ವಿಜಯಪುರದಲ್ಲಿ ಭೀಕರ ಅಪಘಾತ: ನಾಲ್ವರು ಸಾವು
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ದೇವರಹಿಪ್ಪರಗಿ ಬಳಿ ಇಂದು ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪಿದ್ದಾರೆ.
ವಿಜಯಪುರ, ಏಪ್ರಿಲ್ 26: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ಕು ಜನ ಸಾವಿಗೀಡಾದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ದೇವರಹಿಪ್ಪರಗಿ ಬಳಿ ನಡೆದಿದೆ.
ಘಟನೆಯಲ್ಲಿ ಓರ್ವ ಮಹಿಳೆ ಹಾಗೂ ಮೂವರು ಪುರುಷರು ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯವಾಗಿದೆ. ಗಾಯಗೊಂಡವರನ್ನು ಇಲ್ಲಿನ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.[ವಿಜಯಪುರ: ಆಸ್ತಿಗಾಗಿ ಪತ್ನಿ ಮೇಲೆ ಫೈರಿಂಗ್ ಮಾಡಿದ ಮಾಜಿ ಸೈನಿಕ]

ಮೃತರು ಮೂಲತಃ ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಬನಹಟ್ಟಿ ಗ್ರಾಮದವರು ಎಂದು ಗುರುತಿಸಲಾಗಿದೆ. ಘಟನೆ ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.












Click it and Unblock the Notifications