42 ಕೋಟಿ ಹಿಂದಿರುವ ‘ಕೈ’ಗಳನ್ನು ಪತ್ತೆ ಮಾಡಲು ಸಿಬಿಐ ತನಿಖೆ: ಡಿ.ವಿ.ಸದಾನಂದಗೌಡ ಆಗ್ರಹ
ಬೆಂಗಳೂರು,ಅಕ್ಟೋಬರ್ 17: ಗುತ್ತಿಗೆದಾರರ ಮನೆಯಲ್ಲಿ ಸಿಕ್ಕಿದ ಹಣದ ಕುರಿತ ಪರದೇ ಕೆ ಪೀಛೇ ಇರುವ ಕಾಂಗ್ರೆಸ್ ಕೈಗಳನ್ನು ಹೊರಕ್ಕೆ ತರಲು ಸಿಬಿಐ ಈ ಪ್ರಕರಣದ ತನಿಖೆಯನ್ನು ಸ್ವಯಂಪ್ರೇರಿತವಾಗಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ ಆಗ್ರಹಿಸಿದರು.
ಈ ಕುರಿತು ಮಂಗಳವಾರ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬಿಜೆಪಿ ವತಿಯಿಂದ ಇಂದು ನಡೆದ ಬೃಹತ್ ಪ್ರತಿಭಟನೆಯ ಸಂದರ್ಭದಲ್ಲಿ ಅವರು ಮಾತನಾಡಿ, ಕಾಂಗ್ರೆಸ್ಸಿನ ಮುಖವಾಡ ಕಳಚುವ ಕೆಲಸ ಆಗಬೇಕು. ಇಡೀ ದೇಶಕ್ಕೆ ಒಂದು ಸಂದೇಶ ಕೊಡುವ ಕೆಲಸ ಆಗಲಿ ಎಂದು ಅವರು ಆಶಿಸಿದರು. ಸರಕಾರ 650 ಕೋಟಿ ಕೊಟ್ಟದ್ದಕ್ಕೆ ಪ್ರತಿಯಾಗಿ ಕಮಿಷನ್ ರೂಪದಲ್ಲಿ ಗುತ್ತಿಗೆದಾರರು ಹಣ ನೀಡಿದ್ದಾರೆ. ಇದರಲ್ಲಿ ಒಂದಷ್ಟು ಮೊತ್ತ ಈಗಾಗಲೇ ಬೇರೆಬೇರೆ ರಾಜ್ಯಗಳಿಗೆ ಕಳಿಸಿದ್ದಾರೆ ಎಂದು ಆರೋಪಿಸಿದರು.

ಕಾಂಗ್ರೆಸ್ ಮುಕ್ತ ಭಾರತ ಮಾಡುವ ಸಂಕಲ್ಪದಲ್ಲಿ ಒಂದಷ್ಟು ಹಂತವನ್ನು ನಾವು ತಲುಪಿದ್ದೇವೆ. ಆಸೆ, ಆಮಿಷ ತೋರಿಸಿ ಜನರ ಹಾದಿ ತಪ್ಪಿಸಿ ಚುನಾವಣೆಯಲ್ಲಿ ಅಧಿಕಾರ ಪಡೆದ ಕಾಂಗ್ರೆಸ್ ತನ್ನ ಹಳೆಯ ಚಾಳಿಯನ್ನು ಮುಂದುವರಿಸಿದೆ ಎಂದು ತಿಳಿಸಿದರು. ರಾಜ್ಯದ ಪರಿಸ್ಥಿತಿ ಅಧೋಗತಿಗೆ ಬಂದ ಬಗ್ಗೆ ಬಿಜೆಪಿಯ ನಮಗೆಲ್ಲರಿಗೂ ನೋವಿದೆ. ದೇಶದೆಲ್ಲೆಡೆ ಜನರು ಕರ್ನಾಟಕದ ಬಗ್ಗೆ ನಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಭ್ರಷ್ಟಾಚಾರ, ಲೂಟಿ ಕಾಂಗ್ರೆಸ್ಸಿನ ರಕ್ತದಲ್ಲಿದೆ. ಕಾಂಗ್ರೆಸ್, ರಾಜ್ಯದ ಅಭಿವೃದ್ಧಿಗೆ ಅನ್ಯಾಯ ಮಾಡುತ್ತಿದೆ. ಅಂಬಿಕಾಪತಿಗೆ 42 ಕೋಟಿ ಎಲ್ಲಿಂದ ಬಂತು ಎಂದು ಪ್ರಶ್ನಿಸಿದ ಅವರು, ಈ ಪ್ರಕರಣವನ್ನು ಮುಚ್ಚಿಹಾಕಲು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಮುಂದಾಗಿದ್ದಾರೆ ಎಂದು ಆರೋಪಿಸಿದರು.
ನಮ್ಮ ಹೋರಾಟ ಇಲ್ಲಿಗೇ ನಿಲ್ಲುವುದಿಲ್ಲ. ಅತ್ಯಂತ ನೋವಿನ ಸ್ಥಿತಿಯಲ್ಲಿರುವ ರಾಜ್ಯದ ಜನರ ಪರವಾಗಿ ಬಿಜೆಪಿ ನಿಲ್ಲಲಿದೆ ಎಂದು ಅವರು ತಿಳಿಸಿದರು. ಮಹಿಳೆಯರಿಗೆ ನೀಡುವ 2 ಸಾವಿರ ರೂಪಾಯಿ ಹಣ ರಾಜ್ಯದ ಅರ್ಧದಷ್ಟು ಜನರಿಗೆ ಸಿಕ್ಕಿಲ್ಲ. ಹಣ ಸಿಕ್ಕಿದ ವಿಷಯವೂ ತನಿಖೆಗೆ ಯೋಗ್ಯವಾಗಿದೆ; ಅದು ಇವರ ಜೋಬಿಗೆ ಹೋಗಿರುವ ಸಾಧ್ಯತೆ ಇದೆ. ಹಣ ಲೂಟಿ ಹೊಡೆಯಲೆಂದೇ 5 ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದಾರೆ ಎಂದು ಅವರು ವ್ಯಂಗ್ಯವಾಡಿದರು.
ಈ ಪ್ರತಿಭಟನೆಯಲ್ಲಿ ರಾಜ್ಯದ ಮಾಜಿ ಸಚಿವಸಿ.ಎನ್.ಅಶ್ವತ್ಥ್ನಾರಾಯಣ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್, ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಮುಖಂಡರಾದ ನೆ.ಲ.ನರೇಂದ್ರ ಬಾಬು, ಭಾಸ್ಕರ ರಾವ್, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ನಗರ ಜಿಲ್ಲಾ ಅಧ್ಯಕ್ಷರಾದ ಮಂಜುನಾಥ ಜಿ, ನಾರಾಯಣ ಗೌಡ, ಪಕ್ಷದ ಮುಖಂಡರು, ಕಾರ್ಯ ಕರ್ತರು ಭಾಗವಹಿಸಿದ್ದರು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications