ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನಕಪುರ ಮಾರ್ಗದ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ 3 ಅಡಿ ನೀರು

By ರಾಮನಗರ ಪ್ರತಿನಿಧಿ
|
Google Oneindia Kannada News

ರಾಮನಗರ, ಅಕ್ಟೋಬರ್ 11: ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಸುರಿದ ಜೋರು ಮಳೆಯಿಂದ ಬಹುತೇಕ ಕೆರೆ- ಕಟ್ಟೆಗಳು ಭರ್ತಿಯಾಗಿ ಕೋಡಿ ಹರಿದಿವೆ. ಕನಕಪುರ ತಾಲೂಕಿನ ಹಾರೋಹಳ್ಳಿ ಸಮೀಪದ ಗಾಣಾಳುದೊಡ್ಡಿ ಕೆರೆ ಕೋಡಿ ಒಡೆದ ಪರಿಣಾಮ ಬೆಂಗಳೂರು- ಕನಕಪುರ-ಮೈಸೂರು ಹೆದ್ದಾರಿ ನದಿಯಂತಾಗಿದೆ.

ಭೈರವಾಡಗಿಯಲ್ಲಿ ಗೋಡೆ ಕುಸಿದು ತಾಯಿ-ಮಗಳ ಸಾವುಭೈರವಾಡಗಿಯಲ್ಲಿ ಗೋಡೆ ಕುಸಿದು ತಾಯಿ-ಮಗಳ ಸಾವು

ರಸ್ತೆಯಲ್ಲಿ ಮೂರು ಅಡಿಯಷ್ಟು ನೀರು ಹರಿಯುತ್ತಿದೆ. ಇದರಿಂದಾಗಿ ಕನಕಪುರ ಮಾರ್ಗದ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಕೆರೆ ಕೋಡಿ ಸಮೀಪ ನಾಲ್ಕು ಅಡಿಯಷ್ಟು ನೀರು ಹರಿಯುತ್ತಿದ್ದು, ರಸ್ತೆಯ ಎರಡೂ ಕಡೆ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಆಗಿದೆ.

3 feet water on Bengaluru- Mysuru highway

ನೀರು ಸರಾಗವಾಗಿ ಹರಿದು ಹೊರಹೋಗದ ಪರಿಣಾಮ ರಸ್ತೆಯ ತುಂಬ ನಿಂತಿರುವುದು ಕಂಡುಬಂದಿದೆ. ಶಾಲೆ- ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ಕೆಲಸಗಳಿಗೆ ಹೊರಟ ಜನರಿಗೆ ತೊಂದರೆಯಾಗಿದೆ. ಸ್ಥಳಕ್ಕೆ ಹಾರೋಹಳ್ಳಿ ಪೋಲಿಸರು ಭೇಟಿ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ನೀರಿನ ಹರಿವು ಕಡಿಮೆಯಾಗುವ ತನಕ ಸಂಚಾರ ನಿಲ್ಲಿಸಲಾಗಿದೆ.

English summary
4 feet water on Bengaluru- Mysuru highway, Kanakapura. Traffic jam and people not able to travel on this road. Tuesday heavy rain in Ramanagara district caused this situation.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X