ಮಡಿಕೇರಿಯಲ್ಲಿ 52 ಅಡಿಯ ಬೃಹತ್ ಶಿವನ ಮೂರ್ತಿ ಪ್ರತಿಷ್ಠಾಪನೆ
ಮಡಿಕೇರಿ,ಮಾರ್ಚ್,04: ಓಂ ನಮಃ ಶಿವಾಯ, ಓಂ ನಮಃ ಶಿವಾಯ, ಶಿವಾಯ ನಮಃ ಎಂಬ ಉದ್ಘೋಷಗಳು, ಸಹಸ್ರಾರು ಭಕ್ತರಲ್ಲಿ ಮೈವೆತ್ತ ಎಲ್ಲಿಲ್ಲದ ಉತ್ಸಾಹ, ಇವರ ಭಕ್ತಿಪೂರ್ವಕ ನಮನ ಸ್ವೀಕರಿಸಿದ ಶಿವ ಧರೆಗಿಳಿರುವುದು ಮಾತ್ರ ಬಾಕಿ ಇತ್ತು. ಈ ದೃಶ್ಯ ಕಂಡು ಬಂದದ್ದು ಮಡಿಕೇರಿಯಲ್ಲಿ.
ನಗರದ ಹೊರವಲಯದಲ್ಲಿರುವ ಪುಣ್ಯಸ್ಥಳ ಕರ್ಣಂಗೇರಿ ಕ್ಷೇತ್ರ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ 52ಅಡಿ ಎತ್ತರದ ಶಿವನ ಮೂರ್ತಿಯನ್ನು ಗುರುವಾರ ಪ್ರತಿಷ್ಠಾಪಿಸಲಾಗಿದ್ದು, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಸಾಂಪ್ರದಾಯಿಕ ಪೂಜಾ ಕೈಂಕರ್ಯದೊಂದಿಗೆ ಲೋಕಾರ್ಪಣೆ ಮಾಡಿದ್ದಾರೆ.[ಮಹಾಶಿವರಾತ್ರಿ : ಮಾ.4, 5ರಂದು ವಿಶೇಷ ಬಸ್ ಸೌಲಭ್ಯ]

ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾದ ಈ ಶಿವನ ಮೂರ್ತಿಯನ್ನು ನಿರ್ಮಿಸಲು 19ಲಕ್ಷ ರೂ ತಗುಲಿದೆ. ಇದು ನಗರದ ಯುವ ಕಲಾವಿದ ಶಿಲ್ಪಿ ರವಿ ಅವರ ಕೈಚಳಕ, ತಾಳ್ಮೆಯಿಂದ ರೂಪಿತವಾಗಿದ್ದು, ಇದರ ರೂಪ, ರಚನೆಗೆ 10 ವರ್ಷ ತೆಗೆದುಕೊಳ್ಳಲಾಗಿದೆ.[ನಾಗೇಶ್ವರ, ಕಾಶಿ ವಿಶ್ವನಾಥ ಪೌರಾಣಿಕ ಹಿನ್ನೆಲೆ]
ಕಳೆದ ಮೂರು ವರ್ಷಗಳ ಹಿಂದೆ ಯುಗಾದಿಯಂದು ಪುಣ್ಯಕ್ಷೇತ್ರ ಕಾಶಿಯಿಂದ ಶಿವಲಿಂಗವನ್ನು ತಂದು ಭಕ್ತಾದಿಗಳ ಸಹಕಾರದಿಂದ ಪ್ರತಿಷ್ಠಾಪಿಸಲಾಗಿತ್ತು. ಈ ಸಂದರ್ಭದಲ್ಲಿ ಆಗಮಿಸಿದ ಸಹಸ್ರಾರು ಸಂಖ್ಯೆಯ ಭಕ್ತರು ಶಿವಮೂರ್ತಿಗೆ ನಮಸ್ಕರಿಸಿ ಧನ್ಯತಾ ಭಾವ ಅನುಭವಿಸಿದರು.[ನಂಜನಗೂಡು ದೇಗುಲದ ಕಿರಾತಾರ್ಜುನ ಮೂರ್ತಿಯ ಕಥೆ]
ಅಲ್ಲದೇ ಮಾರ್ಚ್ 7ರಂದು ಇರುವ ಮಹಾಶಿವರಾತ್ರಿ ಹಬ್ಬದ ಮೊದಲೇ ಶಿವಮೂರ್ತಿ ಪ್ರತಿಷ್ಠಾಪನೆಯಾಗಿರುವುದು ಮಡಕೇರಿ ಜನತೆಯ ಸಂತಸವನ್ನು ಇಮ್ಮಡಿಗೊಳಿಸಿದ್ದು, ಕಲಾವಿದ ರವಿಯವರನ್ನು ಜನ ಶ್ಲಾಘಿಸಿದರು.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications