ಕರ್ನಾಟಕದಲ್ಲಿ 14 ಲಕ್ಷದ ಗಡಿ ದಾಟಿದ ಕೊರೊನಾವೈರಸ್ ಪ್ರಕರಣ
ಬೆಂಗಳೂರು, ಏಪ್ರಿಲ್ 27: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಎರಡನೇ ಅಲೆ ಮತ್ತಷ್ಟು ಭೀಕರವಾಗುತ್ತಿದೆ. ರಾಜ್ಯದಲ್ಲಿ ಒಂದೇ ದಿನ ಹೊಸ ಪ್ರಕರಣಗಳ ಸಂಖ್ಯೆ ಒಂದು ವಾರದಲ್ಲಿ ಎರಡನೇ ಬಾರಿ 30 ಸಾವಿರದ ಗಡಿಯನ್ನೂ ದಾಟಿ ಹೋಗಿದೆ.
ಕಳೆದ 24 ಗಂಟೆಗಳಲ್ಲಿ 31,830 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 180 ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ಇದೇ ಅವಧಿಯಲ್ಲಿ 10793 ಸೋಂಕಿತರು ಗುಣಮುಖರಾಗಿದ್ದಾರೆ.
ಕೋವಿಡ್ 19: ಕರ್ನಾಟಕ ಸೇರಿ 10 ರಾಜ್ಯಗಳಿಂದ ಶೇ.69.1ರಷ್ಟು ಹೊಸ ಪ್ರಕರಣ
ಬೆಂಗಳೂರಿನಲ್ಲೇ ಒಂದು ದಿನದಲ್ಲಿ 17550 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 6,87,751ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲೇ 97 ಮಂದಿ ಪ್ರಾಣ ಬಿಟ್ಟಿದ್ದು, ಈವರೆಗೂ 6002 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ., ಬೆಂಗಳೂರಿನಲ್ಲಿ 2,06,223 ಸಕ್ರಿಯ ಪ್ರಕರಣಗಳಿವೆ.
ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಒಟ್ಟು 14,00,775 ಕೊರೊನಾವೈರಸ್ ಸೋಂಕಿತ ಪ್ರಕರಣಗಳಿವೆ. ಈ ಪೈಕಿ 10,84,050 ಸೋಂಕಿತರು ಗುಣಮುಖರಾಗಿದ್ದು, ಸೋಂಕಿಗೆ ಈವರೆಗೂ 14807 ಮಂದಿ ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ ರಾಜ್ಯದಲ್ಲಿ 3,01,899 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣ?
Recommended Video
ರಾಜ್ಯದಲ್ಲಿ ಒಟ್ಟು 31830 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 283, ಬಳ್ಳಾರಿ 907, ಬೆಳಗಾವಿ 219, ಬೆಂಗಳೂರು ಗ್ರಾಮಾಂತರ 599, ಬೆಂಗಳೂರು 17550, ಬೀದರ್ 328, ಚಾಮರಾಜನಗರ 212, ಚಿಕ್ಕಬಳ್ಳಾಪುರ 544, ಚಿಕ್ಕಮಗಳೂರು 275, ಚಿತ್ರದುರ್ಗ 145, ದಕ್ಷಿಣ ಕನ್ನಡ 486, ದಾವಣಗೆರೆ 300, ಧಾರವಾಡ 423, ಗದಗ 119, ಹಾಸನ 503, ಹಾವೇರಿ 99, ಕಲಬುರಗಿ 772, ಕೊಡಗು 373, ಕೋಲಾರ 548, ಕೊಪ್ಪಳ 382, ಮಂಡ್ಯ 737, ಮೈಸೂರು 2042, ರಾಯಚೂರು 736, ರಾಮನಗರ 169, ಶಿವಮೊಗ್ಗ 256, ತುಮಕೂರು 1196, ಉಡುಪಿ 477, ಉತ್ತರ ಕನ್ನಡ 205, ವಿಜಯಪುರ 531, ಯಾದಗಿರಿ 414 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.