ಸರ್ಕಾರಿ ಹುದ್ದೆ ಪಡೆಯಲು ಮಾಸ್ಟರ್ ಪ್ಲ್ಯಾನ್; 37 ಮಂದಿ ಅರೆಸ್ಟ್
ಸರ್ಕಾರಿ ನೌಕರಿ ಪಡೆಯಲು ಲಕ್ಷಾಂತರ ಮಂದಿ ಹಗಲಿರುಳೆನ್ನದೆ ಶ್ರಮ ಹಾಕುತ್ತಾರೆ. ಮತ್ತೊಂದೆಡೆ ವಾಮಮಾರ್ಗಗಳಲ್ಲೂ ನೌಕರಿ ಗಿಟ್ಟಿಸಿಕೊಳ್ಳಲು ನಾನಾ ಕಸರತ್ತು ನಡೆಸುವವರೂ ಇದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಇದೀಗ ನಕಲಿ ಅಂಕಪಟ್ಟಿ ಸಲ್ಲಿಸಿ, ನೌಕರಿ ಪಡೆಯಲು ಮುಂದಾಗಿದ್ದ 37 ಮಂದಿ ಸಿಸಿಬಿ ಪೊಲೀಸರ ಅತಿಥಿಯಾಗಿದ್ದಾರೆ.
ಹೌದು, ಇವರೆಲ್ಲ ನಕಲಿ ಮಾರ್ಕ್ಸ್ಕಾರ್ಡ್ ಸಲ್ಲಿಸಿ ನೇರವಾಗಿ ಜಲ ಸಂಪನ್ಮೂಲ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕ ಹುದ್ದೆ ಪಡೆಯಲು ಮುಂದಾಗಿದ್ದರು. ಅಲ್ಲದೆ ಈ ಜಾಲದಲ್ಲಿ ಸರ್ಕಾರಿ ನೌಕರರು ಹಾಗೂ ಬ್ರೋಕರ್ಗಳು ಕೂಡ ಇದ್ದು 11 ಮಂದಿಯನ್ನು ಸಿಸಿಬಿ ವಿಶೇಷ ವಿಚಾರಣಾ ದಳದ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಇವರಿಂದ 17 ಮೊಬೈಲ್ಗಳು, ಎರಡು ಕಾರುಗಳು, ಕಂಪ್ಯೂಟರ್ ಹಾರ್ಡ್ಡಿಸ್ಕ್ ಜಪ್ತಿ ಮಾಡಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರ ಪೊಲೀಸ್ ಸ್ಟೇಷನ್ನಲ್ಲಿ ದಾಖಲಾಗಿದ್ದ ಈ ಕೇಸ್ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿತ್ತು. ತನಿಖೆ ಆರಂಭಿಸಿದ್ದ ಅಧಿಕಾರಿಗಳು, ವಿಶೇಷ ತಂಡ ರಚಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಹೆಚ್ಚು ಮಂದಿ ನಕಲಿ ಅಂಕಪಟ್ಟಿ ಸಲ್ಲಿಸಿರುವುದು ಪತ್ತೆಯಾಗಿದೆ. ಉಳಿದಂತೆ ಹಾಸನ, ವಿಜಯಪುರ, ಚಿತ್ರದುರ್ಗ, ಕೋಲಾರ, ಕೊಪ್ಪಳ, ರಾಯಚೂರು, ರಾಮನಗರ, ವಿಜಯನಗರ ಜಿಲ್ಲೆಯಯವರೂ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಉನ್ನುಳಿದಂತೆ 12 ಜಿಲ್ಲೆಗಳ 62 ಅಭ್ಯರ್ಥಿಗಳು ಕೂಡ ನಕಲಿ ಅಂಕಪಟ್ಟಿ ಸಲ್ಲಿಸಿರುವ ಮಾಹಿತಿಯಿದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಬೆಂಗಳೂರು ಪೊಲೀಸ್ ಕಮೀಷನರ್ ದಯಾನಂದ್ ತಿಳಿಸಿದ್ದಾರೆ.

ಜಲ ಸಂಪನ್ಮೂಲ ಇಲಾಖೆಯಲ್ಲಿ ಬ್ಯಾಕ್ಲಾಗ್ ಕೋಟಾದಲ್ಲಿದ್ದ ದ್ವಿತೀಯ ದರ್ಜೆ ಸಹಾಯಕರ 182 ಹುದ್ದೆಗಳ ಭರ್ತಿಗೆ 2022ರಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸಿದ್ದವರಲ್ಲಿ 62 ಅಭ್ಯರ್ಥಿಗಳು ಇಲಾಖೆ ನಿಗದಿಪಡಿಸಿದ್ದ ಅರ್ಹತೆ ಹೊಂದಿರಲಿಲ್ಲ. ಆದರೂ ನಕಲಿ ದಾಖಲೆಗಳನ್ನು ಸಲ್ಲಿಸಿ ಹುದ್ದೆ ಪಡೆಯಲು ಪ್ರಯತ್ನಿಸಿದ್ದರು. ನಕಲಿ ಅಂಕಪಟ್ಟಿ ತಯಾರಿಸುವ ಜಾಲದ ಸಹಾಯದಿಂದ ಈ ಕೃತ್ಯ ನಡೆದಿರುವುದು ತಿಳಿದಿತ್ತು.
ದ್ವಿತೀಯ ಪಿಯುಸಿ ನಕಲಿ ಅಂಕಪಟ್ಟಿಗಳನ್ನು ಸೃಷ್ಟಿಸಿಕೊಂಡು, ಆನ್ಲೈನ್ ಮೂಲಕ ಜಲ ಸಂಪನ್ಮೂಲ ಇಲಾಖೆಯ ನೇಮಕಾತಿ ಪ್ರಾಧಿಕಾರಕ್ಕೆ ಸಲ್ಲಿಸಿದ್ದರು. ದಾಖಲೆ ಪರಿಶೀಲನೆ ವೇಳೆ ಈ ಅಕ್ರಮದ ಸುಳಿವು ಸಿಕ್ಕಿತ್ತು. ಆಗ ಇಲಾಖೆ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದರು.
ಈ ಜಾಲ ಹೇಗಿತ್ತು?: ಸಿಸಿಬಿ ಅಧಿಕಾರಿಗಳ ಮಾಹಿತಿ ಪ್ರಕಾರ, ಬ್ರೋಕರ್ಗಳು ಮಳಿಗೆಯೊಂದನ್ನು ಬಾಡಿಗೆಗೆ ಪಡೆದು ಅಲ್ಲಿ ಕಂಪ್ಯೂಟರ್ ನೆರವಿನಿಂದ ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದರು. ಮೂವರು ಸರ್ಕಾರಿ ನೌಕರರು ಅಭ್ಯರ್ಥಿಗಳನ್ನು ಹುಡುಕಿ ಈ ಬ್ರೋಕರ್ಗಳ ಬಳಿಗೆ ಕಳುಹಿಸುತ್ತಿದ್ದರು.
ಬಂಧನಕ್ಕೆ ಒಳಗಾಗಿರುವ ಬಹುತೇಕರು ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಫೇಲ್ ಆಗಿದ್ದಾರೆ. ಹಾಗಾಗಿ ಸರ್ಕಾರಿ ಹುದ್ದೆ ಪಡೆಯಲು ನಕಲಿ ಅಂಕಪಟ್ಟಿ ಪಡೆದುಕೊಂಡಿದ್ದರು. ಒಂದು ನಕಲಿ ಅಂಕಪಟ್ಟಿಗೆ 5,000 ರೂಪಾಯಿಯಿಂದ 6,000 ರೂಪಾಯಿ ವಸೂಲಿ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇಂತಹ ಜಾಲಗಳಿಂದಲೇ ಪ್ರತಿಭಾವಂತರಿಗೆ ಸರ್ಕಾರಿ ಕೆಲಸ ಕನಸಾಗಿಯೇ ಉಳಿದುಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತವಾಗಿದೆ.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್












Click it and Unblock the Notifications