ಕರ್ನಾಟಕದಲ್ಲಿ 300 ಹೊಸ ಟಿಬಿ ಕಾಯಿಲೆ ಪ್ರಕರಣಗಳು ಪತ್ತೆ
ರಾಜ್ಯದಲ್ಲಿ 300 ಟಿಬಿ ಹೊಸ ಪ್ರಕರಣಗಳು ಪತ್ತೆ. ರಾಜ್ಯ ಸರ್ಕಾರದ ವೈದ್ಯಕೀಯ ಅಭಿಯಾನದ ವೇಳೆ ಪತ್ತೆ. ಎಲ್ಲಾ ಜಿಲ್ಲೆಗಳಲ್ಲಿ ಆರಂಭಗೊಂಡಿರುವ ಕ್ಷಯ ರೋಗ ನಿರ್ಮೂಲನಾ ಅಭಿಯಾನ.
ಬೆಂಗಳೂರು, ಜುಲೈ 21: ರಾಜ್ಯದಲ್ಲಿ ಹೊಸದಾಗಿ 300 ಕ್ಷಯ ರೋಗ (ಟಿಬಿ- ಟ್ಯುಬರ್ ಕ್ಲೋಸಿಸ್) ಪ್ರಕರಣಗಳು ಪತ್ತೆಯಾಗಿದ್ದು, ಶೀಘ್ರದಲ್ಲೇ ಎಲ್ಲಾ ಜಿಲ್ಲೆಗಳಲ್ಲಿ ಇವುಗಳ ನಿರ್ಮೂಲನೆಗೆ ಕ್ರಮ ಕೈಗೊಳ್ಳಲಾಗುವುದು ವೈದ್ಯರು ತಿಳಿಸಿದ್ದಾರೆ.
2025ರ ವೇಳೆಗೆ ಟಿಬಿಯನ್ನು ಕರ್ನಾಟಕದಿಂದ ತೊಲಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹೊಸತಾಗಿ ವೈದ್ಯಕೀಯ ತಪಾಸಣಾ ಅಭಿಯಾನವನ್ನು ಆರಂಭಿಸಿದೆ. ಇದಕ್ಕೆ ಡಾ. ಸಂಜಯ್ ಗುಪ್ತಾ ಅವರು ಸಾರಥಿಯಾಗಿದ್ದಾರೆ. ಅಭಿಯಾನ ಶುರುವಾಗಿ ಕೇವಲ 3 ದಿನಗಳಲ್ಲೇ 300 ಪ್ರಕರಣಗಳು ಪತ್ತೆಯಾಗಿರುವುದು ವೈದ್ಯರನ್ನೂ ಕೊಂಚ ದಂಗುಬಡಿಸಿದೆ.

ಖಾಸಗಿ ಮಾಧ್ಯಮವೊಂದಕ್ಕೆ ನೀಡಿರುವ ಹೇಳಿಕೆಯಲ್ಲಿ ಡಾ. ಗುಪ್ತಾ ಅವರು, ರಾಜ್ಯದಲ್ಲಿ ಹೊಸದಾಗಿ 300 ಟಿಬಿ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದ 11 ಜಿಲ್ಲೆಗಳಲ್ಲಿ ಟಿಬಿಯು ಮತ್ತೆ ಕಾಣಿಸಿಕೊಂಡಿದೆ ಎಂದು ಹೇಳಿದ್ದಾರೆ. ಆದರೆ, ಆ 11 ಜಿಲ್ಲೆಗಳ ಬಗ್ಗೆ ಅವರು ಮಾಹಿತಿ ನೀಡಿಲ್ಲ.
ಪ್ರತಿಯೊಂದು ಜಿಲ್ಲೆಗಳಲ್ಲಿ ಟಿಬಿ ಶಿಬಿರಗಳನ್ನು ಆಯೋಜಿಸುವ ಮೂಲಕ ಹಳ್ಳಿಗಾಡಿನ ಜನರಿಗೂ ಇದರ ಉಪಯೋಗ ಸಿಗುವಂತೆ ಮಾಡಲಾಗುವುದು. ವಿಪರೀತ ಕೆಮ್ಮಿನಿಂದ ಬಳಲುತ್ತಿರುವ ವ್ಯಕ್ತಿಗಳ ಕಫ, ರಕ್ತ, ಮೂತ್ರಗಳ ಸ್ಯಾಂಪಲ್ ಗಳನ್ನು ಪಡೆದು ಮೂರು ಅಥವಾ ನಾಲ್ಕು ದಿನಗಳಲ್ಲಿ ಅವುಗಳ ಪರೀಕ್ಷಾ ವರದಿಯನ್ನು ಪಡೆಯಲಾಗುವುದು.
ಟಿಬಿ ಕಾಯಿಲೆ ಸೋಂಕಿಗೆ ಒಳಗಾದವರಿಗೆ ಕೂಡಲೇ ಚಿಕಿತ್ಸೆಗೆ ಒಳಗಾಗುವಂತೆ ಪ್ರೇರಿಪಿಸಿ ಅವರಿಗೆ ಅಗತ್ಯ ವೈದ್ಯಕೀಯ ನೆರವು ಕೊಡಲಾಗುವುದು ಎಂದು ಡಾ. ಗುಪ್ತಾ ತಿಳಿಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications