ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಬಜೆಟ್; ಕರ್ನಾಟಕಕ್ಕೆ ಮೂರು ಹೊಸ ರೈಲು ಮಾರ್ಗ

|
Google Oneindia Kannada News

ಬೆಂಗಳೂರು, ಫೆಬ್ರವರಿ 09 : ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಮೂರು ನೂತನ ರೈಲು ಮಾರ್ಗವನ್ನು ನೀಡಲಾಗಿದೆ. ಬಹುನಿರೀಕ್ಷಿತ ಕುಶಾಲನಗರ- ಮೈಸೂರು ರೈಲು ಮಾರ್ಗಕ್ಕೂ ಕೇಂದ್ರ ಒಪ್ಪಿಗೆ ಕೊಟ್ಟಿದೆ.

ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಈ ಕುರಿತು ಹೇಳಿಕೆ ನೀಡಿದ್ದಾರೆ. "ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕದ ರೈಲು ಯೋಜನೆಗಳಿಗೆ ಕಳೆದ ವರ್ಷದ ಬಜೆಟ್‌ಗಿಂತ ಹೆಚ್ಚು ಅನುದಾನ ನೀಡಲಾಗಿದೆ. ರಾಜ್ಯಕ್ಕೆ ಒಟ್ಟು 3085 ಕೋಟಿ ಅನುದಾನ ಸಿಕ್ಕಿದೆ" ಎಂದರು.

ಕ್ಯಾಂಟೀನ್‌ ಆಗಿ ಬದಲಾದ ನಿರುಪಯುಕ್ತ ರೈಲು ಬೋಗಿ ಕ್ಯಾಂಟೀನ್‌ ಆಗಿ ಬದಲಾದ ನಿರುಪಯುಕ್ತ ರೈಲು ಬೋಗಿ

ಬಜೆಟ್‌ನಲ್ಲಿ ಬೆಳಗಾವಿ-ಧಾರವಾಡ, ಮೈಸೂರು-ಕುಶಾಲನಗರ, ಶಿಕಾರಿಪುರ-ರಾಣೆಬೆನ್ನೂರು ನೂತನ ರೈಲು ಮಾರ್ಗಗಳು ರಾಜ್ಯಕ್ಕೆ ಸಿಕ್ಕಿವೆ. ಶೀಘ್ರದಲ್ಲೇ ಈ ಯೋಜನೆಯ ಕಾಮಗಾರಿಗಳು ಆರಂಭವಾಗಲಿವೆ.

 ಕೋಲಾರಕ್ಕಿಲ್ಲ ರೈಲ್ವೆ ಕೋಚ್ ಫ್ಯಾಕ್ಟರಿ; ಸುರೇಶ್ ಅಂಗಡಿ ಹೇಳಿದ್ದೇನು? ಕೋಲಾರಕ್ಕಿಲ್ಲ ರೈಲ್ವೆ ಕೋಚ್ ಫ್ಯಾಕ್ಟರಿ; ಸುರೇಶ್ ಅಂಗಡಿ ಹೇಳಿದ್ದೇನು?

3 New Railway Line For Karnataka

ಮೂರು ನೂತನ ರೈಲು ಮಾರ್ಗದ ಜೊತೆ 6 ಹೊಸ ರೈಲುಗಳನ್ನು ಕರ್ನಾಟಕಕ್ಕೆ ನೀಡಲಾಗಿದೆ. ಯಾವ ಮಾರ್ಗದಲ್ಲಿ ಹೊಸ ರೈಲುಗಳನ್ನು ಓಡಿಸಬೇಕು ಎಂದು ಶೀಘ್ರದಲ್ಲಿಯೇ ತೀರ್ಮಾನಿಸಲಾಗುತ್ತದೆ.

ಕರ್ನಾಟಕದ 3 ಸಾವಿರ ಉದ್ಯೋಗಕ್ಕೆ ಕತ್ತರಿ ಹಾಕಿದ ಕೇಂದ್ರ ಕರ್ನಾಟಕದ 3 ಸಾವಿರ ಉದ್ಯೋಗಕ್ಕೆ ಕತ್ತರಿ ಹಾಕಿದ ಕೇಂದ್ರ

ರೈಲು ಮಾರ್ಗದ ಜೊತೆಗೆ ಮೈಸೂರಿನ ನಾಗನಹಳ್ಳಿಯಲ್ಲಿ ಸ್ಯಾಟಲೈಟ್ ರೈಲ್ವೆ ನಿಲ್ದಾಣ ಸ್ಥಾಪಿಸಲು ಅನುಮೋದನೆ ಸಿಕ್ಕಿದೆ. ಶಿವಮೊಗ್ಗದಲ್ಲಿ ಕೋಚ್ ಡಿಪೋವನ್ನು ಸ್ಥಾಪಿಸಲು ಸಹ ಬಜೆಟ್‌ನಲ್ಲಿ ಒಪ್ಪಿಗೆ ಕೊಡಲಾಗಿದೆ.

ಕೋಲಾರಕ್ಕೆ ಮಂಜೂರಾಗಿದ್ದ ರೈಲ್ವೆ ಕೋಚ್ ಫ್ಯಾಕ್ಟರಿ ಬದಲು ರೈಲ್ವೆ ವರ್ಕ್ ಶಾಪ್ ನಿರ್ಮಾಣ ಮಾಡಲು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಇದಕ್ಕಾಗಿ 495 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿ ಮೀಸಲಿಡಲಾಗಿದೆ.

"2022ರೊಳಗೆ ಕರ್ನಾಟಕದ ಎಲ್ಲಾ ಮಾರ್ಗದ ಜೋಡಿ ಹಳಿ ಕಾಮಗಾರಿ, ವಿದ್ಯುದೀಕರಣ ಕಾಮಗಾರಿಯನ್ನು ಪೂರ್ಣಗೊಳಿಸಲಾಗುತ್ತದೆ. ಹುಬ್ಬಳ್ಳಿ-ಬೆಂಗಳೂರು ನಡುವಿನ ರೈಲು ಪ್ರಯಾಣದ ಅವಧಿಯನ್ನು 5 ಗಂಟೆಗೆ ಇಳಿಸಲಾಗುತ್ತದೆ" ಎಂದು ಸುರೇಶ್ ಅಂಗಡಿ ಮಾಹಿತಿ ನೀಡಿದರು.

English summary
In the union budget 2020 Karnataka get the 3 new railway line. Belagavi-Dharwad direct railway line also included in 3 lines.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X