ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೂವರು ಕಾಂಗ್ರೆಸ್ ಶಾಸಕರ ರಾಜೀನಾಮೆ ಸುದ್ದಿ ಠುಸ್!

|
Google Oneindia Kannada News

ಬೆಂಗಳೂರು, ಜುಲೈ 03 : ಕರ್ನಾಟಕದ ಮೂವರು ಕಾಂಗ್ರೆಸ್ ಶಾಸಕರು ಬುಧವಾರ ರಾಜೀನಾಮೆ ನೀಡಲಿದ್ದಾರೆ ಎಂದು ಹರಿದಾಡುತ್ತಿದ್ದ ಸುದ್ದಿಗಳು ಠುಸ್ ಆಗಿವೆ. ಯಾವ ಶಾಸಕರು ರಾಜೀನಾಮೆ ಕೊಡಲು ಇಂದು ವಿಧಾನಸೌಧದ ಕಡೆ ತಲೆ ಹಾಕಲಿಲ್ಲ.

ಕರ್ನಾಟಕ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಅವರು 12 ಗಂಟೆ ಹೊತ್ತಿಗೆ ವಿಧಾನಸೌಧಕ್ಕೆ ಆಗಮಿಸಿದರು. ರಾಜೀನಾಮೆ ನೀಡಿರುವ ಶಾಸಕರಾದ ಆನಂದ್‌ಸಿಂಗ್ ಹಾಗೂ ರಮೇಶ್ ಜಾರಕಿಹೊಳಿ ಅವರು ಸ್ಪೀಕರ್ ಭೇಟಿ ಮಾಡಲಿದ್ದಾರೆ ಎಂಬ ವದಂತಿ ವಿಧಾನಸೌಧದ ಮೊಗಸಾಲೆಯಲ್ಲಿ ಹಬ್ಬಿತ್ತು.

ಇಬ್ಬರು ಕಾಂಗ್ರೆಸ್ ಶಾಸಕರ ರಾಜೀನಾಮೆ : ಯಾರು, ಏನು ಹೇಳಿದರು?ಇಬ್ಬರು ಕಾಂಗ್ರೆಸ್ ಶಾಸಕರ ರಾಜೀನಾಮೆ : ಯಾರು, ಏನು ಹೇಳಿದರು?

ಸ್ಪೀಕರ್ ಬಳಿ ಮಾಧ್ಯಮದವರು ಶಾಸಕರ ರಾಜೀನಾಮೆ ಕುರಿತು ಪ್ರಶ್ನಿಸಿದಾಗ ಅವರು ಅಸಮಾಧಾನಗೊಂಡರು. 'ನಾನು ಸಭಾಧ್ಯಕ್ಷ, ಗೌರವಯುತ ಜಾಗದಲ್ಲಿದ್ದೇನೆ. ನನ್ನ ಬಳಿ ಶಾಸಕರು ರಾಜೀನಾಮೆ ನೀಡಿದ್ದಾರಾ? ಎಂಬಂತಹ ಪ್ರಶ್ನೆ ಕೇಳುವುದು ಸರಿಯಲ್ಲ' ಎಂದು ಹರಿಹಾಯ್ದರು.

ಎಲ್ಲರ ಆಟ ನನಗೆ ಗೊತ್ತಿದೆ: ಸಚಿವ ಡಿಕೆ ಶಿವಕುಮಾರ್ಎಲ್ಲರ ಆಟ ನನಗೆ ಗೊತ್ತಿದೆ: ಸಚಿವ ಡಿಕೆ ಶಿವಕುಮಾರ್

ವಿಜಯನಗರ ಶಾಸಕ ಆನಂದ್ ಸಿಂಗ್ ಮತ್ತು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಆನಂದ್ ಸಿಂಗ್ ಜೊತೆ ಖುದ್ದಾಗಿ ಮಾತುಕತೆ ನಡೆಸುತ್ತೇನೆ ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

'ಸರ್ಕಾರಕ್ಕೆ ತೊಂದರೆ ಇಲ್ಲ, ಶಾಸಕರಿಗೆ ಕುಂದು ಕೊರತೆಗಳಿವೆ' : ಡಿಕೆಶಿ'ಸರ್ಕಾರಕ್ಕೆ ತೊಂದರೆ ಇಲ್ಲ, ಶಾಸಕರಿಗೆ ಕುಂದು ಕೊರತೆಗಳಿವೆ' : ಡಿಕೆಶಿ

ಮೂವರು ಶಾಸಕರ ರಾಜೀನಾಮೆ

ಮೂವರು ಶಾಸಕರ ರಾಜೀನಾಮೆ

ಬುಧವಾರ ಶಾಸಕರಾದ ಬಿ.ಸಿ.ಪಾಟೀಲ್, ಮಹೇಶ್ ಕುಮಟಳ್ಳಿ ಸೇರಿದಂತೆ ಮೂವರು ಶಾಸಕರು ಕೂಡಾ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿ ಮಂಗಳವಾರದಿಂದ ಹಬ್ಬಿತ್ತು. ಆದರೆ, ಇಂದು ಆ ಸುದ್ದಿಗಳಿಗೆ ತೆರೆ ಬಿದ್ದಿದೆ.

ಆನಂದ್ ಸಿಂಗ್ ರಾಜೀನಾಮೆ ಬಗ್ಗೆ ವ್ಯಂಗ್ಯ

ಆನಂದ್ ಸಿಂಗ್ ರಾಜೀನಾಮೆ ಬಗ್ಗೆ ವ್ಯಂಗ್ಯ

'ವಿಜಯನಗರ ಶಾಸಕ ಆನಂದ್‌ ಸಿಂಗ್ ಅವರು ನನ್ನ ಕಛೇರಿಗೆ ರಾಜೀನಾಮೆ ತಲುಪಿಸಿದ್ದಾರೆ. ಹಾಗೆಯೇ ರಾಜ್ಯಪಾಲರನ್ನೂ ಭೇಟಿ ಮಾಡಿ ರಾಜೀನಾಮೆ ಪತ್ರ ಕೊಟ್ಟಿದ್ದಾರೆ. ಪುರುಸೊತ್ತು ಇದ್ದರೆ ರಾಷ್ಟ್ರಪತಿಗಳನ್ನೂ ಭೇಟಿ ಮಾಡಿ ರಾಜೀನಾಮೆ ಸಲ್ಲಿಸಲಿ' ಎಂದು ಸ್ಪೀಕರ್ ರಮೇಶ್ ಕುಮಾರ್ ವ್ಯಂಗ್ಯವಾಡಿದರು.

ಶಾಸಕರಿಗೆ ಜವಾಬ್ದಾರಿ ಇರಬೇಕು

ಶಾಸಕರಿಗೆ ಜವಾಬ್ದಾರಿ ಇರಬೇಕು

ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಅವರು ಫ್ಯಾಕ್ಸ್ ಮೂಲಕ ರಾಜೀನಾಮೆ ಕಳಿಸಿದ್ದಾರೆ ಎಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಮೇಶ್ ಕುಮಾರ್, 'ಶಾಸಕರಾದವರಿಗೆ ಜವಾಬ್ದಾರಿ ಇರಬೇಕು. ಯಾವ ಕೆಲಸ ಮಾಡುವಾಗ ಹೇಗೆ ನಡೆದುಕೊಳ್ಳಬೇಕು? ಎಂಬುದರ ಅರಿವು ಹೊಂದಿರಬೇಕು' ಎಂದರು.

ಕರೆಸಿ ಮಾತನಾಡುತ್ತೇನೆ

ಕರೆಸಿ ಮಾತನಾಡುತ್ತೇನೆ

'ಆನಂದ್ ಸಿಂಗ್ ಅವರು ನನ್ನ ಕಛೇರಿಗೆ ತಲುಪಿಸಿರುವ ರಾಜೀನಾಮೆ ಪತ್ರವನ್ನು ಇಟ್ಟುಕೊಂಡು ಜನರನ್ನು ಕರೆಸಿ ಅವರ ಸಮ್ಮುಖದಲ್ಲೇ ಅದರ ವಿಚಾರಣೆ ನಡೆಸುತ್ತೇನೆ' ಎಂದು ಸ್ಪೀಕರ್ ರಮೇಶ್ ಕುಮಾರ್ ಹೇಳಿದರು.

English summary
Rumors spared that Three Karnataka Congress MLAs will resign on July 3, 2019. The news is fake no one not resigned.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X