IAS transfer; ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಡಿಸೆಂಬರ್ 20; ಕರ್ನಾಟಕ ಸರ್ಕಾರ ಮತ್ತೆ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ವಿವಿಧ ಇಲಾಖೆಗಳ ನಿರ್ದೇಶಕರು, ಸರ್ಕಾರದ ಕಾರ್ಯದರ್ಶಿಗಳನ್ನು ವರ್ಗಾವಣೆಗೊಳಿಸಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.
ಬುಧವಾರ ಕರ್ನಾಟಕ ಸರ್ಕಾರ ಮೂವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಶ್ರೀಕರ್ ಎಂ. ಎಸ್., ಕನಗವಲ್ಲಿ ಎಂ. ಮತ್ತು ವಸಿರೆಡ್ಡಿ ವಿಜಯ ಜ್ಯೋತ್ಸ್ನಾ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

* ಶ್ರೀಕರ್ ಎಂ. ಎಸ್. (ಕೆಎನ್ 1999). ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಆಡಳಿತ ಸುಧಾರಣೆ), ಬೆಂಗಳೂರು ಸರ್ಕಾರದ ಕಾರ್ಯದರ್ಶಿಯಾಗಿದ್ದ ಶ್ರೀಕರ್ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದ ತನಕ ನೇಮಕ ಮಾಡಲಾಗಿದೆ. ಈ ಹುದ್ದೆಯನ್ನು ಹೆಚ್ಚುವರಿಯಾಗಿ ನೋಡಿಕೊಳ್ಳುತ್ತಿದ್ದ ಉಮಾಶಂಕರ್ ಎಸ್. ಆರ್. ಬಿಡುಗಡೆಗೊಳಿಸಲಾಗಿದೆ.
* ಕನಗವಲ್ಲಿ ಎಂ. (ಕೆಎನ್: 2010). ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ನಿರ್ದೇಶಕರಾಗಿದ್ದ ಕನಗವಲ್ಲಿ ಅವರನ್ನು ವ್ಯವಸ್ಥಾಪಕ ನಿರ್ದೇಶಕರು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಬೆಂಗಳೂರು ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಶ್ರೀವಿದ್ಯಾ ಪಿ. ಐ. ಅವರನ್ನು ಬಿಡುಗಡೆಗೊಳಿಸಲಾಗಿದೆ.
* ವಸಿರೆಡ್ಡಿ ವಿಜಯ ಜ್ಯೋತ್ಸ್ನಾ (ಕೆಎನ್: 2010). ಹುದ್ದೆಯ ನಿರೀಕ್ಷೆಯಲ್ಲಿದ್ದರು. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದ ತನಕ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಈ ಸ್ಥಾನದಲ್ಲಿದ್ದ ಕನಗವಲ್ಲಿ ಎಂ. ಅವರನ್ನು ವರ್ಗಾವಣೆ ಮಾಡಲಾಗಿದೆ.
ಕರ್ನಾಟಕದಲ್ಲಿ ಮೇ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ಮುಗಿದು ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಹೊಸ ಸರ್ಕಾರ ಬಂದ ಮೇಲೆ ಸಹಜವಾಗಿಯೇ ಅಧಿಕಾರಿಗಳ ವರ್ಗಾವಣೆಯಾಗುತ್ತಿದೆ. ಆಡಳಿತ ಯಂತ್ರಕ್ಕೆ ಚುರುಕುಮುಟ್ಟಿಸಲು ಸರ್ಕಾರ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಲೇ ಇದೆ.
ಆದರೆ ಈ ಬಾರಿ ಯಾವುದೇ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿಲ್ಲ. ಕಳೆದ ವಾರದ ಸರ್ಕಾರ ತುಮಕೂರು ಜಿಲ್ಲಾಧಿಕಾರಿ ವರ್ಗಾವಣೆ ಮಾಡಿತ್ತು. ಈಗ ಇಲಾಖೆಗಳ ಉನ್ನತ ಹುದ್ದೆಗಳ ಅಧಿಕಾರಿಗಳನ್ನು ಮಾತ್ರ ವರ್ಗಾವಣೆಗೊಳಿಸಿದೆ.
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Karnataka: ರಾಜ್ಯದಲ್ಲಿ ಹೆಚ್ಚಾಯ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ: 3 ವರ್ಷದಲ್ಲಿ 27 ಸಾವು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ












Click it and Unblock the Notifications