ಹೊಸದಾಗಿ ವಿವಾಹ ಆಗುವವರಿಗೆ ಭರ್ಜರಿ ಗುಡ್ ನ್ಯೂಸ್: 50,000 ರೂಪಾಯಿ ಆರ್ಥಿಕ ನೆರವು
Marriage Financial Compensation: ಒಂದು ಮದುವೆ ಮಾಡಬೇಕೆಂದ್ರೆ ಸುಲಭದ ಮಾತಲ್ಲ. ಒಂದಲ್ಲ.. ಎರಡಲ್ಲ ಸುಮಾರು ಖರ್ಚುಗಳು ಬರುತ್ತವೆ. ಈ ನಡುವೆಯೇ ಇದೀಗ ಹೊಸದಾಗಿ ವಿವಾಹ ಆಗುವವರಿಗೆ ಭರ್ಜರಿ ಗುಡ್ ನ್ಯೂಸ್ವೊಂದು ಇದ್ದು, 50,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ. ಹಾಗಾದ್ರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಹೌದು.. ಒಂದ ಮನೆ ಕಟ್ಟಿ ನೋಡು.. ಮದುವೆ ಮಾಡಿ ನೋಡು ಎನ್ನುವ ಮಾತಿದೆ. ಇದರಂತೆಯೇ ಈಗಿನ ಕಾಲದಲ್ಲಿ ಒಂದು ಮದುವೆ ಮಾಡಬೇಕಂದ್ರೆ ಸಲಭದ ಮಾತಲ್ಲ. ತುಂಬಾ ಖರ್ಚುಗಳು ಬರುತ್ತವೆ. ಇದೀಗ ಹೊಸದಾಗಿ ವಿವಾಹ ಆಗುವವರಿಗೆ ಗುಡ್ ನ್ಯೂಸ್ ಇದ್ದು, ಆರ್ಥಿಕ ಪರಿಹಾರ ಘೋಷಣೆ ಮಾಡಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹ ವೆಚ್ಚಗಳಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೊಸದಾಗಿ ವಿವಾಹ ಆಗುವವರು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಉತ್ತೇಜನ ನೀಡುವುದರ ಜೊತೆಗೆ ಆರ್ಥಿಕ ಹೊರೆಯನ್ನು ತಗ್ಗಿಸಬೇಕೆಂಬ ಉದ್ದೇಶದಿಂದ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸರಳ ವಿವಾಹಕ್ಕೆ ಪ್ರತಿ ಜೋಡಿಗೆ 50,000 ಸಾವಿರ ರೂಪಾಯಿ ನೀಡಲಾಗುವುದು. ಇದರಿಂದ ಹೊಸದಾಗಿ ವಿವಾಹ ಆಗುವವರಿಗೆ ಆರ್ಥಿಕ ಹೊರೆ ತಗ್ಗಿದಂತಾಗಲಿದೆ.
ಯಾರೆಲ್ಲ ಅರ್ಜಿ ಸಲ್ಲಿಕೆ ಮಾಡಬಹುದು?
* ವಧು-ವರರು ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯಗಳಲ್ಲಿ ಒಂದಕ್ಕೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಅಥವಾ ಪಾರ್ಸಿ) ಸೇರಿದವರು ಆಗಿರಬೇಕು
* ಸಾಮೂಹಿಕ ವಿವಾಹದಲ್ಲಿ ಕನಿಷ್ಠ 10 ಜೋಡಿಗಳು ಭಾಗವಹಿಸಬೇಕು
* ವಧುವಿನ ವಯಸ್ಸು 18 ರಿಂದ 42 ವರ್ಷ ವಯಸ್ಸಿನವರಾಗಿರಬೇಕು ಮತ್ತು ವರನ ವಯಸ್ಸು 21ರಿಂದ 45 ವರ್ಷ ವಯಸ್ಸಿನವರಾಗಿರಬೇಕು.
* ಈ ಯೋಜನೆಯಡಿಯಲ್ಲಿ ಸಹಾಯ ಪಡೆಯಲು, ಪ್ರತಿ ವಧು-ವರರ ವಾರ್ಷಿಕ ಆದಾಯ 2.50 ಲಕ್ಷ ರೂಪಾಯಿಗೂ ಹೆಚ್ಚಿರಬಾರದು ಮತ್ತು ಅವರ ಒಟ್ಟು ಆದಾಯ ₹25.00 ಲಕ್ಷ ಮೀರಬಾರದು.
* ಈ ಪ್ರಯೋಜನವನ್ನು ಜೀವಿತಾವಧಿಯಲ್ಲಿ ಒಮ್ಮೆ ಮಾತ್ರ ಪಡೆಯಬಹುದು.
* ವರನಿಗೆ ಈಗಾಗಲೇ ಜೀವಂತ ಪತ್ನಿ ಇದ್ದಲ್ಲಿ ಅಥವಾ ವಧುವಿಗೆ ಈಗಾಗಲೇ ಜೀವಂತ ಪತಿ ಇದ್ದಲ್ಲಿ ಅಂತಹವರಿಗೆ ಈ ಯೋಜನೆ ಅನ್ವಯ ಆಗುವುದಿಲ್ಲ.
* ಒಂದು ಕುಟುಂಬದಿಂದ ಒಬ್ಬ ವ್ಯಕ್ತಿ ಮಾತ್ರ ಈ ಯೋಜನೆಯ ಅಡಿಯಲ್ಲಿ ಪ್ರಯೋಜನವನ್ನು ಪಡೆಯಬಹುದು.
ಈ ಪಕಟಣೆಯಲ್ಲಿ ಜಿಲ್ಲಾವಾರು ಗುರಿ ನಿಗದಿ | ಈಗಲೇ ಅರ್ಜಿ ಸಲ್ಲಿಸಿ! ಸರಳ, ಅರ್ಥಪೂರ್ಣ ವಿವಾಹಗಳನ್ನು ಘನತೆ ಮತ್ತು ಬೆಂಬಲದೊಂದಿಗೆ ಉತ್ತೇಜಿಸೋಣ! ಈ ಅವಕಾಶವನ್ನು ಕಳೆದುಕೊಳ್ಳಬೇಡಿ - ಇಂದೇ ಅರ್ಜಿ ಸಲ್ಲಿಸಿ ಎಂದು ತಿಳಿಸಲಾಗಿದೆ. ಇನ್ನೂ ಈ ಸಾಮೂಹಿಕ ವಿವಾಹಗಳನ್ನು ಮಾಡಿಸುವ ಜವಾಬ್ದಾರಿ ಹೊತ್ತಿರುವವರು ಧನಸಹಾಯಕ್ಕಾಗಿ ಪ್ರತಿ ದಂಪತಿಯಿಂದ 5 ಸಾವಿಯ ರೂಪಾಯಿಗಳನ್ನು ಪಡೆಯಲಾಗುತ್ತದೆ ಅಂತಲೂ ತಿಳಿಸಲಾಗಿದೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications