ರಾಜ್ಯದಲ್ಲಿ ಎಚ್1ಎನ್1ನಿಂದ 39 ಮಂದಿ ಸಾವು: ಸೋಂಕಿತರ ಸಂಖ್ಯೆ 1428
ಬೆಂಗಳೂರು, ಏ.25: ರಾಜ್ಯದಲ್ಲಿ ಮಂಗನ ಕಾಯಿಲೆ ಬಳಿಕ ಮತ್ತೆ ಎಚ್1ಎನ್1 ರೋಗ ಭೀತಿ ತಲೆದೂಗಿದೆ. ಈಗಾಗಲೇ ಜನವರಿಯಿಂದ ಇಲ್ಲಿಯವರೆಗೆ 39ಮಂದಿಯನ್ನು ಬಲಿತೆಗೆದುಕೊಂಡಿದೆ.
ಆರೋಗ್ಯ ಇಲಾಖೆಯ ಸಾಂಕ್ರಾಮಿಕ ರೋಗಗಳ ವಿಭಾಗದ ಅಂಕಿ ಅಂಶದ ಪ್ರಕಾರ ರಾಜ್ಯದಲ್ಲಿ ಹಂದಿ ಜ್ವರ ಸೋಮಕಿತರ ಸಂಖ್ಯೆ 1,428ಕ್ಕೆ ಏರಿಕೆಯಾಗಿದೆ. ಅಲ್ಲದೆ ಜನವರಿಯಿಂದ ಇಲ್ಲಿವರೆಗೆ ಒಟ್ಟು 39 ಮಂದಿ ಮೃತಪಟ್ಟಿದ್ದಾರೆ.
ಈ ಪೈಕಿ ಏ.9ರಿಂದ ಇಲ್ಲಿಯವರೆಗೆ 154 ಪ್ರಕರಣ ದೃಢಪಟ್ಟಿದೆ. 25 ಮಂದಿ ಸೋಂಕಿತರು ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಶಂಕಿತ 5,473 ಮಂದಿಯ ಸ್ವಾಬ್ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅದರಲ್ಲಿ 1428 ಮಂದಿಗೆ ಈ ರೋಗ ಇರುವುದು ತಿಳಿದುಬಂದಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಎಚ್1ಎನ್1
ಒಟ್ಟು ಪ್ರಕರಣಗಳ ಪೈಕಿ ಬಿಬಿಎಂಪಿ ವ್ಯಾಪ್ತಿಯಲ್ಲಿ 227 ಪ್ರಕರಣ ದೃಢಪಟ್ಟಿದ್ದು ಜನವರಿಯಿಂದ ಈವರೆಗೆ ಒಟ್ಟು 3 ಮಂದಿ ಮೃತಪಟ್ಟಿದ್ದಾರೆ. ಆದರೆ, ಕಳೆದ ಒಂದು ತಿಂಗಳಿಂದ ಯಾವುದೇ ಸಾವು ವರದಿಯಾಗಿಲ್ಲ.ಉಳಿದಂತೆ
ಶಿವಮೊಗ್ಗ-136(6) ಸಾವು
ಮೈಸೂರು-120(4 ಸಾವು)
ದಾವಣಗೆರೆ-67(5ಸಾವು)
ಉತ್ತರಕನ್ನಡ-24(5ಸಾವು)
ಚಿತ್ರದುರ್ಗ-45(4ಸಾವು)
ಹಾಸನ-46(3ಸಾವು)

ಲಸಿಕೆ ಎಲ್ಲರಿಗಿಲ್ಲ
ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆ, ಮಣಿಪಾಲ್ ಆಸ್ಪತ್ರೆ, ನಾರಾಯಣ ಹೆಲ್ತ್ ಏರ್ಫೋರ್ಸ್ ಕಮಾಂಡ್ ಆಸ್ಪತ್ರೆ, ಮಣಿಪಾಲ್ ಆಸ್ಪತ್ರೆಯ ಪ್ರಯೋಗಾಲಯಗಳನ್ನು ತೆರೆಯಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಲಸಿಕೆ ಇದೆಯಾದರೂ ಅದನ್ನು ಎಲ್ಲರಿಗೂ ನೀಡಲು ಸಾಧ್ಯವಿಲ್ಲ, ಸೋಂಕಿತ ರೋಗಿಗಳನ್ನು ಉಪಚರಿಸುವ ಶುಶ್ರೂಶಕರಿಗೆ ಮಾತ್ರವೇ ಲಸಿಕೆ ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಂದಿ ಜ್ವರ ಬಂದರೆ ಹೀಗೆ ಮಾಡಿ
ಎಚ್1 ಎನ್1 ಸೋಂಕು ಉಂಟಾದ ರೋಗಿಯಲ್ಲಿ ಶ್ವಾಸಕೋಶದ ಸೋಂಕು ಕಾಣಿಸಿಕೊಂಡು ನೆಗಡಿ, ಕೆಮ್ಮು, ಜ್ವರದ ಜತೆಗೆ ಉಸಿರಾಟ ದ ತೊಂದರೆಯಾಗುತ್ತದ ಇಂತಹ ಲಕ್ಷಣಗಳು ಕಂಡುಬಂದರೆ ತಕ್ಷಣವೇ ವೈದ್ಯರ ಬಳಿ ತೆರಳಿ ಚಿಕಿತ್ಸೆ ಪಡೆಯಬೇಕು.
ಮುಂಜಾಗ್ರತೆಯಾಗಿ ಸೋಂಕು ಪೀಡಿತರಿಂದ ದೂರವಿರಬೇಕು. ಶಂಕಿತರೋಗಿಯನ್ನು ಪ್ರತ್ಯೇಕವಾಗಿ ಆರೈಕೆ ಮಾಡಬೇಕು. ವಯಕ್ತಿಕ ಸ್ವಚ್ಛತೆಗೆ ಹೆಚ್ಚು ಕೆಮ್ಮುವಾಗ ಸೀನುವಾಗ ಕರವಸ್ತ್ರ ಬಳಸಬೇಕು. ಸಾರ್ವಜನಿಕ ಸ್ಥಳದಲ್ಲಿ ಉಗುಳುವುದನ್ನು ಮಾಡಬಾರದು.

ರೋಗ ಲಕ್ಷಣವೇನು?
ಹಂದಿಜ್ವರ ಸೋಂಕಿತರಲ್ಲಿ ಶ್ವಾಸಕೋಶ ಸೋಂಕು ಕಾಣಿಸಿಕೊಂಡು ನೆಗಡಿ, ಕೆಮ್ಮು, ಜ್ವರದ ಜೊತೆಗೆ ನೆಗಡಿ, ಕೆಮ್ಮು, ತೀವ್ರವಾದ ಮೈ-ಕೈ ನೋವು ಕಾಣಿಸಿಕೊಳ್ಳುತ್ತಿದೆ. ಇಂತಹ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಕೊಡಸಬೇಕಾಗುತ್ತದೆ.
-
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
Gruha Arogya Scheme: ಗೃಹ ಆರೋಗ್ಯ ಯೋಜನೆ ವರದಿ ಶಾಕ್: ಗ್ರಾಮೀಣ ಪ್ರದೇಶದಲ್ಲೇ ಈ ಆರೋಗ್ಯ ಸಮಸ್ಯೆ ಹೆಚ್ಚು -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications