ಕರ್ನಾಟಕದ ಈ 5 ಜಿಲ್ಲೆಗಳ ವಿಭಜನೆಗೆ ತೆರೆಮರೆಯ ಕಸರತ್ತು, ಯಾವೆಲ್ಲಾ ಜಿಲ್ಲೆಗಳಿವೆ
ಕರ್ನಾಟಕದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿರುವ ಹಾಗೂ ಎರಡನೇ ರಾಜಧಾನಿ ಎಂದೇ ಖ್ಯಾತಿ ಗಳಿಸಿರುವ ಬೆಳಗಾವಿಯ ವಿಭಜನೆಯ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿದೆ. ಬೆಳಗಾವಿಯನ್ನು ಮೂರು ಜಿಲ್ಲೆಗಳನ್ನಾಗಿ ವಿಭಜನೆ ಮಾಡುವುದಕ್ಕೆ ರಾಜ್ಯ ಸರ್ಕಾರವು ಮುಂದಾಗಿದೆ. ಬೆಳಗಾವಿ ಮಾತ್ರವಲ್ಲದೆ ರಾಜ್ಯದ ಹಲವು ಜಿಲ್ಲೆಗಳ ವಿಭಜನೆಯ ಬಗ್ಗೆ ಹಲವು ವರ್ಷಗಳಿಂದ ಚರ್ಚೆ ನಡೆಯುತ್ತಿದೆ. ಯಾವೆಲ್ಲಾ ಜಿಲ್ಲೆಗಳ ವಿಭಜನೆಗೆ ಚರ್ಚೆ ನಡೆಯುತ್ತಿದೆ ಎನ್ನುವ ವಿವರ ನೋಡೋಣ.
ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಮೂರು ಅಥವಾ ಎರಡು ಜಿಲ್ಲೆಗಳನ್ನಾಗಿ ಮಾಡಬೇಕು ಎನ್ನುವ ಚರ್ಚೆಯು ಹಲವು ದಿನಗಳಿಂದ ನಡೆಯುತ್ತಿದೆ. ಇದೀಗ ಬೆಳಗಾವಿಯನ್ನು ವಿಭಜನೆ ಮಾಡಿ ಚಿಕ್ಕೋಡಿ ಹಾಗೂ ಗೋಕಾಕ್ ಜಿಲ್ಲೆಗಳನ್ನಾಗಿ ಘೋಷಣೆ ಮಾಡುವುದಕ್ಕೆ ಜನಾಭಿಪ್ರಾಯ ಸಂಗ್ರಹಿಸುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ. ಬೆಳಗಾವಿಯ ಜೊತೆ ಜೊತೆಗೆ ರಾಜ್ಯದಲ್ಲಿ ಇನ್ನೂ ಒಂದಷ್ಟು ಜಿಲ್ಲೆಗಳ ವಿಭಜನೆಯ ಬಗ್ಗೆಯೂ ಚರ್ಚೆಗಳು ನಡೆದಿವೆ.

ಉತ್ತರ ಕನ್ನಡ ಜಿಲ್ಲೆ ವಿಭಜನೆ ಚರ್ಚೆ
ಕರಾವಳಿಯ ಪ್ರಮುಖ ಜಿಲ್ಲೆಗಳಲ್ಲಿ ಒಂದಾಗಿರುವ ಉತ್ತರ ಕನ್ನಡ ಮತ್ತು ಶಿರಸಿ ಜಿಲ್ಲೆಗಳನ್ನು ವಿಭಜನೆ ಮಾಡಬೇಕು ಎನ್ನುವ ಚರ್ಚೆಯು ಹಲವು ವರ್ಷಗಳಿಂದ ನಡೆಯುತ್ತಿದೆ. ಉತ್ತರ ಕನ್ನಡ ಜಿಲ್ಲೆಯು ಕರ್ನಾಟಕದ ಅತಿದೊಡ್ಡ ಜಿಲ್ಲೆಗಳಲ್ಲಿ ಒಂದಾಗಿದ್ದು, ಶಿರಸಿ ಅದರ ಭಾಗವಾಗಿರುವ ಒಂದು ಪ್ರಮುಖ ತಾಲ್ಲೂಕು ಕೇಂದ್ರವಾಗಿದೆ. ಶಿರಸಿಯನ್ನು ಪ್ರತ್ಯೇಕ ಜಿಲ್ಲೆಯಾಗಿ ವಿಭಜಿಸುವ ಒತ್ತಡ ಇದೆ.
ಉತ್ತರ ಕನ್ನಡ ಜಿಲ್ಲೆಯು ಕರಾವಳಿ ಜಿಲ್ಲೆಯಾಗಿದ್ದು, 12 ತಾಲ್ಲೂಕುಗಳನ್ನು ಒಳಗೊಂಡಿದೆ. ಕಾರವಾರ, ಅಂಕೋಲಾ, ಕುಮಟಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ, ಹಳಿಯಾಳ, ದಾಂಡೇಲಿ, ಜೋಯಿಡಾ, ಮುಂಡಗೋಡ ಮತ್ತು ಯಲ್ಲಾಪುರ ಪ್ರದೇಶಗಳು ಸೇರಿವೆ. ಶಿರಸಿ ಉತ್ತರ ಕನ್ನಡ ಜಿಲ್ಲೆಯ ಒಂದು ತಾಲ್ಲೂಕು ಮತ್ತು ಉಪ ವಿಭಾಗದ ಕೇಂದ್ರವಾಗಿದೆ.
ತುಮಕೂರು ಜಿಲ್ಲೆ ವಿಭಜನೆ
ಇನ್ನು ಬೆಂಗಳೂರಿನ ಸಮೀಪದಲ್ಲೇ ಇರುವ ತುಮಕೂರು ಜಿಲ್ಲೆಯ ವಿಭಜನೆಯ ಬಗ್ಗೆಯೂ ಹಲವು ವರ್ಷಗಳಿಂದ ಚರ್ಚೆ ನಡೆದಿದೆ. ತುಮಕೂರಿನಲ್ಲಿ ಇದೀಗ ಹತ್ತು ತಾಲ್ಲೂಕುಗಳಿವೆ. ಈ ಜಿಲ್ಲೆಯಲ್ಲಿ ಹೆಚ್ಚು ತಾಲ್ಲೂಕುಗಳಿರುವುದರಿಂದ ಆಡಳಿತಾತ್ಮಕ ಸಮಸ್ಯೆ ಎದುರಾಗುತ್ತಿದ್ದು, ಇದನ್ನು ತಪ್ಪಿಸುವ ಉದ್ದೇಶದಿಂದ ಜಿಲ್ಲೆಯನ್ನು ಎರಡು ಭಾಗವಾಗಿ ವಿಭಜನೆ ಮಾಡಬೇಕು ಎನ್ನುವ ಒತ್ತಡ ಇದೆ.
ಆದರೆ ಯಾವ ತಾಲ್ಲೂಕು ಕೇಂದ್ರವನ್ನು ಹೊಸ ಜಿಲ್ಲಾ ಕೇಂದ್ರವಾಗಿಸಬೇಕು ಎನ್ನುವ ಚರ್ಚೆ ತಾರ್ಕಿಕ ಅಂತ್ಯ ಕಂಡಿಲ್ಲ. ಮಧುಗಿರಿ ಮತ್ತು ತಿಪಟೂರು ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಬೇಕು ಎನ್ನುವ ಒತ್ತಡ ಇದೆ. ಆದರೆ, ಶಿರಾ ಸಹ ವಾಣಿಜ್ಯ ಕೇಂದ್ರವಾಗಿ ಅಭಿವೃದ್ಧಿ ಕಂಡಿದೆ. ಹೀಗಾಗಿ, ಯಾವ ಹೊಸ ಜಿಲ್ಲೆ ಆಗಲಿದೆ ಎನ್ನುವುದಕ್ಕೆ ಇನ್ನೂ ಉತ್ತರ ಸಿಕ್ಕಿಲ್ಲ.
ಪ್ರಮುಖ ಜಿಲ್ಲೆಗಳ ವಿಭಜನೆಗೆ ಚರ್ಚೆ: ಸುಗಮ ಆಡಳಿತದ ದೃಷ್ಟಿಯಿಂದ ಬೆಳಗಾವಿ, ತುಮಕೂರು, ಮೈಸೂರು, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದ ಜಿಲ್ಲೆಗಳ ವಿಭಜನೆ ಮಾಡಬೇಕು ಎನ್ನುವ ಚರ್ಚೆ ನಡೆದಿದೆ. ಬೆಳಗಾವಿಯಿಂದ ಬೈಲಹೊಂಗಲ, ಗೋಕಾಕ್ ಹಾಗೂ ಚಿಕ್ಕೋಡಿ ಜಿಲ್ಲೆಯ ವಿಭಜನೆ ಮಾಡಬೇಕು ಎನ್ನುವ ಒತ್ತಡ ಇದೆ. ತುಮಕೂರಿನಿಂದ ಮಧುಗಿರಿ / ತಿಪಟೂರು, ಮೈಸೂರಿನಿಂದ ಹುಣಸೂರು, ಉತ್ತರ ಕನ್ನಡದಿಂದ ಶಿರಸಿ, ದಕ್ಷಿಣ ಕನ್ನಡದಿಂದ ಪುತ್ತೂರು ಜಿಲ್ಲೆಗಳ ರಚನೆಗೆ ಬೇಡಿಕೆ ಇದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications