'ಕನ್ನಡಕ್ಕೆ ಬಂದ 8 ಜ್ಞಾನಪೀಠದ ಪೈಕಿ ನೇರವಾಗಿ ಬಂದವು ಐದು ಮಾತ್ರ'
ಬೆಂಗಳೂರು, ಜುಲೈ 31: ಕನ್ನಡಕ್ಕೆ ಬಂದ ಎಂಟು ಜ್ಞಾನಪೀಠಗಳ ಪೈಕಿ ಐದು ಮಾತ್ರ ನೇರವಾಗಿ ಬಂದವು. ಉಳಿದವು ಅಡ್ಡ ದಾರಿ ಹಿಡಿದು ಬಂದವು ಎನ್ನುವ ಮೂಲಕ ಹಿರಿಯ ಲೇಖಕರಾದ ಶಾ.ಮಂ. ಕೃಷ್ಣರಾಯರು ಜ್ಞಾನಪೀಠ ಪ್ರಶಸ್ತಿ ಬಗ್ಗೆ ಮತ್ತೆ ವಿವಾದವನ್ನು ಸೃಷ್ಟಿಸಿದ್ದಾರೆ.
ಕರ್ನಾಟಕ ಲೇಖಕಿಯರ ಸಂಘದಿಂದ ಬೆಂಗಳೂರಿನಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಜಾತಿ, ಸಮುದಾಯ ಹಾಗೂ ಪ್ರಾದೇಶಿಕತೆ ಆಧಾರದಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತಿದೆ. ಈ ಕಾರಣಕ್ಕೆ ಪ್ರತಿಭೆ ಇರುವ ಲೇಖಕರು ಪ್ರಶಸ್ತಿಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಪತ್ರಕರ್ತೆಯಾದ ಎಚ್.ಸಿ.ಭುವನೇಶ್ವರಿ ಅವರಿಗೆ ಶ್ರೀಲೇಖಾ ಪ್ರಶಸ್ತಿ, ಲೇಖಕಿ ಇಂದಿರಾ ಹಾಲಂಬಿ ಅವರಿಗೆ ಪ್ರೇಮಾಭಟ್ ಮತ್ತು ಎ.ಎಸ್.ಭಟ್ ದತ್ತಿ ಪ್ರಶಸ್ತಿ ನೀಡಲಾಯಿತು.
ಕನ್ನಡ ಸಾಹಿತ್ಯದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ಕುವೆಂಪು, ದ.ರಾ.ಬೇಂದ್ರೆ, ಶಿವರಾಮ ಕಾರಂತ, ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ವಿ.ಕೃ.ಗೋಕಾಕ್, ಯು.ಆರ್.ಅನಂತಮೂರ್ತಿ, ಗಿರೀಶ್ ಕಾರ್ನಾಡ್, ಚಂದ್ರಶೇಖರ ಕಂಬಾರ ಈ ಎಂಟು ಮಂದಿಗೆ ಜ್ಞಾನಪೀಠ ಗೌರವ ಲಭಿಸಿದೆ.
ಆದರೆ, ಅಡ್ಡದಾರಿಯಿಂದ ಬಂದ 3 ಪ್ರಶಸ್ತಿ ಯಾವುವು ಎಂಬುದನ್ನು ರಾಯರು ಹೇಳಲಿಲ್ಲ. ಅವು ಯಾವುವು ಎಂಬುದನ್ನು ಜನರ ಊಹೆಗೆ ಬಿಟ್ಟಿದ್ದಾರೆ. ನೀವೇ ಊಹಿಸಿ.
-
ಶೂಟಿಂಗ್ ವೇಳೆ ನನ್ನ ಖಾಸಗಿ ಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ: ನಿರ್ದೇಶಕ ಸನೋಜ್ ಮಿಶ್ರಾ ವಿರುದ್ಧ ನಟಿ ಮೊನಾಲಿಸಾ ಆರೋಪ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications