ಗೋವಾಕ್ಕೆ ಹೆದ್ದಾರಿ, 37 ಸಾವಿರ ಮರ ಕಾಪಾಡೋರು ಯಾರ್ರಿ?
ಬೆಂಗಳೂರು, ಆಗಸ್ಟ್, 09: ಕರ್ನಾಟಕ ಮತ್ತು ಗೋವಾ ನಡುವೆ ಮಹಾದಾಯಿ ವಿವಾದ ತಣ್ಣಗಾಗುವ ಲಕ್ಷಣ ಕಾಣದೇ ಅಲ್ಲಿಂದ ಇಲ್ಲಿಗೆ, ಇಲ್ಲಿಂದ ಅಲ್ಲಿಗೆ ಎಂದು ಸಮಸ್ಯೆ ಓಡಾಡುತ್ತಿದೆ. ಆದರೆ ರಾಜ್ಯಗಳ ನಡುವೆ ದೊಡ್ಡ ದೊಡ್ಡ ಲಾರಿಗಳು, ಬಸ್ ಗಳು ಓಡಾಡಲು ಹೆದ್ದಾರಿ ನಿರ್ಮಾಣಕ್ಕೆ ಹಸಿರು ನಿಶಾನೆ ಸಿಕ್ಕಿದೆ.
ಕರ್ನಾಟಕ ಮತ್ತು ಗೋವಾ ನಡುವೆ (ಬೆಳಗಾವಿ, ಉತ್ತರ ಕನ್ನಡ ಜಿಲ್ಲೆ) ಹೆದ್ದಾರಿ ಅಗಲೀಕರಣಕ್ಕೆ37, 862 ಮರಗಳು ಧರೆಗೆ ಉರುಳಲಿವೆ ಎಂಬ ಸಂಗತಿಯನ್ನು ಅರಗಿಸಿಕೊಳ್ಳಲೇಬೇಕಾಗಿದೆ.[ಪರಿಸರ ಚರ್ಚೆಗೆ ನಾಂದಿ ಹಾಡಿದ ಸರ್ಕಾರದ ವಿಧೇಯಕ]

ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆ ಮೂಲಕ ಗೋವಾ ತಲುಪಲಿರುವ ಎನ್ ಎಚ್ 4ಎ ಗಾಗಿ ಮರಗಳ ಮಾರಣಹೋಮ ನಡೆಯಲಿದೆ. ದಾಂಡೇಲಿ ಅಭಯಾರಣ್ಯದ ಮೇಲೆ ಹಾದು ಬಂದಿರುವ ಹೆದ್ದಾರಿ ಪಕ್ಕದ ಮರಗಳ ಕಣ್ಣಲ್ಲಿ ಕಣ್ಣೀರು ಆರಂಭವಾಗಿದೆ.
2015 ರ ಡಿಸೆಂಬರ್ ನಲ್ಲಿಯೇ ಯೋಜನೆಗೆ ಕೇಂದ್ರ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯ ಒಪ್ಪಿಗೆ ನೀಡಿದೆ. ಹೆದ್ದಾರಿ ಅಗಲೀಕರಣದ ಹೆಸರಲ್ಲಿ ಮರಗಳಿಗೆ ಕೊಡಲಿ ಪೆಟ್ಟು ಬೀಳುವುದು ನಿಶ್ಚಿತವಾಗಿದೆ.[ನಾವು ಎಲ್ಲಿ ಬಿದ್ದು ಸಾಯಬೇಕು: ಮರದ ಪ್ರಶ್ನೆಗೆ ಇಲ್ಲ ಉತ್ತರ]
'ಇದು ನಮ್ಮ ದುರ್ದೈವ. ಈಗಾಗಲೇ ದೊಡ್ಡ ಪ್ರಮಾಣದ ಅರಣ್ಯವನ್ನು ಕಳೆದುಕೊಂಡಿದ್ದೇವೆ. ಹಿಂದಿನ ವರ್ಷ ಬರ ಮತ್ತು ಕಾಡ್ಗಿಚ್ಚಿನಿಂದ ಅರಣ್ಯ ನಾಶವಾಗಿದ್ದು ಈಗ ಕೈಯಾರೆ ಮರ ಕಡಿತಕ್ಕೆ ಸರ್ಕಾರ ಮುಂದಾಗಿದೆ' ಎಂದು ಬೆಳಗಾವಿಯ ಪರಿಸರವಾದಿ ಉದಯ ಕುಮಾರ ದೇಸಾಯಿ ಆತಂಕ ವ್ಯಕ್ತಪಡಿಸುತ್ತಾರೆ.
ಕೇಂದ್ರ ಪರಿಸರ, ಅರಣ್ಯ ಹಾಗೂ ಹವಾಮಾನ ಬದಲಾವಣೆ ಸಚಿವಾಲಯದ ಸದಸ್ಯರಲ್ಲಿ ಒಬ್ಬರಾದ ಪರಿಸರ ಹೋರಾಟಗಾರ ಡಾ.ಯಲ್ಲಪ್ಪ ರೆಡ್ಡಿ ಈ ಯೋಜನೆ ಬಗ್ಗೆ ನೀಡಿರುವ ಎಚ್ಚರಿಕೆಗಳಿಗೆ ಯಾರೂ ಬೆಲೆ ನೀಡಿಲ್ಲ.
ಪರಿಸರವಾದಿಗಳು ತಮ್ಮ ಹೋರಾಟವನ್ನು ಮುಂದುವರಿಸಿದ್ದು ಮರಗಳನ್ನು ಕಡಿಯದೇ ಹೆದ್ದಾರಿ ಅಗಲೀಕರಣ ಮಾಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
-
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ












Click it and Unblock the Notifications