ಕರ್ನಾಟಕದಲ್ಲಿ 300 ಹೊಸ ಟಿಬಿ ಕಾಯಿಲೆ ಪ್ರಕರಣಗಳು ಪತ್ತೆ
ರಾಜ್ಯದಲ್ಲಿ 300 ಟಿಬಿ ಹೊಸ ಪ್ರಕರಣಗಳು ಪತ್ತೆ. ರಾಜ್ಯ ಸರ್ಕಾರದ ವೈದ್ಯಕೀಯ ಅಭಿಯಾನದ ವೇಳೆ ಪತ್ತೆ. ಎಲ್ಲಾ ಜಿಲ್ಲೆಗಳಲ್ಲಿ ಆರಂಭಗೊಂಡಿರುವ ಕ್ಷಯ ರೋಗ ನಿರ್ಮೂಲನಾ ಅಭಿಯಾನ.
ಬೆಂಗಳೂರು, ಜುಲೈ 21: ರಾಜ್ಯದಲ್ಲಿ ಹೊಸದಾಗಿ 300 ಕ್ಷಯ ರೋಗ (ಟಿಬಿ- ಟ್ಯುಬರ್ ಕ್ಲೋಸಿಸ್) ಪ್ರಕರಣಗಳು ಪತ್ತೆಯಾಗಿದ್ದು, ಶೀಘ್ರದಲ್ಲೇ ಎಲ್ಲಾ ಜಿಲ್ಲೆಗಳಲ್ಲಿ ಇವುಗಳ ನಿರ್ಮೂಲನೆಗೆ ಕ್ರಮ ಕೈಗೊಳ್ಳಲಾಗುವುದು ವೈದ್ಯರು ತಿಳಿಸಿದ್ದಾರೆ.
2025ರ ವೇಳೆಗೆ ಟಿಬಿಯನ್ನು ಕರ್ನಾಟಕದಿಂದ ತೊಲಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹೊಸತಾಗಿ ವೈದ್ಯಕೀಯ ತಪಾಸಣಾ ಅಭಿಯಾನವನ್ನು ಆರಂಭಿಸಿದೆ. ಇದಕ್ಕೆ ಡಾ. ಸಂಜಯ್ ಗುಪ್ತಾ ಅವರು ಸಾರಥಿಯಾಗಿದ್ದಾರೆ. ಅಭಿಯಾನ ಶುರುವಾಗಿ ಕೇವಲ 3 ದಿನಗಳಲ್ಲೇ 300 ಪ್ರಕರಣಗಳು ಪತ್ತೆಯಾಗಿರುವುದು ವೈದ್ಯರನ್ನೂ ಕೊಂಚ ದಂಗುಬಡಿಸಿದೆ.

ಖಾಸಗಿ ಮಾಧ್ಯಮವೊಂದಕ್ಕೆ ನೀಡಿರುವ ಹೇಳಿಕೆಯಲ್ಲಿ ಡಾ. ಗುಪ್ತಾ ಅವರು, ರಾಜ್ಯದಲ್ಲಿ ಹೊಸದಾಗಿ 300 ಟಿಬಿ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದ 11 ಜಿಲ್ಲೆಗಳಲ್ಲಿ ಟಿಬಿಯು ಮತ್ತೆ ಕಾಣಿಸಿಕೊಂಡಿದೆ ಎಂದು ಹೇಳಿದ್ದಾರೆ. ಆದರೆ, ಆ 11 ಜಿಲ್ಲೆಗಳ ಬಗ್ಗೆ ಅವರು ಮಾಹಿತಿ ನೀಡಿಲ್ಲ.
ಪ್ರತಿಯೊಂದು ಜಿಲ್ಲೆಗಳಲ್ಲಿ ಟಿಬಿ ಶಿಬಿರಗಳನ್ನು ಆಯೋಜಿಸುವ ಮೂಲಕ ಹಳ್ಳಿಗಾಡಿನ ಜನರಿಗೂ ಇದರ ಉಪಯೋಗ ಸಿಗುವಂತೆ ಮಾಡಲಾಗುವುದು. ವಿಪರೀತ ಕೆಮ್ಮಿನಿಂದ ಬಳಲುತ್ತಿರುವ ವ್ಯಕ್ತಿಗಳ ಕಫ, ರಕ್ತ, ಮೂತ್ರಗಳ ಸ್ಯಾಂಪಲ್ ಗಳನ್ನು ಪಡೆದು ಮೂರು ಅಥವಾ ನಾಲ್ಕು ದಿನಗಳಲ್ಲಿ ಅವುಗಳ ಪರೀಕ್ಷಾ ವರದಿಯನ್ನು ಪಡೆಯಲಾಗುವುದು.
ಟಿಬಿ ಕಾಯಿಲೆ ಸೋಂಕಿಗೆ ಒಳಗಾದವರಿಗೆ ಕೂಡಲೇ ಚಿಕಿತ್ಸೆಗೆ ಒಳಗಾಗುವಂತೆ ಪ್ರೇರಿಪಿಸಿ ಅವರಿಗೆ ಅಗತ್ಯ ವೈದ್ಯಕೀಯ ನೆರವು ಕೊಡಲಾಗುವುದು ಎಂದು ಡಾ. ಗುಪ್ತಾ ತಿಳಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications