ಮಂಡ್ಯ ಮೊರಾರ್ಜಿ ದೇಸಾಯಿ ಶಾಲೆಯ 3 ಮಕ್ಕಳನ್ನು ನೋಡಿದ್ದೀರಾ?
ಮಂಡ್ಯ,ಜನವರಿ, 22: 'ಹೆತ್ತವರು ಕೈಯಲ್ಲಿ ಫೋಟೋ ಹಿಡಿದು ನನ್ನ ಈ ಮಕ್ಕಳನ್ನು ಎಲ್ಲಿಯಾದರೂ ನೋಡಿದ್ದೀರಾ? ದಯವಿಟ್ಟು ಎಲ್ಲಿಯಾದರೆ ಕಂಡರೆ ಮರೆಯದೆ ನಮಗೆ ತಿಳಿಸಿ' ಎಂದು ಮಂಡ್ಯದ ಮೊರಾರ್ಜಿ ದೇಸಾಯಿ ಶಾಲೆಯಿಂದ ನಾಪತ್ತೆಯಾದ ಮಕ್ಕಳ ಪೋಷಕರು ಮಕ್ಕಳ ಹುಡುಕಾಟದಲ್ಲಿ ತೊಡಗಿದ್ದಾರೆ.
ಮಂಡ್ಯದ ತುಂಬಕೆರೆ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ರಂಜಿತ್ ಗೌಡ (13), ಎಸ್.ಆರ್.ದೀಕ್ಷಿತ್(13) ಹಾಗೂ ನಂದನ್ ಕುಮಾರ್(13) ಎಂಬ ಮೂವರು ಮಕ್ಕಳು ನಾಪತ್ತೆಯಾಗಿದ್ದು, ವಸತಿ ಶಾಲಾ ಶಿಕ್ಷಕರು ಮತ್ತು ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ.
ನಾಪತ್ತೆಯಾದ ರಂಜಿತ್, ಎಸ್.ಆರ್.ದೀಕ್ಷಿತ್ ಹಾಗೂ ನಂದನ್ ಕುಮಾರ್ ಮಂಡ್ಯದ ತುಂಬಕೆರೆ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು. ಓದಲು ಇಷ್ಟವಿಲ್ಲದ ಮಕ್ಕಳು ಬಹುಶಃ ಮಾತನಾಡಿಕೊಂಡೇ ಶಾಲೆಯಿಂದ ಹೊರ ಹೋಗಲು ನಿರ್ಧರಿಸಿ ಅಲ್ಲಿಂದ ಪರಾರಿಯಾಗಿದ್ದಾರೆ.

ಜ.19ರ ಮಂಗಳವಾರದಂದು ಬೆಳಗ್ಗೆ 8.30ರ ಸಮಯದಲ್ಲಿ ಬೆಳಗಿನ ಉಪಹಾರ ಮುಗಿಸಿ ಮೂತ್ರ ವಿಸರ್ಜನೆ ಮಾಡಿ ಬರುವುದಾಗಿ ಹೇಳಿ ಹೊರ ಹೋದ ವಿದ್ಯಾರ್ಥಿಗಳು ಮರಳಿ ಬಂದಿಲ್ಲ. ಬಹಳಷ್ಟು ಹೊತ್ತು ಕಾದರೂ ಸುಳಿವಿಲ್ಲ. ಹೀಗಾಗಿ ಪೋಷಕರಿಗೆ ದೂರವಾಣೆ ಕರೆ ಮಾಡಿ ವಿಚಾರಿಸಿದಾಗ ಅಲ್ಲಿಗೂ ಹೋಗಿಲ್ಲ ಎಂಬ ಉತ್ತರ ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಪೋಷಕರು ಭಯಭೀತರಾಗಿದ್ದು, ಮಕ್ಕಳನ್ನು ಹುಡುಕಲು ಮುಂದಾಗಿದ್ದಾರೆ. ಆದರೆ ಈ ವಿದ್ಯಾರ್ಥಿಗಳ ಬಗ್ಗೆ ಎಲ್ಲಿಯೂ ಸುಳಿವು ಸಿಕ್ಕಿಲ್ಲ. ಈ ಸಂಬಂಧ ಶಾಲಾ ಮುಖ್ಯ ಶಿಕ್ಷಕರು ನೀಡಿದ ದೂರಿನ ಮೇರೆಗೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.[ಹೆತ್ತವರ ಪ್ರೀತಿ ಕಳೆದುಕೊಂಡು ನಲುಗುತ್ತಿರುವ ಮಕ್ಕಳು]
ರಂಜಿತ್ ಗೌಡನ ಕುರಿತು ಮಾಹಿತಿ:
ರಂಜಿತ್ ಗೌಡ ಸುಮಾರು 3.5 ಅಡಿ ಎತ್ತರ, ಕೋಲುಮುಖ, ಎಣ್ಣೆಗೆಂಪು ಬಣ್ಣ, ತಲೆಯಲ್ಲಿ ಕೂದಲು ಕಡಿಮೆ ಇರುತ್ತದೆ. ತೆಳುವಾದ ಶರೀರ, ಕೆಂಪು ಟೀ ಶರ್ಟ್, ಕಪ್ಪು ಜೀನ್ಸ್ ಪ್ಯಾಂಟ್ ಧರಿಸಿದ್ದಾನೆ.

ದೀಕ್ಷಿತ್ ಎಸ್.ಆರ್ ಬಗ್ಗೆ ಮಾಹಿತಿ:
ದೀಕ್ಷಿತ್ ಎಸ್.ಆರ್. ಸುಮಾರು 4.5 ಅಡಿ ಎತ್ತರ, ಕ್ರೀಮ್ ಬಣ್ಣದ ಅರ್ಧ ತೋಳಿನ ಅಂಗಿ, ಹಾಗೂ ಕಾಫಿ ಬಣ್ಣದ ಪ್ಯಾಂಟ್, ಶಾಲಾ ಸಮವಸ್ತ್ರ ಧರಿಸಿರುತ್ತಾನೆ. ಹಣೆಯ ಮೇಲೆ ಹಳೆ ಗಾಯದ ಗುರುತು ಇದೆ.[ಅತ್ಯಾಚಾರ ಎಸಗಿದ ತಂದೆಗೆ ಮಕ್ಕಳ ನೋಡಲು ಅವಕಾಶ ನೀಡಿದ್ದು ಸರಿಯೇ?]

ನಂದನ್ ಕುಮಾರ್ ಕುರಿತು ಮಾಹಿತಿ
ನಂದನ್ ಕುಮಾರ್ ಸುಮಾರು 5 ಅಡಿ ಎತ್ತರ, ಕೋಲು ಮುಖ, ಗೋಧಿ ಬಣ್ಣ, ಕ್ರಾಪ್ ಕೂದಲು ಬಾಚಿರುತ್ತಾನೆ. ತೆಳುವಾದ ಶರೀರ, ಕ್ರೀಮ್ ಬಣ್ಣದ ಅರ್ಧ ತೋಳಿನ ಅಂಗಿ, ಕಾಫಿ ಬಣ್ಣದ ಪ್ಯಾಂಟ್, ಶಾಲಾ ಸಮವಸ್ತ್ರ ಧರಿಸಿದ್ದಾನೆ. ಮೂವರು ಕನ್ನಡ ಮಾತನಾಡುತ್ತಾರೆ. ಇದಿಷ್ಟು ಚಹರೆ ಹೊಂದಿರುವ ಮಕ್ಕಳು ಕಂಡು ಬಂದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದಾಗಿದೆ.[ಆತ್ಮರಕ್ಷಕ ಕೈಗಡಿಯಾರ, ಇನ್ಮುಂದೆ ನಿಮ್ಮ ಮಕ್ಕಳು ಸೇಫ್]
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications