ಸರ್ಕಾರಿ ಹುದ್ದೆ ಪಡೆಯಲು ಮಾಸ್ಟರ್ ಪ್ಲ್ಯಾನ್; 37 ಮಂದಿ ಅರೆಸ್ಟ್
ಸರ್ಕಾರಿ ನೌಕರಿ ಪಡೆಯಲು ಲಕ್ಷಾಂತರ ಮಂದಿ ಹಗಲಿರುಳೆನ್ನದೆ ಶ್ರಮ ಹಾಕುತ್ತಾರೆ. ಮತ್ತೊಂದೆಡೆ ವಾಮಮಾರ್ಗಗಳಲ್ಲೂ ನೌಕರಿ ಗಿಟ್ಟಿಸಿಕೊಳ್ಳಲು ನಾನಾ ಕಸರತ್ತು ನಡೆಸುವವರೂ ಇದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಇದೀಗ ನಕಲಿ ಅಂಕಪಟ್ಟಿ ಸಲ್ಲಿಸಿ, ನೌಕರಿ ಪಡೆಯಲು ಮುಂದಾಗಿದ್ದ 37 ಮಂದಿ ಸಿಸಿಬಿ ಪೊಲೀಸರ ಅತಿಥಿಯಾಗಿದ್ದಾರೆ.
ಹೌದು, ಇವರೆಲ್ಲ ನಕಲಿ ಮಾರ್ಕ್ಸ್ಕಾರ್ಡ್ ಸಲ್ಲಿಸಿ ನೇರವಾಗಿ ಜಲ ಸಂಪನ್ಮೂಲ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕ ಹುದ್ದೆ ಪಡೆಯಲು ಮುಂದಾಗಿದ್ದರು. ಅಲ್ಲದೆ ಈ ಜಾಲದಲ್ಲಿ ಸರ್ಕಾರಿ ನೌಕರರು ಹಾಗೂ ಬ್ರೋಕರ್ಗಳು ಕೂಡ ಇದ್ದು 11 ಮಂದಿಯನ್ನು ಸಿಸಿಬಿ ವಿಶೇಷ ವಿಚಾರಣಾ ದಳದ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಇವರಿಂದ 17 ಮೊಬೈಲ್ಗಳು, ಎರಡು ಕಾರುಗಳು, ಕಂಪ್ಯೂಟರ್ ಹಾರ್ಡ್ಡಿಸ್ಕ್ ಜಪ್ತಿ ಮಾಡಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರ ಪೊಲೀಸ್ ಸ್ಟೇಷನ್ನಲ್ಲಿ ದಾಖಲಾಗಿದ್ದ ಈ ಕೇಸ್ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು. ತನಿಖೆ ಆರಂಭಿಸಿದ್ದ ಅಧಿಕಾರಿಗಳು, ವಿಶೇಷ ತಂಡ ರಚಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚು ಮಂದಿ ನಕಲಿ ಅಂಕಪಟ್ಟಿ ಸಲ್ಲಿಸಿರುವುದು ಪತ್ತೆಯಾಗಿದೆ. ಉಳಿದಂತೆ ಹಾಸನ, ವಿಜಯಪುರ, ಚಿತ್ರದುರ್ಗ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ವಿಜಯನಗರ ಜಿಲ್ಲೆಯಯವರೂ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಉನ್ನುಳಿದಂತೆ 12 ಜಿಲ್ಲೆಗಳ 62 ಅಭ್ಯರ್ಥಿಗಳು ಕೂಡ ನಕಲಿ ಅಂಕಪಟ್ಟಿ ಸಲ್ಲಿಸಿರುವ ಮಾಹಿತಿಯಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಬೆಂಗಳೂರು ಪೊಲೀಸ್ ಕಮೀಷನರ್ ದಯಾನಂದ್ ತಿಳಿಸಿದ್ದಾರೆ.

ಜಲ ಸಂಪನ್ಮೂಲ ಇಲಾಖೆಯಲ್ಲಿ ಬ್ಯಾಕ್ಲಾಗ್ ಕೋಟಾದಲ್ಲಿದ್ದ ದ್ವಿತೀಯ ದರ್ಜೆ ಸಹಾಯಕರ 182 ಹುದ್ದೆಗಳ ಭರ್ತಿಗೆ 2022ರಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ್ದವರಲ್ಲಿ 62 ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ್ದ ಅರ್ಹತೆ ಹೊಂದಿರಲಿಲ್ಲ. ಆದರೂ ನಕಲಿ ದಾಖಲೆಗಳನ್ನು ಸಲ್ಲಿಸಿ ಹುದ್ದೆ ಪಡೆಯಲು ಪ್ರಯತ್ನಿಸಿದ್ದರು. ನಕಲಿ ಅಂಕಪಟ್ಟಿ ತಯಾರಿಸುವ ಜಾಲದ ಸಹಾಯದಿಂದ ಈ ಕೃತ್ಯ ನಡೆದಿರುವುದು ತಿಳಿದಿತ್ತು.
ದ್ವಿತೀಯ ಪಿಯುಸಿ ನಕಲಿ ಅಂಕಪಟ್ಟಿಗಳನ್ನು ಸೃಷ್ಟಿಸಿಕೊಂಡು, ಆನ್ಲೈನ್ ಮೂಲಕ ಜಲ ಸಂಪನ್ಮೂಲ ಇಲಾಖೆಯ ನೇಮಕಾತಿ ಪ್ರಾಧಿಕಾರಕ್ಕೆ ಸಲ್ಲಿಸಿದ್ದರು. ದಾಖಲೆ ಪರಿಶೀಲನೆ ವೇಳೆ ಈ ಅಕ್ರಮದ ಸುಳಿವು ಸಿಕ್ಕಿತ್ತು. ಆಗ ಇಲಾಖೆ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದರು.
ಈ ಜಾಲ ಹೇಗಿತ್ತು?: ಸಿಸಿಬಿ ಅಧಿಕಾರಿಗಳ ಮಾಹಿತಿ ಪ್ರಕಾರ, ಬ್ರೋಕರ್ಗಳು ಮಳಿಗೆಯೊಂದನ್ನು ಬಾಡಿಗೆಗೆ ಪಡೆದು ಅಲ್ಲಿ ಕಂಪ್ಯೂಟರ್ ನೆರವಿನಿಂದ ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದರು. ಮೂವರು ಸರ್ಕಾರಿ ನೌಕರರು ಅಭ್ಯರ್ಥಿಗಳನ್ನು ಹುಡುಕಿ ಈ ಬ್ರೋಕರ್ಗಳ ಬಳಿಗೆ ಕಳುಹಿಸುತ್ತಿದ್ದರು.
ಬಂಧನಕ್ಕೆ ಒಳಗಾಗಿರುವ ಬಹುತೇಕರು ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಫೇಲ್ ಆಗಿದ್ದಾರೆ. ಹಾಗಾಗಿ ಸರ್ಕಾರಿ ಹುದ್ದೆ ಪಡೆಯಲು ನಕಲಿ ಅಂಕಪಟ್ಟಿ ಪಡೆದುಕೊಂಡಿದ್ದರು. ಒಂದು ನಕಲಿ ಅಂಕಪಟ್ಟಿಗೆ 5,000 ರೂಪಾಯಿಯಿಂದ 6,000 ರೂಪಾಯಿ ವಸೂಲಿ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇಂತಹ ಜಾಲಗಳಿಂದಲೇ ಪ್ರತಿಭಾವಂತರಿಗೆ ಸರ್ಕಾರಿ ಕೆಲಸ ಕನಸಾಗಿಯೇ ಉಳಿದುಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತವಾಗಿದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು












Click it and Unblock the Notifications