ರಾಮನಗರದಲ್ಲಿ ಮೂವರು ಹೆದ್ದಾರಿ ದರೋಡೆಕೋರರ ಬಂಧನ
ಕೆ.ಕೆ.ಧರ್ಮ, ಯೋಗೇಶ್ ಮತ್ತು ಶ್ರೀನಿವಾಸ್ ಬಂಧಿತ ದರೋಡೆಕೋರರಾಗಿದ್ದು, ತಲೆಮರೆಸಿಕೊಂಡಿರುವ ಪೃಥ್ವಿ ಮತ್ತು ರಾಜು ಎಂಬಿಬ್ಬರ ಬಗ್ಗೆ ಮಾಹಿತಿಯಿದ್ದು, ಸದ್ಯದಲ್ಲೇ ಬಂಧಿಸುವುದಾಗಿ ಪೊಲೀಸರು ಹೇಳಿದ್ದಾರೆ.
ಮಾಗಡಿ, ಮೇ 11: ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳನ್ನು ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ ಐವರ ತಂಡದ ಪೈಕಿ ಮೂವರನ್ನು ಮಾಗಡಿ ಪೊಲೀಸರು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಇನ್ನಿಬ್ಬರ ಪತ್ತೆಗೆ ಬಲೆಬೀಸಲಾಗಿದೆ.
ಕೆ.ಕೆ.ಧರ್ಮ, ಯೋಗೇಶ್ ಮತ್ತು ಶ್ರೀನಿವಾಸ್ ಬಂಧಿತ ದರೋಡೆಕೋರರಾಗಿದ್ದು, ತಲೆಮರೆಸಿಕೊಂಡಿರುವ ಪೃಥ್ವಿ ಮತ್ತು ರಾಜು ಎಂಬಿಬ್ಬರ ಬಗ್ಗೆ ಮಾಹಿತಿಯಿದ್ದು, ಸದ್ಯದಲ್ಲೇ ಬಂಧಿಸುವುದಾಗಿ ಪೊಲೀಸರು ಹೇಳಿದ್ದಾರೆ.

ಈ ಐದು ಮಂದಿ ತಂಡ ಕಟ್ಟಿಕೊಂಡು ರಾತ್ರಿ ಹೊತ್ತು ಹೆದ್ದಾರಿಯಲ್ಲಿ ಸಾಗುವ ವಾಹನಗಳನ್ನು ತಡೆದು, ಪ್ರಯಾಣಿಕರನ್ನು ಬೆದರಿಸಿ ಅವರಿಂದ ಚಿನ್ನ, ಹಣ, ಮೊಬೈಲ್ಗಳನ್ನು ಕಿತ್ತುಕೊಳ್ಳುತ್ತಿದ್ದರು ಎನ್ನಲಾಗಿದೆ.
ಇತ್ತೀಚೆಗೆ ರಾತ್ರಿ 9 ಗಂಟೆ ಸಮಯದಲ್ಲಿ ರಾಷ್ಟ್ರೀಯ ಹೆದ್ದಾರಿ ದಾಬಸ್ಪೇಟೆ ರಸ್ತೆಯ ರಂಗನಬೆಟ್ಟದ ಕ್ರಾಸ್ ಬಳಿ ದರೋಡೆ ಮಾಡಲು ಈ 5 ಮಂದಿ ಹೊಂಚು ಹಾಕುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಬಂದಿತ್ತು. ಹೀಗಾಗಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಐದು ಮಂದಿ ಪೈಕಿ ಇಬ್ಬರು ತಪ್ಪಿಸಿಕೊಂಡು ಮೂವರು ಸಿಕ್ಕಿ ಬಿದ್ದಿದ್ದರು.
ಕೂಡಲೇ ಅವರನ್ನು ವಶಕ್ಕೆ ಪಡೆದು ಅವರಲ್ಲಿದ್ದ ಮೂರು ಚಿನ್ನದ ಸರ, ಮೂರು ಚಿನ್ನದ ಉಂಗುರಗಳು ಮತ್ತು ಹತ್ತು ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ದರೋಡೆ ಕೃತ್ಯಕ್ಕೆ ಬಳಸಿದ್ದ ಕಾರು, ಕಾರಿನಲ್ಲಿದ್ದ ಮಚ್ಚು, ಲಾಂಗು, ಮುಖವಾಡಗಳು, ಕಾರದ ಪುಡಿ ಇತರೆ ವಸ್ತುಗಳನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications