ಕನ್ನಡ ಮಾಧ್ಯಮದಲ್ಲಿ ಓದಿದವರಿಗೆ ಉದ್ಯೋಗದಲ್ಲಿ 5% ಮೀಸಲಾತಿ
ಬೆಂಗಳೂರು, ಜುಲೈ 7: ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪೂರೈಸಿದವರಿಗೆ ಕರ್ನಾಟಕ ಆಡಳಿತ ಸೇವೆಯಲ್ಲಿ ಶೇಕಡಾ 5 ಮೀಸಲಾತಿ ನೀಡಲು ರಾಜ್ಯ ಸರಕಾರ ತೀರ್ಮಾನಿಸಿದೆ.
ದೇಶದಾದ್ಯಂತ ಯಾರೇ ಆಗಲಿ ಪೂರ್ತಿಯಾಗಿ ಕನ್ನಡ ಮಾಧ್ಯಮದಲ್ಲೇ ಶಿಕ್ಷಣ ಪೂರೈಸಿದ್ದರೆ ಅವರಿಗೆ ಈ ಮೀಸಲಾತಿ ಸೌಲಭ್ಯ ಸಿಗಲಿದೆ. ಇದಕ್ಕಾಗಿ ಕರ್ನಾಟಕ ನಾಗರೀಕ ಸೇವೆಗಳ (ಸಾಮಾನ್ಯ ನೇಮಕಾತಿ) ಅಧಿನಿಯಮ - 1977ಕ್ಕೆ ತಿದ್ದುಪಡಿಯನ್ನು 2002ರಲ್ಲಿ ತರಲಾಗಿತ್ತು.
ಇನ್ಮುಂದೆ SC/ST ಗುತ್ತಿಗೆದಾರರಿಗೆ ಟೆಂಡರ್ ನಲ್ಲೂ ಮೀಸಲಾತಿ
1-10ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿದವರಿಗೆ ಈ ಸೌಲಭ್ಯಗಳು ಸಿಗಲಿದ್ದು ಎಸ್ಎಸ್ಎಲ್ಸಿ ಪ್ರಮಾಣಪತ್ರವನ್ನು ನೀಡಬೇಕಾಗುತ್ತದೆ. ಒಂದೊಮ್ಮೆ ಹುದ್ದೆಗೆ 7ನೇ ತರಗತಿವರೆಗೆ ವಿದ್ಯಾರ್ಹತೆ ಬೇಕಾಗಿದ್ದರೆ ಅಲ್ಲಿವರೆಗಿನ ಪ್ರಮಾಣಪತ್ರವನ್ನೂ ನೀಡಿದರೂ ಸಾಕಾಗುತ್ತದೆ.
"ಕನ್ನಡ ಮಾಧ್ಯಮದಲ್ಲಿ 1-10ನೇ ತರಗತಿವರೆಗೆ ಕಲಿತ ಯಾವುದೇ ಅಭ್ಯರ್ಥಿಗಳಿಗೆ ಈ ಸೌಲಭ್ಯ ಸಿಗಲಿದೆ," ಎಂದು ಕರ್ನಾಟಕ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.
ಇದರೊಂದಿಗೆ ಗಡಿ ಭಾಗದಲ್ಲಿ ಬೇರೆ ರಾಜ್ಯಗಳಲ್ಲಿ ಕನ್ನಡ ಕಲಿತವರಿಗೂ ಕರ್ನಾಟಕದಲ್ಲಿ ಉದ್ಯೋಗ ಸಿಗಲಿದೆ.