ಬಿಜೆಪಿ ಸರ್ಕಾರದ ವಿರುದ್ಧದ ಶೇ.40ರಷ್ಟು ಕಮಿಷನ್ ಆರೋಪ: ತನಿಖೆಗೆ ಎಸ್‌ಐಟಿ ರಚಿಸಲು ಸಚಿವ ಸಂಪುಟ ನಿರ್ಧಾರ

ಬೆಂಗಳೂರು, ಏಪ್ರಿಲ್ 11: ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದ ತನಿಖೆಗೆ ಎಸ್ ಐ ಟಿ ರಚನೆ ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಆರೋಪಗಳ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್ ಅವರ ನೇತೃತ್ವದ ವಿಚಾರಣಾ ಆಯೋಗದ ವರದಿಯನ್ನು ಆಧರಿಸಿ ಹೆಚ್ಚಿನ ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚಿಸಲು ಸಚಿವ ಸಂಪುಟ ತೀರ್ಮಾನ ಕೈಗೊಂಡಿದ್ದು, ಎರಡು ತಿಂಗಳೊಳಗಾಗಿ ತನ್ನ ವರದಿಯನ್ನು ನೀಡಲು ಸೂಚಿಸುವುದಾಗಿ ಕಾನೂನು ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಅವರು ತಿಳಿಸಿದರು.

ಅವರು ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ್ ಎಸ್.ತಂಗಡಗಿ ಅವರೊಂದಿಗೆ ಮಾಧ್ಯಮಗೋಷ್ಟಿ ನಡೆಸಿ ಸಚಿವ ಸಂಪುಟ ನಿರ್ಣಯಗಳ ಬಗ್ಗೆ ಮಾಹಿತಿ ನೀಡಿದರು. ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಆರೋಪಗಳ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್‌ದಾಸ್ ಅವರ ನೇತೃತ್ವದಲ್ಲಿ ವಿಚಾರಣಾ ಆಯೋಗ ತನ್ನ ವರದಿಯನ್ನು ಸಲ್ಲಿಸಿದ್ದು, ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ.

40 Commission Allegation Against Bjp Government Sit Formed To Investigate

ವಿಚಾರಣಾ ಆಯೋಗ ದೂರುಗಳ ಬಗ್ಗೆ ಮಾಹಿತಿಯನ್ನು ನೀಡಿದ್ದಾರೆ. 3 ಲಕ್ಷ ಕಾಮಗಾರಿಗಳಲ್ಲಿ ಪೈಕಿ ಆಯೋಗವು 1729 ಕಾಮಗಾರಿಗಳ ಬಗ್ಗೆ ವಿಸ್ತೃತವಾಗಿ ಪರಿಶೀಲನೆ ನಡೆಸಲಾಗಿದೆ. ಕೆಲವುಗಳಲ್ಲಿ ಕಾಮಗಾರಿಗಳಲ್ಲಿ ಅನುದಾನಕ್ಕಿಂತ ಹೆಚ್ಚು ಕಾಮಗಾರಿಯನ್ನು ನೀಡಲಾಗಿದೆ. ಕೆಲವುಗಳಲ್ಲಿ ಅಲ್ಪ ಅನುದಾನ ಬಿಡುಗಡೆಯಾಗಿದ್ದರೂ, ಅದಕ್ಕೂ ಮೀರಿದ ಪಾವತಿಯಾಗಿದೆ. ಕೆಲವುಗಳಲ್ಲಿ ಕಾಮಗಾರಿ ನಿರ್ವಹಿಸಿರುವುದರ ಬಗ್ಗೆ ಸಂಶಯವಿದೆ. ಕೆಲವುಗಳಲ್ಲಿ ಟೆಂಡರ್ ಪ್ರಕ್ರಿಯೆಯಲ್ಲಿ ಬೇರೆಯವರಿಂದ ಹಸ್ತಕ್ಷೇಪವಾಗಿರುವುದನ್ನು ಆಯೋಗವು ಮಾಹಿತಿ ತಿಳಿಸಿದೆ.

40 Commission Allegation Against Bjp Government Sit Formed To Investigate

ಸಚಿವ ಸಂಪುಟ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ವಿಚಾರಣಾ ಆಯೋಗದ ವರದಿಯ ಮೇಲೆ ಎಸ್ ಐ ಟಿಯನ್ನು ರಚಿಸಲು ನಿರ್ಧರಿಸಲಾಗಿದ್ದು, ಇದರಲ್ಲಿ ಅಗತ್ಯವಿರುವ ಪರಿಣಿತರನ್ನು ನಿಯೋಜಿಸಿ, ಎರಡು ತಿಂಗಳಲ್ಲಿ ವರದಿಯನ್ನು ಸಲ್ಲಿಸಲು ಎಸ್ ಐ ಟಿಗೆ ಸೂಚನೆ ನೀಡಲು ಸಚಿವಸಂಪುಟ ತೀರ್ಮಾನ ಕೈಗೊಂಡಿದ್ದು ಹಾಗೂ ಸಂಬಂಧಪಟ್ಟ ಇಲಾಖೆಯಿಂದ ಅಪೂರ್ಣ ಮಾಹಿತಿಗಳಿರುವ ಬಗ್ಗೆ ವಿಚಾರಣಾ ಆಯೋಗ ತಿಳಿಸಿರುವುದರಿಂದ, ಸಂಬಂಧಪಟ್ಟ ಇಲಾಖೆಯವರೂ ಎಸ್ ಐ ಟಿ ಯವರು ಈ ಬಗ್ಗೆ ಕೇಳುವ ಮಾಹಿತಿಗಳನ್ನು ಒದಗಿಸಲು ಸೂಚನೆಯನ್ನು ನೀಡಲಾಗಿದೆ ಎಂದರು.

40% ಕಮೀಷನ್‌ನ ವಿಚಾರ ವರದಿಯಲ್ಲಿ ಉಲ್ಲೇಖಿಸಲಾಗಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಕಾಮಗಾರಿ ಗುತ್ತಿಗೆ ನೀಡುವ ವಿಚಾರದಲ್ಲಿ ಲಂಚ ವ್ಯವಹಾರ ನಡೆದಿರುವ ಬಗ್ಗೆ ಆಯೋಗದ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ. ದೂರು ಬಂದಿರುವ ಇಲಾಖೆಗಳ ಕಾಮಗಾರಿಗಳ ಬಗ್ಗೆ ಆಯೋಗವು ಪರಿಶೀಲನೆ ನಡೆಸಿದೆ. ಆಯೋಗವು ಗುತ್ತಿಗೆದಾರ ದೂರುಗಳನ್ನು ಪರಿಗಣಿಸಿ, ವಿಚಾರಣೆ ನಡೆಸಿದೆ ಎಂದು ಕಾನೂನು ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ.ಪಾಟೀಲ್ ಅವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+