DK Shivakumar: "ಡಿಸಿಎಂ ಡಿ.ಕೆ ಶಿವಕುಮಾರ್ ಪರವಾಗಿ 55 ಜನ ಕಾಂಗ್ರೆಸ್ ಶಾಸಕರು" ರಹಸ್ಯ ಬಿಚ್ಚಿಟ್ಟ ಪ್ರಭಾವಿ ಶಾಸಕ
DK Shivakumar: ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ, ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ಬಗ್ಗೆ ಕಳೆದ ಎರಡೂವರೆ ವರ್ಷದಿಂದಲೂ ಚರ್ಚೆ ಆಗುತ್ತಿದೆ. ಇದೀಗ ಸಂಕ್ರಾಂತಿಯಲ್ಲ, ವಿಧಾನಸಭೆ ಅಧಿವೇಶನ ಮುಗಿದ ತಕ್ಷಣವೇ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಪ್ರಮುಖ ಶಾಸಕರೊಬ್ಬರು ಹೇಳಿದ್ದಾರೆ.
ಹೌದು ಕಾಂಗ್ರೆಸ್ನಲ್ಲಿ ಔತಣಕೂಟ ರಾಜಕೀಯ ನಡೆಯುತ್ತಿರುವಾಗಲೇ ಮಹತ್ವದ ಬೆಳವಣಿಗೆ ನಡೆದಿದೆ. ಡಿ.ಕೆ ಶಿವಕುಮಾರ್ ಅವರು ಶೀಘ್ರ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಅವರ ಆಪ್ತ, ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ಹೇಳಿದ್ದಾರೆ. ಈಚೆಗೆ ಮುಖ್ಯಮಂತ್ರಿ ಅವರ ಪುತ್ರ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷ ಆಡಳಿತ ನಡೆಸಲಿದ್ದಾರೆ ಎಂದು ಹೇಳಿದ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಬಣ ರಾಜಕೀಯ ಹೆಚ್ಚಾಗಿದೆ.

ಇದೀಗ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು, ನನ್ನ ಹಣೆಯಲ್ಲಿ ಬರೆದಿದ್ದಕ್ಕೆ ನಾನು ಶಾಸಕ ಆಗಿದ್ದೇನಲ್ಲವೇ ಅದೇ ರೀತಿ ಡಿ.ಕೆ .ಶಿವಕುಮಾರ್ ಅವರ ಹಣೆಯಲ್ಲಿ ಬರೆದಿದೆ ಅವರೂ ಸಹ ಮುಖ್ಯಮಂತ್ರಿ ಆಗಲಿದ್ದಾರೆ ಎಂದಿದ್ದಾರೆ. ಗುರುವಾರ ನಾವು 55 ಜನ ಶಾಸಕರು ಊಟಕ್ಕೆ ಸೇರಿದ್ದೆವು. ಎಲ್ಲರೂ ಸೇರಿ ಊಟ ಮಾಡಿದ್ವಿ ಅಷ್ಟೇ. ನಮಗೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ ಇದೆ. ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದಿದ್ದಾರೆ.
ಡಿ.ಕೆ ಶಿವಕುಮಾರ್ ಅವರ ಕಷ್ಟಕ್ಕೆ ಫಲ ಸಿಗಲಿದೆ!
ಇನ್ನು ಮುಂದುವರಿದು ಕಾಂಗ್ರೆಸ್ ಪ್ರಭಾವಿ ನಾಯಕ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶ್ರಮ ಪಟ್ಟಿದ್ದಾರೆ. ಡಿ.ಕೆ .ಶಿವಕುಮಾರ್ ಅವರ ಕಷ್ಟಪಟ್ಟಿರುವುದಕ್ಕೆ ಫಲ ಸಿಗಲಿದೆ. ಅಧಿವೇಶನ ಮುಕ್ತಾಯವಾದ ನಂತರ ಆದಷ್ಟು ಬೇಗ ಆ ಫಲ ಸಿಗಲಿದೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಂಬರ್ ಮುಖ್ಯ ಅಲ್ಲ, ಆದರೆ ಹೈಕಮಾಂಡ್ನ ನಿರ್ದೇಶನ ಮುಖ್ಯವಾಗುತ್ತದೆ. ಹೈಕಮಾಂಡ್ ಎಲ್ಲದಕ್ಕೂ ತೀರ್ಮಾನ ತೆಗೆದುಕೊಳ್ಳಲಾಗಿದೆ. ಹೈಕಮಾಂಡ್ ಹೇಳಿದರೆ ಯಾರು ಯಾಕೆ ಕೇಳಲ್ಲ ಎಂದು ಪ್ರಶ್ನೆ ಮಾಡಿರುವ ಅವರು, ಸಂಖ್ಯಾಬಲ ಮುಖ್ಯ ಅಲ್ಲ ಎಂದೂ ಹೇಳಿದ್ದಾರೆ.
ರಾಜಕೀಯ ಚರ್ಚೆ ಆಗಿಲ್ಲ
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಏರ್ಪಡಿಸಿದ್ದ ಔತಣಕೂಟದಲ್ಲಿ 50 ರಿಂದ 60 ಜನ ಶಾಸಕರು ಸೇರಿದ್ದೆವು ಡಿ.ಕೆ.ಶಿವಕುಮಾರ್ ಕರೆದರೆ ಎಲ್ಲಾ 224 ಜನ ಶಾಸಕರೂ ಔತಣಕೂಟಕ್ಕೆ ಬರುತ್ತಾರೆ. ಕಾಂಗ್ರೆಸ್, ಜೆಡಿಎಸ್ ಅಥವಾ ಬಿಜೆಪಿ ಎಂದಲ್ಲ. ವಿಶ್ವಾಸ ಮತ್ತು ಪ್ರೀತಿ ಒಂದು ಬಾಂಧವ್ಯ ಎಂದು ಅವರು ಹೇಳಿದ್ದಾರೆ. ಆದರೆ ನೆನ್ನೆ ನಡೆದ ಔತಣ ಕೂಟದಲ್ಲಿ ರಾಜಕೀಯ ವಿಚಾರ ಚರ್ಚೆ ಆಗಿಲ್ಲ ಎಂದೂ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
-
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು












Click it and Unblock the Notifications