ಖಾತೆ ಹಂಚಿಕೆ ಬೆನ್ನಲ್ಲೇ ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು, ಜೂನ್ 8: ಖಾತೆ ಹಂಚಿಕೆ ಬೆನ್ನಲ್ಲೇ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಬೆಳಗಾವಿ ಪೊಲೀಸ್ ಆಯುಕ್ತ ಮತ್ತು ಐಜಿಪಿ ಎಂ. ಚಂದ್ರಶೇಖರ್ ಅವರನ್ನು ಎಸಿಬಿಗೆ ಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
ಮಂಗಳೂರು ನಗರದ ಕಮಿಷನರ್ ಮತ್ತು ಐಜಿಪಿ ವಿಪುಲ್ ಕುಮಾರ್ ಅವರನ್ನು ಐಜಿಪಿ ಮತ್ತು ಮೈಸೂರು ಪೊಲೀಸ್ ಅಕಾಡೆಮಿಯ ನಿರ್ದೇಶಕರ ಸ್ಥಾನಕ್ಕೆ ವರ್ಗ ಮಾಡಲಾಗಿದೆ.
ಬೆಂಗಳೂರು ರೈಲ್ವೇಯ ಡಿಐಜಿಯಾಗಿದ್ದ ಡಾ. ಡಿ. ಸಿ. ರಾಜಪ್ಪ ಅವರನ್ನು ಡಿಐಜಿ ಹುದ್ದೆಯಲ್ಲೇ ಮುಂದುವರಿಸಿ ಬೆಳಗಾವಿ ಪೊಲೀಸ್ ಅಯುಕ್ತರನ್ನಾಗಿ ನೇಮಿಸಲಾಗಿದೆ.
ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ವಂಶಿಕೃಷ್ಣ ಅವರನ್ನು ದಾವಣಗೆರೆ ಪೂರ್ವವಲಯದ ಎಸಿಬಿ ಎಸ್ಪಿಯನ್ನಾಗಿ ನೇಮಕ ಮಾಡಲಾಗಿದೆ.
ಅಪರಾಧ ತನಿಖಾ ವಿಭಾಗದ ಎಸ್ಪಿಯಾಗಿದ್ದ ಸಿ.ಬಿ. ರಿಷ್ಯನಾಥ್ ಅವರನ್ನು ಬಾಗಲಕೋಟೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗ ಮಾಡಲಾಗಿದೆ.
ದು ಸಂಪುಟ ವಿಸ್ತರಣೆ ನಡೆದು ಖಾತೆ ಹಂಚಿಕೆ ಮುಗಿಯುತ್ತಿದ್ದಂತೆ ಐವರು ಐಪಿಎಸ್ ಅಧಿಕಾರಿಗಳು ವರ್ಗವಾಗಿದ್ದಾರೆ.