Get Updates
Get notified of breaking news, exclusive insights, and must-see stories!

ತಿಪಟೂರು ಹಾಗೂ ತುಮಕೂರು ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ 50 ಕೋಟಿ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ಅಮೃತ್ ಭಾರತ್ ಸ್ಟೇಷನ್‌ ಯೋಜನೆಯಡಿ ತುಮಕೂರು ರೈಲ್ವೆ ನಿಲ್ದಾಣ ಹಾಗೂ ತಿಪಟೂರು ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗಾಗಿ 50 ಕೋಟಿ ರೂಪಾಯಿಗಳ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಸಂಸದ ಜಿ.ಎಸ್. ಬಸವರಾಜು ತಿಳಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವೀಡಿಯೋ ಕಾನ್ಫರೆನ್ಸ್ ಮೂಲಕ ದೇಶದ 554 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿ, 1500 ರಸ್ತೆ ಮೇಲ್ಸೆತುವೆ ಅಂಡರ್ ಪಾಸ್‌ಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿದ ನಂತರ ನಗರದ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಅಭಿವೃದ್ಧಿ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು.

50 Crores released for the development of Tipaturu and Tumkur railway stations

ಕಳೆದ 10 ವರ್ಷಗಳಿಂದ ಕೇಂದ್ರ ಸರ್ಕಾರವು ಜನಪರವಾದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಕ್ಕೆ ತಂದಿದೆ. ಇತರೆ ಸಾರಿಗೆ ಪ್ರಯಾಣ ವೆಚ್ಚಗಳಿಗೆ ಹೋಲಿಸಿದರೆ ರೈಲ್ವೆ ಪ್ರಯಾಣ ದರ ಅತ್ಯಂತ ಕಡಿಮೆ ಇರುವುದರಿಂದ ರೈಲು ಜನಸಾಮಾನ್ಯರ ಸಾರಿಗೆಯಾಗಿದೆ ಎಂದರು.

ಭಾರತೀಯ ರೈಲ್ವೆಯನ್ನು ಮತ್ತಷ್ಟು ಅಭಿವೃದ್ಧಿಯತ್ತಕೊಂಡೊಯ್ಯಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಮೃತ್ ಭಾರತ್‌ ಸ್ಟೇಷನ್ ಯೋಜನೆಯಡಿ ಪುನಾಭಿವೃದ್ಧಿಗೊಳಿಸುತ್ತಿರುವ ದೇಶದ ಒಟ್ಟು 554 ರೈಲ್ವೆ ನಿಲ್ದಾಣಗಳ ಪೈಕಿ ಜಿಲ್ಲೆಯ ತುಮಕೂರು ಮತ್ತು ತಿಪಟೂರು ರೈಲ್ವೆ ನಿಲ್ದಾಣಗಳು ಸೇರಿರುವುದು ಸಂತೋಷದ ಸಂಗತಿ ಎಂದರು.

ತುಮಕೂರು ರೈಲ್ವೆ ನಿಲ್ದಾಣ ಪುನರಾಭಿವೃದ್ಧಿಗಾಗಿ 20 ಕೋಟಿ ರೂಪಾಯಿ ಹಾಗೂ ತಿಪಟೂರು ನಿಲ್ದಾಣ ಪುನರಾಭಿವೃದ್ಧಿಗಾಗಿ 30 ಕೋಟಿ ರೂ. ಸೇರಿ ಒಟ್ಟು 50 ಕೋಟಿ ರೂ ಅಂದಾಜು ವೆಚ್ಚದಲ್ಲಿ ಪ್ಲಾಟ್‌ ಫಾರ್ಮ ವಿಸ್ತರಣೆ, ಎಸ್ಕಲೇಟರ್ ಮತ್ತು ಲಿಫ್‌ಟ್ಗಳ ಅಳವಡಿಕೆ, ಟಿಕೆಟ್ ಬುಕಿಂಗ್ ಕೌಂಟರ್ ನವೀಕರಣ, ವಿದ್ಯುತ್ ನವೀಕರಣ, ಬಹು ಮಹಡಿ ಪಾರ್ಕಿಂಗ್ ಕಟ್ಟಡ ನಿರ್ಮಾಣ, ವಿಐಪಿ ಲಾಂಜ್‌ ಮತ್ತು ನಿರೀಕ್ಷಣಾ ಕೊಠಡಿಗಳ ನಿರ್ಮಾಣ ಸೇರಿ ಅತ್ಯಾಧುನಿಕ ರೈಲ್ವೆ ಸ್ಟೇಷನ್‌ಗಳಾಗಿ ತುಮಕೂರು ಮತ್ತು ತಿಪಟೂರು ರೈಲ್ವೆ ಸ್ಟೇಷನ್‌ಗಳು ಅಭಿವೃದ್ಧಿ ಹೊಂದಲಿವೆ ಎಂದು ತಿಳಿಸಿದರು.

50 Crores released for the development of Tipaturu and Tumkur railway stations

ನಂತರ ಮಾತನಾಡಿದ ಶಾಸಕ ಜ್ಯೋತಿ ಗಣೇಶ್, ಪ್ರತಿ ನಿತ್ಯ ಲಕ್ಷಾಂತರ ಜನರು ರೈಲುಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಅವರ ಅನುಕೂಲಕ್ಕಾಗಿಯೇ ಕೇಂದ್ರ ಸರ್ಕಾರ ರೈಲ್ವೇ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ ಭಾರತೀಯ ರೈಲ್ವೆಯನ್ನು ಅಭಿವೃದ್ಧಿ ಪಡಿಸುತ್ತಿದೆ. ಕೇಂದ್ರ ಸರ್ಕಾರವು ತನ್ನ ಅವಧಿಯಲ್ಲಿ ಈವರೆಗೂ 25000 ಕಿಮೀ. ರೈಲ್ವೆ ಮಾರ್ಗ ಹಾಗೂ ಶೇ. 94 ರಷ್ಟು ಡೀಸೆಲ್ ರೈಲುಗಳನ್ನು ವಿದ್ಯುದ್ದೀಕರಣಗೊಳಿಸಲಾಗಿದೆ. ಇದರಿಂದ ಪರಿಸರ ಮಾಲಿನ್ಯ ನಿಯಂತ್ರಣಗೊಂಡಿದೆ.

ಮಾನವ ರಹಿತ ಕ್ರಾಸಿಂಗ್‌ಗಳಿಗೆ ಹೆಚ್ಚು ಆದ್ಯತೆ ನೀಡಿದ್ದು, ರೈಲ್ವೆ ನಿಲ್ದಾಣಗಳನ್ನು ವಿಮಾನ ನಿಲ್ದಾಣಗಳಂತೆ ವಿನ್ಯಾಸ ಮಾಡಲಾಗುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ ಸರ್ಕಾರಿ ಶಾಲಾಮಕ್ಕಳಿಗೆ ಪ್ರಬಂಧಸ್ಪರ್ಧೆ, ಭಾಷಣ ಸ್ಪರ್ಧೆ, ರಸಪ್ರಶ್ನೆ ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು.

ಶಾಸಕ ಸುರೇಶ್ ಗೌಡ, ಜಿಲ್ಲಾಧಿಕಾರಿ ಶುಭ ಕಲ್ಯಾಣ್‌, ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ, ರೈಲ್ವೆ ಮ್ಯಾನೇಜರ್ ನಿವೇದ್ ತಾಲಿಮ್ ಸೇರಿದಂತೆ ರೈಲ್ವೆ ಅಧಿಕಾರಿಗಳು, ಸಾರ್ವಜನಿಕರು, ಶಾಲಾ ಮಕ್ಕಳು ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+