39 ಲಕ್ಷ ರೈತರಿಗೆ ಬೆಳೆ ಹಾನಿ ಪರಿಹಾರ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು, ಜುಲೈ 25: ಅತಿ ಮಳೆಯಿಂದ ಉಂಟಾದ ಬೆಳೆ ಹಾನಿಗೆ 4859 ರೈತರಿಗೆ 5.66 ಕೋಟಿ ರು.ಗಳನ್ನು ಪರಿಹಾರವನ್ನು ರೈತರ ಖಾತೆಗಳಿಗೆ ನೇರವಾಗಿ ಪಾವತಿಸಲಾಗುತ್ತಿದೆ ಎಂದು ವಿಧಾನಪರಿಷತ್‌ನಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಪರವಾಗಿ ಕೇಶವಪ್ರಸಾದ್‌ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ವರ್ಷ ಮುಂಗಾರು ಹಂಗಾಮಿನಲ್ಲಿ ಬರದಿಂದಾಗಿ ಬೆಳೆ ಹಾನಿಯಾದ 38,78,525 ರೈತರಿಗೆ 3535.30 ಕೋಟಿ ರು.ಗಳನ್ನು ಹಾಗೂ ಹಿಂಗಾರು ಹಂಗಾಮಿನಲ್ಲಿ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಅತಿ ಮಳೆಯಿಂದ ಉಂಟಾದ ಬೆಳೆ ಹಾನಿಗೆ 4859 ರೈತರಿಗೆ 5.66 ಕೋಟಿ ರು.ಗಳನ್ನು ಪರಿಹಾರವನ್ನು ರೈತರ ಖಾತೆಗಳಿಗೆ ನೇರವಾಗಿ ಪಾವತಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

3500 Crore Crop Damage Compensation For 39 Lakh Farmers Says Krishna Byre Gowda

ಇನ್ನೂ ಕಳೆದ ವರ್ಷಗಳಿಗೆ ಹೋಲಿಸಿದರೆ 2023-24ನೇ ಸಾಲಿನಲ್ಲಿ ಅತಿ ಹೆಚ್ಚು ಪರಿಹಾರ ನೀಡಲಾಗಿದೆ. ರಾಜ್ಯಕ್ಕೆ ಪರಿಹಾರಕ್ಕಾಗಿ ನಾವು ಸುಪ್ರೀಂ ಕೋರ್ಟ್‌ಗೆ ಹೋದ ನಂತರ ಕೇಂದ್ರ ಸರ್ಕಾರ 3454.22 ಕೋಟಿ ರು.ಗಳನ್ನು ಬಿಡುಗಡೆ ಮಾಡಿದೆ. ಈ ಪೈಕಿ 32.66.42 ಕೊಟಿ ರು.ಗಳನ್ನು ಬೆಳೆಹಾನಿ ಪರಿಹಾರ ಹಾಗೂ 232.42 ಕೋಟಿ ರು.ಗಳನ್ನು ಜೀವನೋಪಾಯ ಪರಿಹಾರಕ್ಕೆ ಬಿಡುಗಡೆ ಮಾಡಿದೆ ಎಂದು ಸಚಿವರು ಹೇಳಿದರು.

ರಾಜ್ಯ ಸರ್ಕಾರದಿಂದ 1296 ಕೋಟಿ ರು.ಗಳನ್ನು ಬಿಡುಗಡೆ ಮಾಡಿದೆ. ಅಲ್ಲದೇ ವಿಶೇಷವಾಗಿ ನೀರಾವರಿ ಆಶ್ರಿತ ಪ್ರದೇಶಗಳಲ್ಲಿ ಕಾಲುವೆಯಿಂದ ನೀರು ಬಿಟ್ಟರೂ ನೀರು ತಲುಪದ ಕಾಲುವೆಯ ಕೊನೆಯಲ್ಲಿರುವ ರೈತರು ಹಾಗೂ ನೀರು ಬಿಡುಗಡೆ ಮಾಡಲು ಆಗದೇ ಬೆಳೆ ಹಾನಿಗೆ ಒಳಗಾದ ರೈತರಿಗೂ ಸಹ ಪರಿಹಾರ ನೀಡಲಾಗಿದೆ.

ಬೆಳೆಹಾನಿಗೆ ಪರಿಹಾರ ಪಡೆದ ರೈತರಿಗೆ ಬೆಳೆ ವಿಮೆ ಅಡಿ ಪರಿಹಾರ ನೀಡಬಾರದೆಂಬ ನಿಯಮವನ್ನು ಕೇಂದ್ರ ಸರ್ಕಾರ ಅಳವಡಿಸಿಕೊಂಡಿತ್ತು. ಈ ಬಗ್ಗೆ ಕೇಂದ್ರ ಬಜೆಟ್‌ ಪೂರ್ವ ಸಭೆಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ಗಮನಕ್ಕೆ ತರಲಾಯಿತು. ಈ ತಪ್ಪನ್ನು ಸರಿಪಡಿಸುವುದಾಗಿ ಅವರು ಭರವಸೆ ನೀಡಿದ್ದಾರೆ ಎಂದು ಕೃಷ್ಣ ಬೈರೇಗೌಡ್ರು ತಿಳಿಸಿದರು.

ಪರಿಹಾರದ ವಿಚಾರದಲ್ಲಿ ಸದನದಲ್ಲಿ ಗದ್ದಲ

ಕೇಂದ್ರ ಸರ್ಕಾರ ಸಹ ಬರಪರಿಹಾರಕ್ಕೆ ಹಣ ನೀಡಿದೆ ಎಂದು ಹೇಳಿದ ವಿಷಯ ಕೆಲ ನಿಮಿಷಗಳ ಕಾಲ ಸದನದಲ್ಲಿ ಮಾತಿನ ಚಕಮಕಿಗೆ ಕಾರಣವಾಯಿತು. ಬರಪರಿಹಾರಕ್ಕೆ ಹಣ ನೀಡುವಂತೆ ಮನವಿ ಮಾಡಿದರೂ ಕೇಂದ್ರ ನೀಡಲಿಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ ಮಾತಿಗೆ ಬಿಜೆಪಿಯ ಕೇಶವಪ್ರಸಾದ್‌ ನಡುವೆ ಮಾತಿನ ಚಕಮಕಿ ನಡೆಯಿತು.

ಇದೇ ರೀತಿ ಮನವಿಯನ್ನು ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರ ಸರ್ಕಾರ ಮಾಡಿದ್ದವು, ಆದರೆ ಕರ್ನಾಟಕ ಪರಿಹಾರ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಹೋಗಿದ್ದಕ್ಕೆ ಕೇಂದ್ರ ಪರಿಹಾರ ನೀಡಿದೆ. ಸುಪ್ರೀಂ ಕೋರ್ಟ್‌ ಗೆ ಹೋಗಲಿಲ್ಲ ಎಂದರೆ ನಯಾ ಪೈಸೆ ಸಿಗುತ್ತಿರಲಿಲ್ಲ ಎಂದು ಕೃಷ್ಣ ಬೈರೇಗೌಡ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+