Get Updates
Get notified of breaking news, exclusive insights, and must-see stories!

300 ಎಕರೆ ಅರಣ್ಯ ಭೂಮಿ ಮರಳಿ ಅರಣ್ಯ ಇಲಾಖೆ ವಶಕ್ಕೆ: ಈಶ್ವರ ಖಂಡ್ರೆ

ಬೆಂಗಳೂರು, ಜುಲೈ 03: ಇತ್ತೀಚೆಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 4000 ಕೋಟಿ ರೂಪಾಯಿ ಮೌಲ್ಯದ ಅರಣ್ಯ ಇಲಾಖೆಗೆ ಸಂಬಂಧಿಸಿದ ಜಾಗ ವಶಕ್ಕೆ ಪಡೆಯಲಾಗಿತ್ತು. ಇಂತಹ ಅಕ್ರಮ ಬೆಂಗಳೂರಿಗೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ ಇತರ ಜಿಲ್ಲೆಗಳಿಗೂ ಹಬ್ಬಿದೆ. ಕಲ್ಪತರು ನಾಡು ತುಮಕೂರು ಜಿಲ್ಲೆ ವ್ಯಾಪ್ತಿಯಲ್ಲೂ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಗುಳುಂ ಮಾಡಲು ಮುಂದಾಗಿದ್ದರು. ಅರಣ್ಯ ಇಲಾಖೆ ಕಾರ್ಯಾಚರಣೆಯಿಂದ ಅಷ್ಟು ಆಸ್ತಿ ಇಲಾಖೆಗೆ ಮರಳಿ ವಶಕ್ಕೆ ಪಡೆಯಲಾಗಿದೆ.

ಅರಣ್ಯ ಭೂಮಿ ಅಕ್ರಮ ಒತ್ತುವರಿ ಕುರಿತು ಖುದ್ದು ರಾಜ್ಯ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರೇ ಮಾಹಿತಿ ನೀಡಿದ್ದಾರೆ.

300 ಎಕರೆ ಅರಣ್ಯ ಭೂಮಿ ಉಳಿವು ಬುಕ್ಕಾಪಟ್ಟಣ ವನ್ಯಜೀವಿಧಾಮದಲ್ಲಿ ಯಶಸ್ವಿ ತೆರವು ಕಾರ್ಯಾಚರಣೆ ಗುರುವಾರ ಮಾಡಲಾಯಿತು ಎಂದು ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

300 Acres of Forest Land Reclaimed by Karnataka Forest Department Eshwar Khandre

ಬೆಂಗಳೂರು ಪಕ್ಕದ ತುಮಕೂರು ಜಿಲ್ಲೆಯ ತಿಪಟೂರು ಉಪ ವಿಭಾಗದ ಬುಕ್ಕಾಪಟ್ಟಣ ಚಿಂಕಾರಾ ವನ್ಯಜೀವಿಧಾಮ ವ್ಯಾಪ್ತಿಯ ಮುತ್ತುಗದಹಳ್ಳಿ ಮೀಸಲು ಅರಣ್ಯದಲ್ಲಿ ಇಂದು 300 ಎಕರೆ ಅರಣ್ಯ ಭೂಮಿಯನ್ನು ಅಕ್ರಮ ಒತ್ತುವರಿಯಿಂದ ಮುಕ್ತಗೊಳಿಸಲಾಗಿದೆ. ಅಧಿಕಾರಿಗಳು ಹಾಗೂ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ ಅಕ್ರಮದ ವಿರುದ್ಧ ಸಮರ ಸಾರಲಾಗಿದೆ ಎಂದು ತಿಳಿಸಿದರು.

ಈ ಭೂಮಿಯು ಮೈಸೂರು ಮಹಾರಾಜರಿಂದ 1926ರಲ್ಲಿ ಅರಣ್ಯ ಇಲಾಖೆಗೆ ನೀಡಲಾಗಿದ್ದು, ನಂತರದ ವರ್ಷಗಳಲ್ಲಿ ಕೆಲವು ಮಂದಿ ಅಕ್ರಮವಾಗಿ ಮಂಜೂರು ಮಾಡಿಕೊಂಡು, ಕೆಲವು ಮಂದಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದರು. ಪ್ರಕರಣ ರಾಜ್ಯ ಹೈಕೋರ್ಟ್ ಮೆಟ್ಟಲೇರಿ ಅರಣ್ಯವಾಗಿ ಉಳಿಸಲು ಆದೇಶವಾಗಿತ್ತು. ಇದೀಗ ಭೂಮಿ ಅರಣ್ಯ ಇಲಾಖೆಯ ಹೆಸರಿಗೆ ನೊಂದಾಯಿತವಾಗಿದೆ.

ಹಾಸನ-ತುಮಕೂರು ವಿಭಾಗದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ, ಪೊಲೀಸ್ ಇಲಾಖೆಯ ಬೆಂಬಲದಿಂದ ಭೂಮಿಯನ್ನು ತೆರವುಗೊಳಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು. ಅರಣ್ಯ ಸಂರಕ್ಷಣೆಯ ದಿಕ್ಕಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ಕಾರ್ಯಾಚರಣೆಯನ್ನು ಬಣ್ಣಿಸಿದ್ದಾರೆ.

ಜುಲೈ 5ಕ್ಕೆ 25 ಲಕ್ಷ ಸಸಿ ನೆಡುವ 'ವನಮಹೋತ್ಸವ..'

ಇತ್ತೀಚೆಗೆ ಬೆಂಗಳೂರು ಭಾಗದಲ್ಲೇ ಬೃಹತ್ ಅರಣ್ಯ ಅಕ್ರಮ ತೆರವುಗೊಳಿಸಿದ್ದ ಅರಣ್ಯ ಇಲಾಕೆ ಹಸಿರು ಹೆಚ್ಚಿಸಲು ಕ್ರಮ ಕೈಗೊಂಡಿದೆ. ಹಸಿರು ಕಲ್ಯಾಣ ಕರ್ನಾಟಕ ಯೋಜನೆಯಡಿ 25 ಲಕ್ಷ ಸಸಿ ನೆಡುವ ಬೃಹತ್ ವನಮಹೋತ್ಸವ ಆಚರಣೆಗೆ ಮುಂದಾಗಿದೆ. ಈ ವನಮಹೋತ್ಸವ ಜುಲೈ 5ರಂದು ನಡೆಯಲಿದ್ದು, ರಾಜ್ಯಸಭಾ ಪ್ರತಿಪಕ್ಷ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಲಿದ್ದಾರೆ.

ಕಲಬುರಗಿ ನಗರ ಹಾಗೂ ಜಿಲ್ಲೆಯ ಹಸಿರೀಕರಣಕ್ಕಾಗಿ ಬೃಹತ್ ಪ್ರಮಾಣದಲ್ಲಿ ಗಿಡಗಳನ್ನು ನೆಡುವ "ವನಮಹೋತ್ಸವ" ಕಾರ್ಯಕ್ರಮಕ್ಕೆ ಇದಾಗಿದೆ ಎಂದು ಸಚಿವರು ಬೆಂಗಳೂರಿನಲ್ಲಿ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಚರ್ಚಿಸಿ ಬಳಿಕೆ ಮಾಹಿತಿ ನೀಡಿದರು.

ಕಲ್ಯಾಣ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಉಷ್ಣತೆಯನ್ನು ತಗ್ಗಿಸಲು ಹಾಗೂ ಪರಿಸರವನ್ನು ರಕ್ಷಿಸಲು ಹಸಿರುಕರಣ ಅತ್ಯಂತ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಈ ಬೃಹತ್ ವನಮಹೋತ್ಸವ ಕಾರ್ಯಕ್ರಮ ಹಸಿರುಕರಣ ತ್ವರಿತಗೊಳಿಸಲು ಪರಿಣಾಮಕಾರಿ ಹೆಜ್ಜೆಯಾಗಿ ಹಾಗೂ ಪರಿಸರ ಸಂರಕ್ಷಣೆಗೆ ಮಹತ್ವದ ಪಾತ್ರವನ್ನೂ ವಹಿಸಲಿದೆ ಎಂದು ಅವರು ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+