3.50 ಕೋಟಿ ಕದ್ದ ಜಿಪಂ ಮಾಜಿ ಸದಸ್ಯ ಸೇರಿ ಮೂವರನ್ನು 24 ಗಂಟೆಯಲ್ಲೇ ಹಿಡಿದ ಪೊಲೀಸರು!
ಬೀದರ್, ನವೆಂಬರ್ 30: ಉದ್ಯಮಿಯೊಬ್ಬರಿಂದ ಕಳ್ಳತನ ಮಾಡಿದ ಮೂವರು ಕಳ್ಳರನ್ನು 24 ಗಂಟೆಗಳಲ್ಲಿ ಬೀದರ್ ಪೊಲೀಸರು ಹಿಡಿದ್ದಿದ್ದಾರೆ. ಮತ್ತೋರ್ವ ಆರೋಪಿಗಾಗಿ ಬಲೆ ಬೀಸಿದ್ದಾರೆ.
ಬೀದರ್ನ ಬಸವಕಲ್ಯಾಣ ತಾಲೂಕಿನ ಹನುಮಂತವಾಡಿ ಗ್ರಾಮದ ಬಳಿ ಬುಧವಾರ ಆರೋಪಿಗಳು ಬಂದೂಕು ತೋರಿಸಿ ಉದ್ಯಮಿಯೊಬ್ಬರಿಂದ 3.50 ಕೋಟಿ ರೂ. ಕಳ್ಳತನ ಮಾಡಿದ್ದರು. ಈ ಸಂಬಂಧ ಬಸವಕಲ್ಯಾಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಮಾಶಕರ್ ಎಂಬ ಉದ್ಯಮಿಯೊಬ್ಬರು ತಮ್ಮ ಕಾರಿನಲ್ಲಿ ಮಹಾರಾಷ್ಟ್ರದ ಪಂಢರಪುರಕ್ಕೆ ತೆರಳುತ್ತಿದ್ದಾಗ ಬುಧವಾರ ಈ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ನಿಲ್ಲಿಸಿದಾಗ ನಾಲ್ವರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಆರೋಪಿಗಳಲ್ಲೊಬ್ಬ ಬಂದೂಕನ್ನು ಹೊರತೆಗೆದು ಉಮಾಶಂಕರ್ಗೆ ತೋರಿಸಿದನು. ಆಗ ಅವರು ವಿರೋಧಿಸಿದಾಗ ಗಾಳಿಯಲ್ಲಿ ಕೆಲವು ಸುತ್ತಿನ ಗುಂಡುಗಳನ್ನು ಹಾರಿಸಲಾಯಿತು. ಆರೋಪಿಗಳು ಕಾರನ್ನು ಶೋಧಿಸಿ 3.50 ಕೋಟಿ ರೂ.ಗಳಿದ್ದ ಬ್ಯಾಗ್ನೊಂದಿಗೆ ಪರಾರಿಯಾಗಿದರು.
ಉಮಾಶಂಕರ್ ತಕ್ಷಣ ಪೊಲೀಸರನ್ನು ಸಂಪರ್ಕಿಸಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಯಿತು. ದೂರುದಾರರು ನೀಡಿದ ವಿವರದ ಆಧಾರದ ಮೇಲೆ ಪೊಲೀಸರು ಜಿಲ್ಲೆಯ ಎಲ್ಲಾ ಘಟಕಗಳಿಗೆ ಮಾಹಿತಿ ರವಾನಿಸಿದ್ದು, ಹಲವು ವಾಹನಗಳನ್ನು ಶೋಧಿಸಿದರು.
ಬಳಿಕ ಗುರುವಾರ ಬೆಳ್ಳಂಬೆಳಗ್ಗೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದರು. ಬೀದರ್ ಪೊಲೀಸರು ಮೂವರನ್ನು ಬಂಧಿಸಿದ್ದು, ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ. ಬಂಧಿತರನ್ನು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಗುಂಡು ರೆಡ್ಡಿ, ವಿಜಯ್ ರೆಡ್ಡಿ ಮತ್ತು ಸಂಜಯ್ ರೆಡ್ಡಿ ಎಂದು ಗುರುತಿಸಲಾಗಿದೆ.
3.5 ಕೋಟಿಯಲ್ಲಿ 2.62 ಕೋಟಿ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಉಳಿದ ನಗದನ್ನು ಆರೋಪಿಗಳ ವಿಚಾರಣೆ ನಡೆಸುತ್ತಿದ್ದಾರೆ. ಉಮಾಶಂಕರ್ ಅವರು ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ನಗದು ಮೂಲದ ಬಗ್ಗೆಯೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
-
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ












Click it and Unblock the Notifications