4 ಐಪಿಎಸ್ ಅಧಿಕಾರಿಗಳ ವರ್ಗಾವಣೆ, ಮೈಸೂರಿಗೆ ಹೊಸ ಆಯುಕ್ತರು

ಬೆಂಗಳೂರು, ಜನವರಿ 25 : ಕರ್ನಾಟಕ ಸರ್ಕಾರ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಮತ್ತು ಮೈಸೂರಿಗೆ ಹೊಸ ಪೊಲೀಸ್ ಆಯುಕ್ತರ ನೇಮಕವಾಗಿದೆ.

ಕರ್ನಾಟಕ ಸರ್ಕಾರ ಗುರುವಾರ ರಾತ್ರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಕೆಲವು ಅಧಿಕಾರಿಗಳಿಗೆ ಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ. ಬೆಳಗಾವಿ ನಗರಕ್ಕೆ ಹೊಸ ಆಯುಕ್ತರನ್ನು ನೇಮಕ ಮಾಡಲಾಗಿದೆ.

IPS officers

* ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಬಿ.ಎಸ್.ಲೋಕೇಶ್ ಅವರಿಗೆ ಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿ ನೇಮಕವಾಗಿದ್ದಾರೆ.

* ಗುಪ್ತಚರ ಇಲಾಖೆ ಎಸ್‌ಪಿಯಾಗಿದ್ದ ಕೆ.ಟಿ.ಬಾಲಕೃಷ್ಣ ಅವರಿಗೆ ಬಡ್ತಿ ನೀಡಲಾಗಿದೆ. ಅವರನ್ನು ಮೈಸೂರು ಪೊಲೀಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

* ಬೆಂಗಳೂರು ವೈರ್‌ಲೆಸ್ ವಿಭಾಗದ ಎಸ್‌ಪಿಯಾಗಿದ್ದ ಪಿ.ರಾಜೇಂದ್ರ ಪ್ರಸಾದ್ ಅವರಿಗೆ ಬಡ್ತಿ ನೀಡಲಾಗಿದೆ. ಅವರನ್ನು ಬೆಳಗಾವಿ ಪೊಲೀಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

* ಆರ್.ರಮೇಶ್ ಅವರನ್ನು ಯೋಜನೆ ಮತ್ತು ಆಧುನೀಕರಣ ವಿಭಾಗದ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+