ಚಿಕ್ಕಮಗಳೂರು: ಮರಳು ದಿಬ್ಬ ಕುಸಿದು ಮೂವರು ಸಾವು
ಚಿಕ್ಕಮಗಳೂರು, ಮೇ 11 : ಬುಧವಾರ ಮಧ್ಯರಾತ್ರಿ ಅಕ್ರಮವಾಗಿ ಮರಳು ತುಂಬುವಾಗ ದಿಬ್ಬ ಕುಸಿದು ಮೂವರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ರಂಗಾಪುರದಲ್ಲಿ ನಡೆದಿದೆ.
ತರೀಕೆರೆ ತಾಲೂಕಿನ ಗೇರಮರಡಿ ನಿವಾಸಿಗಳಾದ ಮಂಜುನಾಥ್, ನವೀನ್ ಹಾಗೂ ಅರುಣ್ ಮೃತ ದುರ್ದೈವಿಗಳು. ಮೃತಪಟ್ಟವರು ಮೂಲತಃ ಚಿತ್ರದುರ್ಗ ಜಿಲ್ಲೆಯವರಾಗಿದ್ದು ತರೀಕೆರೆಗೆ ಬಂದು ನೆಲೆಸಿದ್ದರು.

8 ಜನರ ಮೇಲೂ ದಿಬ್ಬ ಕುಸಿದಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರಗೊಂಡಿದ್ದಾರೆ. ಗಾಯಾಳುಗಳನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡು ಟ್ರ್ಯಾಕ್ಟರ್ ವಶಪಡಿಸಿಕೊಂಡಿರೋ ಪೊಲೀಸರು ತಲೆಮರೆಸಿಕೊಂಡಿರೋ ಟ್ರ್ಯಾಕ್ಟರ್ ಮಾಲೀಕ ರವಿ ಹಾಗೂ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಆನಂದ್ ಎಂಬುವರಿಗೆ ಹುಡುಕಾಟ ನಡೆಸಿದ್ದಾರೆ.












Click it and Unblock the Notifications