ಯಕ್ಷಗಾನ ಪ್ರಿಯರೆ, ವೆಬ್ಸೈಟ್ಲ್ಲಿ ಸಿಗಲಿವೆ 5 ಸಾವಿರ ಯಕ್ಷಗಾನ ಪ್ರಸಂಗ
ಬೆಂಗಳೂರು, ಜು.23: ಯಕ್ಷಗಾನವೆಂದರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ, ಭಾರತೀಯ ಸಾಂಸ್ಕೃತಿಕ ಮೌಲ್ಯಗಳನ್ನು ಅಭಿವ್ಯಕ್ತಪಡಿಸುವ ಸಾಮುದಾಯಿಕ ಕಲೆ ಎನಿಸಿಕೊಂಡಿದೆ.
ಇದರಲ್ಲಿ ಹಾಸ್ಯ, ಅಳು, ರೌದ್ರ ಹೀಗೆ ಎಲ್ಲಾ ಬಗೆಯ ಮನುಷ್ಯನ ಮಾನಸಿಕ ಸ್ಥಿತಿಯನ್ನು ಅಭಿವ್ಯಕ್ತಪಡಿಸಬಹುದು. ಯಕ್ಷಗಾನ ದಕ್ಷಿಣ ಕನ್ನಡ, ಮಲೆನಾಡಿನಲ್ಲಿ ಹೆಚ್ಚು ಪ್ರಸಿದ್ಧಿ, ಕೆಲವು ವರ್ಷಗಳಿಂದೀಚೆಗೆ ನಗರ ಪ್ರದೇಶಗಳಲ್ಲೂ ಸಾಕಷ್ಟು ಯಕ್ಷಗಾನಗಳು ನಡೆಯುತ್ತಿದ್ದು ಎಲ್ಲರಿಗೂ ಚಿರಪರಿಚಿತವಾಗಿದೆ.
ಯಕ್ಷಗಾನ ಇನ್ನಷ್ಟು ಜನರನ್ನು ತಲುಪುವಂತೆ ಮಾಡಲು ಯಕ್ಷಗಾನ ಅಕಾಡೆಮಿಯು ಯಕ್ಷಗಾನ ಪ್ರಸಂಗಗಳನ್ನು ಡಿಜಿಟಲೀಕರಣ ಮಾಡಲು ನಿರ್ಧರಿಸಿದೆ.ಯಕ್ಷವಾಹಿನಿ ಪ್ರತಿಷ್ಠಾನದೊಂದಿಗೆ ಒಪ್ಪಂದ ಮಾಡಿಕೊಳ್ಳಲು ರೂಪುರೇಷೆ ಸಿದ್ಧಪಡಿಸಿಕೊಳ್ಳುತ್ತಿದೆ. ಇದರಿಂದ ಅಕಾಡೆಮಿ ವೆಬ್ಸೈಟ್ನಲ್ಲಿ ಯಕ್ಷಗಾನ ಪ್ರಸಂಗಗಳು ಸುಲಭವಾಗಿ ಎಲ್ಲರನ್ನೂ ತಲುಪಲಿದೆ.

ಯಕ್ಷಗಾನ ಅಕಾಡೆಮಿಯು ಪ್ರಸಂಗಗಳ ಅಂತರ್ಜಾಲ ಪ್ರಕಾಶನದ ಕುರಿತಾದ ಅನುದಾನವನ್ನು ಗುತ್ತಿಗೆ ಕೆಲಸದ ಒಡಂಬಡಿಕೆ ಆಧಾರದಲ್ಲಿ ಯಕ್ಷವಾಹಿನಿಗೆ ನೀಡುತ್ತದೆ. ಬಹುಮಟ್ಟಿಗೆ ಪ್ರಸಂಗಗಳು 400-600 ಪದ್ಯಗಳಿಗೆ ವಿಸ್ತೃತವಾಗಿರುವುದರಿಂದ ಒಂದು ಪ್ರಸಂಗಕ್ಕೆ ನಿಗದಿತವಾಗಿ ಇಂತಿಷ್ಟು ಹಣವೆಂದು ನೀಡಲಾಗುತ್ತದೆ.
ಒಂದು ಪ್ರಸಂಗಕ್ಕೆ ಸರಾಸರಿ 15 ಸಾವಿರ ರೂ.ಗಿಂತ ಹೆಚ್ಚು ಹಣ ಖರ್ಚಾಗುತ್ತದೆ ಎಂದು ಅಂದಾಜಿಸಲಾಗಿದೆ. ಈ ಒಪ್ಪಂದ ಮುಂದಿನ ದಿನಗಳಲ್ಲಿ ಯಕ್ಷಗಾನ ಸಾಹಿತ್ಯ ಮತ್ತು ಕಲೆಗೆ ಸಂಬಂಧಿಸಿದ ಸಂಶೋಧನೆ, ಪ್ರಕಾಶನ, ಕಮ್ಮಟ ಕೈಗೊಳ್ಳಲು ಒಂದು ಹೆಜ್ಜೆಯಾಗಿದೆ. ಯಕ್ಷಗಾನದ ಬಹುತೇಕ ಪ್ರಸಂಗಗಳು ಮಹಾಕಾವ್ಯ ಮತ್ತು ಪುರಾಣಗಳನ್ನು ಆಧರಿಸಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications