮ ಕಾಲೇಜುಗಳಿಂದ ಪಡೆದು, ಕಡ್ಡಾಯವಾಗಿ ತೆಗೆದುಕೊಂಡು ಹೋಗಬೇಕು. ಪರೀಕ್ಷೆ ಪ್ರವೇಶ ಪತ್ರದಲ್ಲಿ ನೀಡಲಾದ ಸೂಚನೆಗಳನ್ನು ಓದಿಕೊಂಡು ಪರೀಕ್ಷೆ ಕೊಠಡಿಗೆ ಹಾಜರಾಗುವುದು.
-
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications