ಮುಸ್ಲಿಮರಿಗೆ ಮೀಸಲಾತಿ ವಿಚಾರ; ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಸರ್ಕಾರಿ ಟೆಂಡರ್ ನಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಚಾರವನ್ನು ಬಿಜೆಪಿ ಟೀಕಿಸಿದೆ. ಪ್ರತಿಪಕ್ಷಗಳ ಟೀಕೆಗಲಿಗೆ ಉತ್ತರ ನೀಡಿರುವ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರಕ್ಕೆ ಬೆಂಬಲ ಕೊಟ್ಟಿದ್ದು, ಈ ಕೋಟಾ ಉದ್ಯೋಗ ಅಥವಾ ಶಿಕ್ಷಣ ಕ್ಷೇತ್ರಕ್ಕೆ ಅನ್ವಯಿಸಲ್ಲ, ಸರ್ಕಾರಿ ಯೋಜನೆಗಳಿಗೆ ಬಿಡ್ ಮಾಡಲು ಮಾತ್ರ ಗುತ್ತಿಗೆದಾರರಿಗೆ ಮಾತ್ರ ಇದು ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, 4% ಕೋಟಾ ಮುಸ್ಲಿಮರಿಗೆ ಮಾತ್ರ ಎನ್ನುವುದನ್ನುನಿರಾಕರಿಸಿದ್ದಾರೆ. ಇದು 4% ಕೋಟಾ ಮುಸ್ಲಿಮರಿಗೆ ಮಾತ್ರವಲ್ಲ, ಎಲ್ಲಾ ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವರ್ಗಗಳಿಗೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸಿದ್ದರಾಮಯ್ಯ ಶುಕ್ರವಾರ 2025-26ರ ರಾಜ್ಯ ಬಜೆಟ್ನಲ್ಲಿ ಸರ್ಕಾರಿ ಒಪ್ಪಂದಗಳಲ್ಲಿ ಮೀಸಲಾತಿಯನ್ನು ಘೋಷಿಸಿದರು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕಾಗಿ 42,018 ಕೋಟಿ ರೂ.ಗಳನ್ನು ಹಂಚಿಕೆ ಮಾಡಿದ್ದಾರೆ.
ಬಜೆಟ್ ಭಾಷಣದ ಸಂದರ್ಭದಲ್ಲಿ ಯಾವುದೇ ಸಮುದಾಯದ ಹೆಸರನ್ನು ಉಲ್ಲೇಖಿಸದಿದ್ದರೂ, ಬಜೆಟ್ನಲ್ಲಿ ಮುಸ್ಲಿಮರನ್ನು ಪ್ರತ್ಯೇಕವಾಗಿ ಒಳಗೊಂಡಿರುವ ವರ್ಗ 2ಬಿಗೆ ಸೇರಿದೆ. ಸಾರ್ವಜನಿಕ ಸಂಗ್ರಹಣೆಯಲ್ಲಿ ಕರ್ನಾಟಕ ಪಾರದರ್ಶಕತೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಪ್ರವರ್ಗ-IIಎ ಮತ್ತು ಪ್ರವರ್ಗ-IIಬಿ ಗುತ್ತಿಗೆದಾರರಿಗೆ ಕಾಮಗಾರಿಗಳಲ್ಲಿ ನೀಡಲಾಗುವ ಮೀಸಲಾತಿಯನ್ನು 2 ಕೋಟಿ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಸಿದ್ದರಾಮಯ್ಯ ಬಜೆಟ್ ವೇಳೆ ತಿಳಿಸಿದರು.
ಸಾರ್ವಜನಿಕ ಸಂಗ್ರಹಣೆಯಲ್ಲಿ ಕರ್ನಾಟಕ ಪಾರದರ್ಶಕತೆ (KTPP) ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಶನಿವಾರ ಅನುಮೋದನೆ ನೀಡಲಾಗಿದೆ. ಸಾರ್ವಜನಿಕ ಇಲಾಖೆಗಳು, ನಿಗಮಗಳು ಮತ್ತು ಸಂಸ್ಥೆಗಳ ಅಡಿಯಲ್ಲಿ ಸರಕು ಮತ್ತು ಸೇವೆಗಳ ಖರೀದಿಯಲ್ಲಿ ಎಸ್ಸಿ, ಎಸ್ಟಿ, ಪ್ರವರ್ಗ 1, ಪ್ರವರ್ಗ 2ಎ ಮತ್ತು ಪ್ರವರ್ಗ 2ಬಿ ಗೆ ಸೇರಿದ ಪೂರೈಕೆದಾರರಿಗೆ 1 ಕೋಟಿ ರೂ.ಗಳವರೆಗೆ ಮೀಸಲಾತಿ ನೀಡಲಾಗುವುದು.
ಎಸ್ಸಿ, ಎಸ್ಟಿ ಮತ್ತು ಇತರ ಹಿಂದುಳಿದ ಸಮುದಾಯಗಳಿಗೆ ಒದಗಿಸಲಾದ ಮೀಸಲಾತಿಯಂತೆಯೇ ಮುಸ್ಲಿಮರಿಗೆ ಗುತ್ತಿಗೆ ಕೆಲಸಗಳಲ್ಲಿ ಶೇ. 4 ರಷ್ಟು ಮೀಸಲಾತಿ ನೀಡುವಂತೆ ಅಲ್ಪಸಂಖ್ಯಾತ ನಾಯಕರು ಮನವಿ ಮಾಡಿದ್ದರು. ಬಳಿಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು, ಅಲ್ಲಿ ಮಸೂದೆಯನ್ನು ಪರಿಚಯಿಸುವ ಬಗ್ಗೆ ಚರ್ಚೆ ನಡೆಸಲಾಗಿತ್ತು.
ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆ, 1999 ಅನ್ನು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಮಸೂದೆ ತಂದಿದೆ, ಹಣಕಾಸು ಇಲಾಖೆ ಈಗಾಗಲೇ ನೀಲನಕ್ಷೆಯನ್ನು ಸಿದ್ಧಪಡಿಸಿದೆ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ಕೆ ಪಾಟೀಲ್ ತಿದ್ದುಪಡಿಗೆ ಒಪ್ಪಿಗೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.
ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಬಿಜೆಪಿ ವ್ಯಾಪಕವಾಗಿ ಟೀಕಿಸಿದೆ. ಇದು ಅಲ್ಪ ಸಂಖ್ಯಾತರನ್ನು ಓಲೈಕೆ ಮಾಡಲು ಕಾಂಗ್ರೆಸ್ ಮಾಡಿರುವ ತಂತ್ರವಾಗಿದೆ ಎಂದು ಹೇಳಿದೆ. "ರಾಜ್ಯ ಸರ್ಕಾರ ಶಾಸಕರಿಗೆ ಯಾವುದೇ ಹಣವನ್ನು ಬಿಡುಗಡೆ ಮಾಡಿಲ್ಲ, ಯಾವುದೇ ಟೆಂಡರ್ ಕರೆಯದೆ ಮತ್ತು ಕೆಲಸ ನೀಡುತ್ತಿಲ್ಲ ಎಂದಾಗ ಮೀಸಲಾತಿಯಿಂದ ಏನು ಪ್ರಯೋಜನ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ.












Click it and Unblock the Notifications