ರಾಜ್ಯದಲ್ಲಿ 48 ಮಕ್ಕಳನ್ನು ಅನಾಥರನ್ನಾಗಿಸಿದ ಕೋವಿಡ್: ಇಬ್ಬರೂ ಪೋಷಕರು ಸೋಂಕಿಗೆ ಬಲಿ
ಮಡಿಕೇರಿ, ಜೂ.19: ಸಾಂಕ್ರಾಮಿಕ ಸೋಂಕಿನ ಮೂರನೇ ಅಲೆಯ ಸಂದರ್ಭದಲ್ಲಿ ಮಕ್ಕಳು ಹೆಚ್ಚಾಗಿ ಕೊರೊನಾ ಸೋಂಕಿಗೆ ಒಳಗಾಗಲಿದ್ದಾರೆ ಎಂಬ ಆತಂಕವಿದೆ. ಈ ಹಿನ್ನೆಲೆ ದೇಶಾದ್ಯಂತ, ತಜ್ಞರು ಮತ್ತು ಸರ್ಕಾರವು ಕೋವಿಡ್ -19 ರ ಸೋಂಕಿನಿಂದ ಮಕ್ಕಳನ್ನು ಹೇಗೆ ರಕ್ಷಿಸಬೇಕು ಎಂಬುದರ ಕುರಿತು ಚರ್ಚಿಸುತ್ತಿದೆ. ಆದರೆ ಈಗಾಗಲೇ ದೇಶದಾದ್ಯಂತ ಸಾವಿರಾರು ಮಕ್ಕಳು ಕೋವಿಡ್ ಕಾರಣದಿಂದಾಗಿ ತಮ್ಮ ಪೋಷಕರನ್ನು ಕಳೆದುಕೊಂಡು ಅನಾಥರಾಗಿದ್ದಾರೆ.
ಸಾಂಕ್ರಾಮಿಕ ರೋಗವು ಈಗಾಗಲೇ ಕರ್ನಾಟಕದಾದ್ಯಂತ ನೂರಾರು ಮಕ್ಕಳ ಬಾಲ್ಯದ ಮೇಲೆ ಭಾರಿ ಪರಿಣಾಮವನ್ನುಂಟು ಮಾಡಿದೆ. ಕೋವಿಡ್ ಸೋಂಕಿನ ಕಾರಣದಿಂದಾಗಿ ರಾಜ್ಯಾದ್ಯಂತ 48 ಮಕ್ಕಳು ತಮ್ಮ ಹೆತ್ತವರನ್ನು ಕಳೆದುಕೊಂಡಿದ್ದಾರೆ. ನೂರಾರು ಮಂದಿ ಕೊರೊನಾ ಕಾರಣದಿಂದಾಗಿ ತಮ್ಮ ಓರ್ವ ಪೋಷಕರನ್ನು ಕಳೆದುಕೊಂಡಿದ್ದಾರೆ.
''ಕೊಡಗಿನ ಗುಡ್ಡಗಾಡು ಜಿಲ್ಲೆಯಲ್ಲಿ, ಮೂರು ಮಕ್ಕಳು ಕೋವಿಡ್ ಪರಿಣಾಮ ಇಬ್ಬರೂ ಪೋಷಕರನ್ನು ಕಳೆದುಕೊಂಡಿದ್ದಾರೆ. ಇನ್ನೂ 35 ಮಕ್ಕಳ ಪೋಷಕರ ಪೈಕಿ ತಂದೆ ಅಥವಾ ತಾಯಿ, ಒಬ್ಬರು ಕೊರೊನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಾರಂಭಿಸಿದ 'ಬಾಲ ಸೇವಾ' ಯೋಜನೆಯಡಿ ಇಲಾಖೆ ಈ ಅನಾಥ ಮಕ್ಕಳನ್ನು ತಲುಪುತ್ತಿದೆ,'' ಎಂದು ಕರ್ನಾಟಕ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವ ಶಶಿಕಲಾ ಜೊಲ್ಲೆ ಶುಕ್ರವಾರ ಹೇಳಿದ್ದಾರೆ.

ಕೋವಿಡ್ -19 ರ ನಿರೀಕ್ಷಿತ ಮೂರನೇ ಅಲೆಗಿಂತ ಮುಂಚಿತವಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಚರ್ಚಿಸಲು ಮಡಿಕೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ಶಶಿಕಲಾ, ಪ್ರತಿ ತಾಲೂಕಿನಲ್ಲಿ ಮಕ್ಕಳಿಗಾಗಿ ಮೀಸಲಾದ ಕೋವಿಡ್ ಕೇರ್ ಕೇಂದ್ರಗಳನ್ನು ಸ್ಥಾಪಿಸಲಾಗುವಂತೆ ನೋಡಿಕೊಳ್ಳಲು ಕೊಡಗಿನ ತನ್ನ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಅಗತ್ಯವಾದ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದರು.
''ಕೊಡಗಿನಲ್ಲಿ 2,380 ಮಕ್ಕಳು ಎರಡನೇ ಅಲೆಯ ಸಂದರ್ಭ ಸೋಂಕಿನ ಪರಿಣಾಮಕ್ಕೆ ಒಳಗಾಗಿದ್ದಾರೆ. ಈ ಪೈಕಿ 16 ಮಂದಿ ಹೊರತುಪಡಿಸಿ ಉಳಿದವರೆಲ್ಲರೂ ಸೋಂಕಿನಿಂದ ಚೇತರಿಸಿಕೊಂಡಿದ್ದಾರ,'' ಎಂದು ಹೇಳಿದ ಸಚಿವೆ, ಅನಾಥ ಮಕ್ಕಳ ಸುಧಾರಣೆಗೆ ದೇಣಿಗೆ ನೀಡುವಂತೆ ಮನವಿ ಮಾಡಿದರು. ಈ ಮಕ್ಕಳನ್ನು ದತ್ತು ಪಡೆಯಲು ಆಸಕ್ತಿ ಹೊಂದಿರುವವರಿಗೆ ಇಲಾಖೆಯಿಂದ ಎಲ್ಲಾ ಕಾನೂನು ಬೆಂಬಲವನ್ನು ನೀಡಲಾಗುವುದು ಎಂದು ಭರವಸೆ ನೀಡಿದರು.
(ಒನ್ಇಂಡಿಯಾ ಸುದ್ದಿ)
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications