ಮಂಕಿಪಾಕ್ಸ್: ಕರ್ನಾಟಕದ 3ನೇ ಶಂಕಿತನ ವರದಿ ನೆಗಟಿವ್
ಬೆಂಗಳೂರು ಆಗಸ್ಟ 04: ಕರ್ನಾಟಕದಲ್ಲಿ ಮೂರನೇ ಮಂಕಿಪಾಕ್ಸ್ ಶಂಕಿತ ವ್ಯಕ್ತಿಯ ವರದಿ ನೆಗಟಿವ್ ಬಂದಿದೆ. ಈ ಮೂಲಕ ಕರ್ನಾಟಕದಲ್ಲಿ ಮೂರು ಮಂಕಿಪಾಕ್ಸ್ ಶಂಕಿತ ಪ್ರಕರಣಗಳ ವರದಿ ನೆಗಟಿವ್ ಆಗಿದ್ದು, ರಾಜ್ಯಕ್ಕೆ ಬಂದೊದಗಿದ್ದ ಆತಂಕ ಸದ್ಯಕ್ಕೆ ದೂರವಾಗಿದೆ.
ಬೆಲ್ಜಿಯಂನಿಂದ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆ ಮುಂಡಗೋಡುನಲ್ಲಿರುವ ಟಿಬೆಟಿಯನ್ ಕ್ಯಾಂಪ್ಗೆ ಬಂದಿದ್ದ 9 ವರ್ಷದ ಟಿಬೆಟಿಯನ್ ಬಾಲಕನಿಗೆ ಮಂಕಿಪಾಕ್ಸ್ ವರದಿ ನೆಗಟಿವ್ ಬಂದಿದೆ. ಈ ಬಾಲಕನ ಚರ್ಮದಲ್ಲಿ ದದ್ದು ಸೇರಿದಂತೆ ಮಂಕಿಪಾಕ್ಸ್ ಕಾಯಿಲೆಯ ಲಕ್ಷಣಗಳು ಕಂಡು ಬಂದಿದ್ದವು. ಹೀಗಾಗಿ ಆತನನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ನಂತರ ಸೋಮವಾರ ಆತನ ರಕ್ತ ಮಾದರಿ ಪಡೆದ ಬೆಂಗಳೂರಿನ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿರುವ ವೈರಸ್ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯ (ವಿಆರ್ಡಿಎಲ್)ವು ಸೂಕ್ತ ರೀತಿಯಲ್ಲಿ ತಪಾಸಣೆ ನಡೆಸಿತು.

ವಿವಿಧೆಡೆ ಸುತ್ತಾಡಿ ರಾಜ್ಯಕ್ಕೆ ಬಂದಿದ್ದ ಬಾಲಕ; ಈ ಬಾಲಕ ಮತ್ತು ಆತನ ಪೋಷಕರು ಜುಲೈ 1ರಂದು ಟಿಬೆಟಿಯನ್ ಪಾದ್ರಿಯೊಂದಿಗೆ ಭಾರತಕ್ಕೆ ಆಗಮಿಸಿದ್ದರು. ಮೊದಲು ರಾಷ್ಟ್ರ ರಾಜಧಾನಿ ದೆಹಲಿಗೆ ಬಂದು ಅಲ್ಲಿಂದ ಹಿಮಾಚಲ ಪ್ರದೇಶದ ಟಿಬೆಟಿಯನ್ ಶಿಬಿರಕ್ಕೆ ಭೇಟಿ ಕೊಟ್ಟಿದ್ದರು.
ಬಳಿಕ ಮಹಾರಾಷ್ಟ್ರದ ನಾಗ್ಪುರಕ್ಕೆ ತೆರಳಿದ್ದರು. ಇದಾದ ನಂತರ ಅವರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡುನಲ್ಲಿನ ಟಿಬೆಟಿಯನ್ ಶಿಬಿರಕ್ಕೆ ಬಂದಾಗ ಬಾಲಕನಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡು ಬಂದ ಹಿನ್ನೆಲೆ ತಪಾಸಣೆಗಾಗಿ ಆತನ ರಕ್ತದ ಮಾದರಿ ಪಡೆಯಲಾಗಿತ್ತು.
ಸದ್ಯ ಬಾಲಕನ ಮಂಕಿಪಾಕ್ಸ್ ವರದಿ ನೆಗಟಿವ್ ಬಂದಿದ್ದು, ಆತನಲ್ಲಿ ಕಂಡು ಬಂದಿದ್ದ ಲಕ್ಷಣಗಳು ವೈರಲ್ ಸೋಂಕಿನ ಲಕ್ಷಣವಾಗಿರಬಹುದು ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ಲದೇ ಇದಕ್ಕು ಮುನ್ನ ರಾಜ್ಯದಲ್ಲಿ ಒಟ್ಟು ಮೂರು ಶಂಕಿತ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದವು. ಆ ಪೈಕಿ ಇಬ್ಬರ ವರದಿ ನೆಗಟಿವ್ ಬಂದಿತ್ತು. ಈ ಟಿಬೇಟಿಯನ್ ಬಾಲಕನ ವರದಿಗಾಗಿ ಕರ್ನಾಟಕವೇ ಕುತೂಹಲದಿಂದ ಕಾದಿತ್ತು.
-
Vastu Tips: ವಾಸ್ತು ಪ್ರಕಾರ ನಮ್ಮ ಮನೆಯ ಸುತ್ತಮುತ್ತಲಿನ ವಿನ್ಯಾಸ ಹೇಗಿರಬೇಕು -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಮಾರ್ನಿಂಗ್ ವಾಕ್ vs ಈವಿನಿಂಗ್ ವಾಕ್: ಯಾವುದು ಉತ್ತಮ? -
Pomegranate Juice Benefits: 6 ದಿನಗಳಲ್ಲಿ ಕಾಣುವ ಆರೋಗ್ಯ ಬದಲಾವಣೆಗಳು -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಮನೆಯಲ್ಲಿ ಕಸದ ಬುಟ್ಟಿ ಎಲ್ಲಿ ಇಡಬೇಕು? ಈ ವಾಸ್ತು ನಿಯಮಗಳು ತಿಳಿದುಕೊಳ್ಳಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ












Click it and Unblock the Notifications