ಕಾಲುಬಾಯಿ ರೋಗಕ್ಕೆ ಕೇಂದ್ರದಿಂದ 50 ಲಕ್ಷ ಡೋಸ್ ಲಸಿಕೆ ಪೂರೈಕೆ: ಸಚಿವ ಪ್ರಭು ಚೌಹಾಣ್!
ಬೆಂಗಳೂರು, ಅ. 19: "ಕಾಲುಬಾಯಿ ರೋಗಕ್ಕೆ ಕೇಂದ್ರದಿಂದ 50 ಲಕ್ಷ ಡೋಸ್ ಲಸಿಕೆ ಮಂಜೂರಾಗಿದ್ದು, ಮೊದಲನೇ ಹಂತದಲ್ಲಿ 25 ಲಕ್ಷ ಡೋಸ್ ಲಸಿಕೆ ಪೂರೈಕೆಯಾಗುತ್ತಿದೆ. ಲಸಿಕೆಯನ್ನು ಆದ್ಯತೆಯ ಮೇಲೆ ಎಲ್ಲ ಜಿಲ್ಲೆಗಳಿಗೆ ಸರಬರಾಜು ಮಾಡಲಾಗುವುದು" ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
"ಕರ್ನಾಟಕದ ದಕ್ಷಿಣ ಭಾಗದಲ್ಲಿ ಕಾಲುಬಾಯಿ ರೋಗ ಹೆಚ್ಚು ಕಂಡು ಬಂದಿದ್ದು ಈಗಾಗಲೇ ರಿಂಗ್ ವ್ಯಾಕ್ಸಿಂಗ್ ಮೂಲಕ ರೋಗವನ್ನು ಹತೋಟಿಗೆ ತರಲಾಗಿದೆ. ಮೊದಲನೇ ಹಂತದಲ್ಲಿ ಬಳ್ಳಾರಿ, ಯಾದಗಿರಿ, ಗುಲ್ಬರ್ಗಾ, ರಾಯಚೂರು, ಬೀದರ್ ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆ ಲಸಿಕೆ ಪೂರೈಕೆ ಆಗಲಿದೆ" ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಕಾಲುಬಾಯಿ ರೋಗ ಹೆಚ್ಚು ಕಂಡುಬರುತ್ತಿರುವ ಜಿಲ್ಲೆಗಳಲ್ಲಿ ಸ್ಯಾಂಪಲ್ ಸಂಗ್ರಹಣೆ ಮಾಡಿ ಹೆಬ್ಬಾಳದಲ್ಲಿರುವ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯಲ್ಲಿ ಪರೀಕ್ಷೆ ನೀಡಲಾಗಿತ್ತು, ಕರ್ನಾಟಕದಲ್ಲಿ ಓ ಮಾದರಿಯ ವೈರಸ್ ಕಂಡುಬಂದಿದೆ. ಜ್ವರ ಬಾದೆಯಿಂದ ಕರುಗಳು ಈ ರೋಗಕ್ಕೆ ಹೆಚ್ಚು ತುತ್ತಾಗುವ ಸಾಧ್ಯತೆ ಇರುವುದರಿಂದ ಪಶುಪಾಲಕರು ಕರುಗಳ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಎಂದು ಪ್ರಭು ಚೌಹಾಣ್ ಮನವಿ ಮಾಡಿದ್ದಾರೆ.

ಐದು ಕಿ.ಮೀ. ವ್ಯಾಪ್ತಿಯಲ್ಲಿ ಲಸಿಕೆ!
ಎರಡನೇ ಹಂತದಲ್ಲಿ 27 ಲಕ್ಷ ಪೂರೈಕೆ ಆಗುತ್ತಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ನೀಡಲಾಗುತ್ತದೆ. ಸದ್ಯ ರಾಜ್ಯದ 13 ಜಿಲ್ಲೆಗಳಲ್ಲಿ ಅಲ್ಲಲ್ಲಿ ಕಾಲುಬಾಯಿ ರೋಗ ಕಾಣಿಸಿಕೊಂಡಿದೆ. ಹೀಗಾಗಿ ರೋಗೋದ್ರೇಕ ಕಂಡುಬಂದ 5 ಕಿಮೀ ವ್ಯಾಪಿಯಲ್ಲಿ ಲಸಿಕೆ ನೀಡಲಾಗುತ್ತಿದೆ.

ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ
"ಪಶು ಕಲ್ಯಾಣ ಸಹಾಯವಾಣಿಯ ಉಪಯೋಗವನ್ನು ರಾಜ್ಯದ ಎಲ್ಲ ರೈತರು ಪಡೆದುಕೊಳ್ಳಬೇಕು. ಜಾನುವಾರುಗಳಲ್ಲಿ ರೋಗದ ಲಕ್ಷಣ ಕಂಡು ಬಂದರೆ ತಕ್ಷಣಕ್ಕೆ ಹತ್ತಿರದ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಅಥವಾ ಪಶುವೈದ್ಯಾಧಿಕಾರಿಗಳಿಗೆ ತಿಳಿಸಬೇಕು. ಒಂದು ವೇಳೆ ಇಲಾಖೆಯಿಂದ ಅಥವಾ ಪಶು ವೈದ್ಯಾಧಿಕಾರಿಗಳಿಂದ ಸ್ಪಂದನ ದೊರೆಯದಿದ್ದರೆ ಪಶು ಕಲ್ಯಾಣ ಸಹಾಯವಾಣಿಗೆ ದೂರು ಕೊಡಿ, ರೈತರು ನೀಡುವ ದೂರು ಆಧರಿಸಿ ನಿರ್ಲಕ್ಷ ತೋರಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇನೆ" ಎಂದು ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.

ಸಚಿವ ಚೌಹಾಣ್ಗೆ ರೈತರ ಮನವಿ!
ಗದಗ, ರಾಯಚೂರ ಹಾಗೂ ಮೈಸೂರು ಭಾಗದಿಂದ ಕೆಲ ರೈತರು ಹಾಗೂ ಪಶುಪಾಲಕರು ಸಚಿವರಿಗೆ ಕರೆ ಮಾಡಿ ಜಾನುವಾರುಗಳು ಅನುಭವಿಸುತ್ತಿರುವ ನೋವನ್ನು ತೋಡಿಕೊಂಡಿದ್ದಾರೆ. ಪಶುವೈದ್ಯಾಧಿಕಾರಿಗಳು ಕಾಲುಬಾಯಿ ರೋಗದಿಂದ ನರಳುತ್ತಿರುವ ಜಾನುವಾರುಗಳಿಗೆ ತುರ್ತಾಗಿ ಚಿಕಿತ್ಸೆ ನೀಡದಿರುವ ಬಗ್ಗೆ ರೈತರು ಸಚಿವ ಪ್ರಭು ಚೌಹಾಣ್ ಅವರಿಗೆ ಮನವಿ ಮಾಡಿದ್ದರು.
Recommended Video

ಆರೋಗ್ಯ ಕಾಪಾಡುವುದು ಇಲಾಖೆ ಹೊಣೆ
"ರೈತರು ಹಾಗೂ ಜಾನುವಾರು ಸಾಕಣೆದಾರರು ಯಾವುದೇ ರೀತಿಯಿಂದ ಆತಂಕಪಡುವ ಅಗತ್ಯವಿಲ್ಲ ಕಾಲುಬಾಯಿ ರೋಗಕ್ಕೆ ಇಲಾಖೆಯಲ್ಲಿ ಲಸಿಕೆ ಲಭ್ಯವಿದ್ದು ತೀವ್ರವಾಗಿ ಅವುಗಳನ್ನು ಜಾನುವಾರುಗಳಿಗೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಾನುವಾರುಗಳ ಆರೋಗ್ಯ ಕಾಪಾಡುವುದು ನಮ್ಮ ಇಲಾಖೆಯ ಹೊಣೆ. ಅಧಿಕಾರಿಗಳು ಕೆಲ ಜಿಲ್ಲೆಗಳಲ್ಲಿ ನಿರ್ಲಕ್ಷ್ಯ ತೋರಿದ್ದು ಕಂಡು ಬಂದಿದೆ ಮುಂದಿನ ಸಭೆಯಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ" ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications