Get Updates
Get notified of breaking news, exclusive insights, and must-see stories!

ಹಿಮಾಚಲಕ್ಕೆ ₹5 ಕೋಟಿ: ಹೊರಗೆ ಔದಾರ್ಯ, ಇಲ್ಲಿ ಉದಾಸೀನತೆ ಏಕೆ? ಎಂದ ಯದುವೀರ್‌

ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಭೀಕರ ಪ್ರವಾಹದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ₹5 ಕೋಟಿ ಪರಿಹಾರ ಘೋಷಣೆ ಮಾಡಿರುವುದು ವಿರೋಧಕ್ಕೆ ಕಾರಣವಾಗಿದೆ. ಕರ್ನಾಟಕದಲ್ಲೇ ಸಮಸ್ಯೆಗಳು ತುಂಬಿ ತುಳುಕಾಡುತ್ತಿರುವಾಗ ಹೊರರಾಜ್ಯದ ಸಮಸ್ಯೆಗೆ ನಿಮ್ಮ ಕಾಳಜಿ ವಿಪರ್ಯಾಸ ಎಂದು ಬಿಜೆಪಿ ನಾಯಕರು ಟೀಕೆ ಮಾಡುತ್ತಿದ್ದಾರೆ. ಬಿಜೆಪಿ ಸಂಸದ ಯದುವೀರ್‌ ಒಡೆಯರ್‌ ಕೂಡ ಸಿದ್ದರಾಮಯ್ಯ ಅವರ ನಡೆಯನ್ನು ಖಂಡಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ಅಪಾರ ಜೀವ, ಮನೆ ಮತ್ತು ಜೀವನೋಪಾಯಕ್ಕೆ ಹಾನಿ ಮಾಡಿದೆ. ಕರ್ನಾಟಕದ ಜನರು ಈ ನೋವನ್ನು ಹಂಚಿಕೊಳ್ಳುತ್ತಾರೆ ಮತ್ತು ಹಿಮಾಚಲದ ಜನರೊಂದಿಗೆ ಒಗ್ಗಟ್ಟಿನಿಂದ ನಿಲ್ಲುತ್ತಾರೆ. ಬೆಂಬಲದ ಸಂಕೇತವಾಗಿ, ನಮ್ಮ ಸರ್ಕಾರ ಪರಿಹಾರ ಮತ್ತು ಪುನರ್ವಸತಿಗಾಗಿ ₹5 ಕೋಟಿ ಕೊಡುಗೆ ನೀಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಈ ದುಃಖದ ಸಮಯದಲ್ಲಿ ಹಿಮಾಚಲದ ಜನರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತೇವೆ. ಒಟ್ಟಾಗಿ, ನಾವು ಈ ದುರಂತವನ್ನು ನಿವಾರಿಸುತ್ತೇವೆ ಎಂದಿದ್ದಾರೆ.

5 Crore Relief To Himachal Pradesh Sparks Controversy Yaduveer Questions CM Siddaramaiah

ಇದಕ್ಕೆ ಯದುವೀರ್‌ ಒಡೆಯರ್‌ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಉತ್ತರ ಭಾರತದ ಹಲವಾರು ರಾಜ್ಯಗಳು ಪ್ರವಾಹದಿಂದ ತತ್ತರಿಸುತ್ತಿವೆ. ಆದರೆ ನಿಮ್ಮ ಸರ್ಕಾರ ಕಾಂಗ್ರೆಸ್ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶಕ್ಕೆ ಮಾತ್ರ ₹5 ಕೋಟಿ ಘೋಷಿಸಿದೆ. ಇದಕ್ಕೂ ಮೊದಲು, ಕೇರಳದ ವಯನಾಡಿನಲ್ಲಿ ಪ್ರವಾಹ ಬಂದಾಗ, ನೀವು ಕರ್ನಾಟಕದ ಖಜಾನೆಯಿಂದ ಸಹಾಯ ಬಿಡುಗಡೆ ಮಾಡಲು ಆತುರಪಟ್ಟಿದ್ದೀರಿ. ಸ್ಪಷ್ಟವಾಗಿ, ನಿಮ್ಮ ಆದ್ಯತೆಗಳು ರಾಜಕೀಯ, ಮಾನವೀಯವಲ್ಲ ಎಂದು ಟೀಕಿಸಿದ್ದಾರೆ.

ಆದರೆ ಕರ್ನಾಟಕದಲ್ಲಿ ಎಐಸಿಸಿ ಅಧ್ಯಕ್ಷರು ಪರಿಹಾರ ಕೋರುತ್ತಿರುವ ಬಡ ರೈತನನ್ನು ಅಪಹಾಸ್ಯ ಮಾಡುತ್ತಾರೆ. ಹಾಸನ ದುರಂತದ ಬಲಿಪಶುಗಳು ಇನ್ನೂ ನ್ಯಾಯಯುತ ಪರಿಹಾರಕ್ಕಾಗಿ ಕಾಯುತ್ತಿದ್ದಾರೆ. ಮತ್ತು ಪ್ರವಾಹ ಪೀಡಿತ ಉತ್ತರ ಕನ್ನಡ ಇನ್ನೂ ನಿಮ್ಮ ಸರ್ಕಾರ ಏನು ಪರಿಹಾರ ನೀಡಿದೆ ಎಂದು ಕೇಳುತ್ತಿದ್ದಾರೆ. ಕನ್ನಡಿಗರ ಸಂಕಷ್ಟಗಳು ಹೆಚ್ಚಾಗುತ್ತಲೇ ಇವೆ. ರಾಜ್ಯದ ಹೊರಗೆ ಈ ಔದಾರ್ಯ, ಆದರೆ ಮನೆಯಲ್ಲಿ ಉದಾಸೀನತೆ ಏಕೆ? ಎಂದು ಯದುವೀರ್‌ ಪ್ರಶ್ನಿಸಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಕೂಡ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ. ಕರ್ನಾಟಕವು ಹಿಮಾಚಲ ಪ್ರದೇಶಕ್ಕೆ 5 ಕೋಟಿ ರೂ.ಗಳನ್ನು ನೀಡಿದರೆ, ಇತ್ತೀಚೆಗೆ ಹಾಸನದಲ್ಲಿ ಸಂಭವಿಸಿದ ಅಪಘಾತದ ಸಂತ್ರಸ್ತರಿಗೆ ಕೇವಲ 5 ಲಕ್ಷ ರೂ.ಗಳನ್ನು ಮಾತ್ರ ನೀಡಲಾಗಿದೆ ಎಂದು ದೂರಿದ್ದಾರೆ.

ಸಟ್ಲೆಜ್, ಬಿಯಾಸ್ ಮತ್ತು ರಾವಿ ನದಿಗಳು ಉಕ್ಕಿ ಹರಿದಿದ್ದು, ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಯಿಂದಾಗಿ ಪ್ರವಾಹದ ಅವಾಂತರ ಸೃಷ್ಟಿಯಾಗಿದೆ. 1.98 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆಗಳು ಹಾನಿಗೊಳಗಾಗಿವೆ. ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟದಿಂದ ವಾಹನಗಳು ಮುಳುಗಿ, ಕೃಷಿಭೂಮಿಗಳು ಹಾನಿಗೊಳಗಾಗಿವೆ. ಪ್ರವಾಹದಿಂದಾಗಿ 500ಕ್ಕೂ ಹೆಚ್ಚು ರಸ್ತೆಗಳು ಮುಚ್ಚಲ್ಪಟ್ಟಿವೆ. 953 ವಿದ್ಯುತ್ ಪರಿವರ್ತಕಗಳು ಅಸ್ತವ್ಯಸ್ತಗೊಂಡಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+