Get Updates
Get notified of breaking news, exclusive insights, and must-see stories!

KAS Officers Transfer: ರಾಜ್ಯ ಸರ್ಕಾರದಿಂದ ಮೂವರು ಕೆಎಎಸ್‌ ಅಧಿಕಾರಿಗಳ ದಿಢೀರ್ ವರ್ಗಾವಣೆ

KAS Officer Transfer: ರಾಜ್ಯ ಸರ್ಕಾರ ಆಗಾಗ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡುತ್ತಲಿರುತ್ತದೆ. ಹಾಗೆಯೇ ಇದೀಗ ಮತ್ತೆ ಮೂವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರು ಎಲ್ಲಿಗೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಸ್ಥಳ ನಿರೀಕ್ಷೆಯಲ್ಲಿದ್ದ ಅಧಿಕಾರಿಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

3 KAS Officers Sudden Transfer in Karnataka Know details

ಯಾರು ಎಲ್ಲಿಗೆ ವರ್ಗಾವಣೆ?

* ಎಂ.ರಾಚಪ್ಪ, ಕೆಎಎಸ್ ಅಧಿಕಾರಿ - ಅಪರ ಆಯುಕ್ತರು (ಕಂದಾಯ) ಬೆಂಗಳೂರು ದಕ್ಷಿಣ ನಗರ ಪಾಲಿಕೆ, ಬೆಂಗಳೂರು - ಖಾಲಿ ಹುದ್ದೆ

* ರವೀಂದ್ರ ಕರಲಿಂಗಣ್ಣವರ್, ಕೆಎಎಸ್ ಅಧಿಕಾರಿ - ಉಪ ಆಯುಕ್ತರು (ಆಡಳಿತ) ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಬೆಂಗಳೂರು - ಖಾಲಿ ಹುದ್ದೆ

* ಸೈದಾ ಆಫ್ರೀನ್ ಭಾನು ಎಸ್, ಬಳ್ಳಾರಿ, ಕೆಎಎಸ್ ಅಧಿಕಾರಿ - ಉಪ ಆಯುಕ್ತರು (ಮಾಹಿತಿ ತಂತ್ರಜ್ಞಾನ), ಬೆಂಗಳೂರು ಪಶ್ಚಿಮ ನಗರ ಪಾಲಿಕೆ, ಬೆಂಗಳೂರು - ಖಾಲಿ ಹುದ್ದೆ

ಐಎಎಸ್ ಅಧಿಕಾರಿಗಳ ವರ್ಗಾವಣೆ: ಇತ್ತೀಗಷ್ಟೇ ದಿಢೀರ್ ಐದು ಮಂದಿ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಿ.ರಂದೀಪ್ ಅವರಿಗೆ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ಇಲಾಖೆಯ ನಿರ್ದೇಶಕ ನಿತೇಶ್ ಪಾಟೀಲ್ ಅವರನ್ನು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ಹಾಗೂ ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಆರ್.ರಾಮಚಂದ್ರನ್ ಅವರನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‍ನ ಕಾರ್ಯಕಾರಿ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.

ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿ ಇದ್ದ ಡಾ.ಸತೀಶ ಬಿ.ಸಿ. ಅವರನ್ನು ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯ ನಿರ್ದೇಶಕರನ್ನಾಗಿ, ಡಾ.ಎಂ.ಎಸ್.ದಿವಾಕರ್ ಅವರನ್ನು ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜೊತೆಗೆ, ಅಟಲ್ ಜನಸ್ನೇಹಿ ಕೇಂದ್ರದ ನಿರ್ದೇಶಕರ ಹೆಚ್ಚುವರಿ ಜವಾಬ್ದಾರಿಯನ್ನು ದಿವಾಕರ್ ಅವರಿಗೆ ನೀಡಲಾಗಿದೆ.

ಯಾರಿಗೆ ಯಾವ ಹುದ್ದೆ ಜವಾಬ್ದಾರಿ?

* ಡಿ.ರಂದೀಪ್‌: ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹೆಚ್ಚುವರಿ ಹುದ್ದೆ ಜವಾಬ್ದಾರಿ
* ನಿತೇಶ್‌ ಪಾಟೀಲ್‌: ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ
* ಆರ್‌.ರಾಮಚಂದ್ರನ್‌: ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಕಾರ್ಯಕಾರಿ ನಿರ್ದೇಶಕ
* ಡಾ. ಬಿ.ಸಿ.ಸತೀಶ: ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯ ನಿರ್ದೇಶಕ
* ಎಂಎಸ್‌ ದಿವಾಕರ್‌: ಕೆಎಸ್‌ಎನ್‌ಡಿಎಂಸಿ ಜೊತೆಗೆ ಅಟಲ್‌ ಜನ ಸ್ನೇಹಿ ಕೇಂದ್ರದ ನಿರ್ದೇಶಕ ಹೆಚ್ಚುವರಿ ಹುದ್ದೆಯ ಜವಾಬ್ದಾರಿ ವಹಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+