BIG BREAKING: ಸಿಎಂ ಗೃಹ ಕಚೇರಿ ಕೃಷ್ಣಾ ಸಿಬ್ಬಂದಿಗೆ ಕೊರೊನಾ ವೈರಸ್ ಶಂಕೆ?
ಬೆಂಗಳೂರು, ಜೂ. 19:ಇಡೀ ಜಗತ್ತಿಗೆ ಸಂಚಕಾರ ತಂದಿರುವ ಕೊರೊನಾವೈರಸ್ ವಿಕಾಸಸೌಧದ ಸಿಬ್ಬಂದಿಯೊಬ್ಬರಲ್ಲಿ ದೃಢಪಟ್ಟಿತ್ತು. ಇದೀಗ ಸಿಎಂ ಗೃಹಕಚೇರಿ ಸಿಬ್ಬಂದಿಗೆ ಕೋವಿಡ್ ಶಂಕೆ ವ್ಯಕ್ತವಾಗಿದೆ. ಇದೇ ಹಿನ್ನೆಲೆಯಲ್ಲಿ ಸಿಎಂ ಗೃಹಕಚೇರಿ ಕೃಷ್ಣಾ ಸೇರಿದಂತೆ ಬೆಂಗಳೂರಿನಲ್ಲಿರುವ ಎಲ್ಲ ಸಚಿವರುಗಳ ಸರ್ಕಾರಿ ನಿವಾಸಗಳಿಗೆ ಸಾರ್ವಜನಿಕರ ಪ್ರವೇಶವನ್ನು ಕೆಲ ಕ್ಷಣಗಳ ಹಿಂದೆ ನಿಷೇಧಿಸಲಾಗಿದೆ.
Recommended Video
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾರ್ಯನಿರ್ವಹಿಸುವ ಗೃಹ ಕಚೇರಿ ಕೃಷ್ಣಾದಲ್ಲಿ ಕೆಲಸ ಮಾಡುವ ಮಹಿಳಾ ಪೊಲೀಸ್ ಒಬ್ಬರು ಸೇರಿದಂತೆ ಮೂವರು ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಇದೇ ಹಿನ್ನೆಲೆಯಲ್ಲಿ ಇಡೀ ಕಟ್ಟಡವನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ.
ವಿಧಾಸೌಧಕ್ಕೆ ಸ್ಥಳಾಂತರ: ಇದೇ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ಗೃಹ ಕಚೇರಿ ಕೃಷ್ಣಾದಿಂದ ವಿಧಾನಸೌಧದ ಕಮಿಟಿ ರೂಂಗೆ ಸ್ಥಳಾಂತರ ಮಾಡಲಾಗಿದೆ. ಜೊತೆಗೆ ವಿಕಾಸಸೌಧದ ಸಿಬ್ಬಂದಿ ಯೊಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವುದರಿಂದ ವಿಧಾನಸೌಧ, ವಿಕಾಸಸೌಧ ಕಟ್ಟಡಗಳು, ಸುತ್ತಲೂ ಸ್ಯಾನಿಟೈಸ್ ಮಾಡಲಾಗುತ್ತಿದೆ. ಇದೀಗ ಸಿಎಂ ಗೃಹಕಚೇರಿ ಕೃಷ್ಣಾದ ಸಿಬ್ಬಂದಿಗೂ ಸೋಂಕು ತಗುಲಿದೆ ಎನ್ನಲಾಗಿದೆ. ಮುಖ್ಯಮಂತ್ರಿಗಳ ಸಚಿವಾಲಯ ಇನ್ನೂ ಅದನ್ನು ದೃಢಪಡಿಸಬೇಕಿದೆ.