ಗ್ರಾಹಕರ ಜೇಬಿಗೆ ಓಲಾ, ಉಬರ್ಗೆ ಕತ್ತರಿ ಹಾಕುವಂತಿಲ್ಲ
ಬೆಂಗಳೂರು, ಮೇ 28: ಓಲಾ, ಉಬರ್ ಸೇರಿದಂತೆ ಸಾರಿಗೆ ಸೇವೆ ನೀಡುವ ಅಗ್ರಿಗೇಟರ್ಗಳಿಗೆ ಶೇ.5ರಷ್ಟು ಮಾತ್ರ ಸೇವಾ ತರಿಗೆ ವಿಧಿಸಲು ಅವಕಾಶ ಮಾಡಿ ಸರಕಾರ ಹೊರಡಿಸಿದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹಾಗಾಗಿ ಓಲಾ, ಉಬರ್ ಕಂಪನಿಗಳಿಗೆ ಕಾನೂನು ಹೋರಾಟದಲ್ಲಿ ತೀವ್ರ ಹಿನ್ನಡೆಯಾಗಿದೆ. ಅವರು ಗ್ರಾಹಕರಿಂದ ಹೆಚ್ಚಿನ ಶುಲ್ಕ ವಸೂಲಿಗೆ ಬ್ರೇಕ್ ಬಿದ್ದಿದೆ.
ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ನಿಗದಿಪಡಿಸಿರುವ ಆಟೋ ರಿಕ್ಷಾ ಪ್ರಯಾಣ ದರಗಳ ಮೇಲೆ ಶೇ.5 ಸೇವಾ ಶುಲ್ಕ ಮತ್ತು ಅನ್ವಯಿಸುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ನಿರ್ದೇಶಿಸಿ ರಾಜ್ಯ ಸರ್ಕಾರವು 2022ರ ನವೆಂಬರ್ 25ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ.

ಅರ್ಜಿ ವಜಾ: ಆಟೋ ರಿಕ್ಷಾ ಪ್ರಯಾಣಕ್ಕೆ ನಿಗದಿ ಪಡಿಸಿರುವ ದರಕ್ಕಿಂತ ಹೆಚ್ಚಿನ ದರ ವಿಧಿಸಿ ಓಲಾ ಮತ್ತು ಉಬರ್ ತಮ್ಮ ಆ್ಯಪ್ ಮೂಲಕ ಆಟೋ ರಿಕ್ಷಾ ಸೇವೆ ನೀಡುತ್ತಿದ್ದು, ತಕ್ಷಣದಿಂದ ಬರುವಂತೆ ಈ ಸೇವೆಯನ್ನು ಸ್ಥಗಿತಗೊಳಿಸಬೇಕು ಎಂಬ ರಾಜ್ಯ ಸರ್ಕಾರದ ಆದೇಶ ರದ್ದುಪಡಿಸಬೇಕು ಎಂದು ಎಎನ್ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಉಬರ್ ಇಂಡಿಯಾ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ನೇತೃತ್ವದ ಏಕಸದಸ್ಯ ಪೀಠವು ವಜಾ ಮಾಡಿದೆ.
"ಅರ್ಜಿಗಳನ್ನು ವಜಾ ಮಾಡಲಾಗಿದೆ. ಈಗ ಎತ್ತಿ ಹಿಡಿಯಲಾಗಿರುವ ಸರ್ಕಾರದ ಆಕ್ಷೇಪಾರ್ಹವಾದ ಆದೇಶದ ಪ್ರಕಾರ ಮತ್ತು ನಿಗದಿಪಡಿಸಿದ ದರದ ಮೇಲೆ ಅಗ್ರಿಗೇಟರ್ ಸಂಸ್ಥೆಗಳಾದ ಓಲಾ ಮತ್ತು ಉಬರ್ ಶೇ. 5ರಷ್ಟು ಸೇವಾ ಶುಲ್ಕ ಸಂಗ್ರಹಿಸಲು ಅರ್ಹರಾಗಿರುತ್ತಾರೆ" ಎಂದು ನ್ಯಾಯಾಲಯ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಆದೇಶದ ಪ್ರತಿ ಇನ್ನೂ ಹೊರಬಿದ್ದಿಲ್ಲ.
ಆಟೋ ರಿಕ್ಷಾ ಅಗ್ರಿಗೇಟರ್ ಸೇವೆ ಒದಗಿಸಲು ಚಾಲ್ತಿಯಲ್ಲಿರುವ ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ಕಾಲಕಾಲಕ್ಕೆ ನಿಗದಿಪಡಿಸಿರುವ ಆಟೋ ರಿಕ್ಷಾ ಪ್ರಯಾಣ ದರಗಳ ಮೇಲೆ ಶೇ. 5ರಷ್ಟು ಸೇವಾ ಶುಲ್ಕ ಮತ್ತು ಅನ್ವಯಿಸುವ ಜಿಎಸ್ಟಿ ತೆರಿಗೆಯನ್ನು ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ರಾಜ್ಯದ ಎಲ್ಲಾ ಸಾರಿಗೆ ಪ್ರಾಧಿಕಾರಿಗಳಿಗೆ ರಾಜ್ಯ ಸರ್ಕಾರವು 2022ರ ನವೆಂಬರ್ 25ರಂದು ಅಧಿಸೂಚನೆ ಹೊರಡಿಸಿತ್ತು. ಇದಕ್ಕೆ ಓಲಾ ಮತ್ತು ಉಬರ್ ಆಕ್ಷೇಪಿಸಿದ್ದವು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications