ಕರ್ನಾಟಕದ 4 ಜಿಲ್ಲೆಗಳಲ್ಲೇ ಒಂದೇ ಒಂದು ಕೊವಿಡ್-19 ಪ್ರಕರಣಗಳಿಲ್ಲ!
ಬೆಂಗಳೂರು, ಜನವರಿ.27: ರಾಜ್ಯದಲ್ಲಿ ಕೊರೊನಾವೈರಸ್ ಅಟ್ಟಹಾಸದ ಪ್ರಮಾಣ ಬಹುತೇಕ ತಗ್ಗಿದೆ. ಕಳೆದ 24 ಗಂಟೆಗಳಲ್ಲಿ 428 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 937383ಕ್ಕೆ ಏರಿಕೆಯಾಗಿದೆ.
ಕರ್ನಾಟಕದಲ್ಲಿ ಮಹಾಮಾರಿಗೆ ಬಲಿಯಾಗುತ್ತಿದ್ದವ ಸಂಖ್ಯೆ ಕೂಡಾ ಇಳಿಮುಖವಾಗಿದೆ. ಕಳೆದೊಂದು ದಿನದಲ್ಲಿ ಕೊರೊನಾವೈರಸ್ ನಿಂದ ಮೂವರು ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆ 12207ಕ್ಕೆ ಏರಿಕೆ ಆಗಿರುವುದು ಗೊತ್ತಾಗಿದೆ.
ಸಿಹಿಸುದ್ದಿ: 8 ತಿಂಗಳಿನಲ್ಲೇ ಮೊದಲ ಬಾರಿಗೆ ಕೊರೊನಾವೈರಸ್ ದಾಖಲೆ!
ಬುಧವಾರದ ಅಂಕಿ-ಅಂಶಗಳ ಪ್ರಕಾರ, ಒಟ್ಟು 937383 ಸೋಂಕಿತ ಪ್ರಕರಣಗಳ ಪೈಕಿ 918859 ಸೋಂಕಿತರು ಗುಣಮುಖರಾಗಿದ್ದಾರೆ. ಒಂದು ದಿನದಲ್ಲೇ 760 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ ರಾಜ್ಯದಲ್ಲಿ 6298 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಮಾಹಿತಿ ನೀಡಿದೆ.
ಯಾವ ರಾಜ್ಯದಲ್ಲಿ ಎಷ್ಟು ಕೊವಿಡ್-19 ಪ್ರಕರಣ?
ರಾಜ್ಯದಲ್ಲಿ ಒಟ್ಟು 428 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 9, ಬೆಂಗಳೂರು ಗ್ರಾಮಾಂತರ 7, ಬೆಂಗಳೂರು 227, ಬೀದರ್ 2, ಚಾಮರಾಜನಗರ 3, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 6, ಚಿತ್ರದುರ್ಗ 13, ದಕ್ಷಿಣ ಕನ್ನಡ 14, ದಾವಣಗೆರೆ 14, ಧಾರವಾಡ 16, ಗದಗ 1, ಹಾಸನ 15, ಹಾವೇರಿ 0, ಕಲಬುರಗಿ 12, ಕೊಡಗು 14, ಕೋಲಾರ 4, ಕೊಪ್ಪಳ 0, ಮಂಡ್ಯ 8, ಮೈಸೂರು 17, ರಾಯಚೂರು 1, ರಾಮನಗರ 0, ಶಿವಮೊಗ್ಗ 4, ತುಮಕೂರು 10, ಉಡುಪಿ 6, ಉತ್ತರ ಕನ್ನಡ 14, ವಿಜಯಪುರ 2, ಯಾದಗಿರಿ 2 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.