Get Updates
Get notified of breaking news, exclusive insights, and must-see stories!

DK Shivakumar: "ಡಿಸಿಎಂ ಡಿ.ಕೆ ಶಿವಕುಮಾರ್ ಪರವಾಗಿ 55 ಜನ ಕಾಂಗ್ರೆಸ್ ಶಾಸಕರು" ರಹಸ್ಯ ಬಿಚ್ಚಿಟ್ಟ ಪ್ರಭಾವಿ ಶಾಸಕ

DK Shivakumar: ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ, ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ಬಗ್ಗೆ ಕಳೆದ ಎರಡೂವರೆ ವರ್ಷದಿಂದಲೂ ಚರ್ಚೆ ಆಗುತ್ತಿದೆ. ಇದೀಗ ಸಂಕ್ರಾಂತಿಯಲ್ಲ, ವಿಧಾನಸಭೆ ಅಧಿವೇಶನ ಮುಗಿದ ತಕ್ಷಣವೇ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಪ್ರಮುಖ ಶಾಸಕರೊಬ್ಬರು ಹೇಳಿದ್ದಾರೆ.

ಹೌದು ಕಾಂಗ್ರೆಸ್‌ನಲ್ಲಿ ಔತಣಕೂಟ ರಾಜಕೀಯ ನಡೆಯುತ್ತಿರುವಾಗಲೇ ಮಹತ್ವದ ಬೆಳವಣಿಗೆ ನಡೆದಿದೆ. ಡಿ.ಕೆ ಶಿವಕುಮಾರ್ ಅವರು ಶೀಘ್ರ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಅವರ ಆಪ್ತ, ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ಹೇಳಿದ್ದಾರೆ. ಈಚೆಗೆ ಮುಖ್ಯಮಂತ್ರಿ ಅವರ ಪುತ್ರ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷ ಆಡಳಿತ ನಡೆಸಲಿದ್ದಾರೆ ಎಂದು ಹೇಳಿದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಹೆಚ್ಚಾಗಿದೆ.

55 Congress MLAs support DCM D K Shivakumar influential MLA reveals secret

ಇದೀಗ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು, ನನ್ನ ಹಣೆಯಲ್ಲಿ ಬರೆದಿದ್ದಕ್ಕೆ ನಾನು ಶಾಸಕ ಆಗಿದ್ದೇನಲ್ಲವೇ ಅದೇ ರೀತಿ ಡಿ.ಕೆ .ಶಿವಕುಮಾರ್ ಅವರ ಹಣೆಯಲ್ಲಿ ಬರೆದಿದೆ ಅವರೂ ಸಹ ಮುಖ್ಯಮಂತ್ರಿ ಆಗಲಿದ್ದಾರೆ ಎಂದಿದ್ದಾರೆ. ಗುರುವಾರ ನಾವು 55 ಜನ ಶಾಸಕರು ಊಟಕ್ಕೆ ಸೇರಿದ್ದೆವು. ಎಲ್ಲರೂ ಸೇರಿ ಊಟ ಮಾಡಿದ್ವಿ ಅಷ್ಟೇ. ನಮಗೆ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎನ್ನುವ ಆಸೆ ಇದೆ. ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದಿದ್ದಾರೆ.

ಡಿ.ಕೆ ಶಿವಕುಮಾರ್ ಅವರ ಕಷ್ಟಕ್ಕೆ ಫಲ ಸಿಗಲಿದೆ!

ಇನ್ನು ಮುಂದುವರಿದು ಕಾಂಗ್ರೆಸ್ ಪ್ರಭಾವಿ ನಾಯಕ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಶ್ರಮ ಪಟ್ಟಿದ್ದಾರೆ. ಡಿ.ಕೆ .ಶಿವಕುಮಾರ್ ಅವರ ಕಷ್ಟಪಟ್ಟಿರುವುದಕ್ಕೆ ಫಲ ಸಿಗಲಿದೆ. ಅಧಿವೇಶನ ಮುಕ್ತಾಯವಾದ ನಂತರ ಆದಷ್ಟು ಬೇಗ ಆ ಫಲ ಸಿಗಲಿದೆ ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಂಬರ್ ಮುಖ್ಯ ಅಲ್ಲ, ಆದರೆ ಹೈಕಮಾಂಡ್‌ನ ನಿರ್ದೇಶನ ಮುಖ್ಯವಾಗುತ್ತದೆ. ಹೈಕಮಾಂಡ್ ಎಲ್ಲದಕ್ಕೂ ತೀರ್ಮಾನ ತೆಗೆದುಕೊಳ್ಳಲಾಗಿದೆ. ಹೈಕಮಾಂಡ್ ಹೇಳಿದರೆ ಯಾರು ಯಾಕೆ ಕೇಳಲ್ಲ ಎಂದು ಪ್ರಶ್ನೆ ಮಾಡಿರುವ ಅವರು, ಸಂಖ್ಯಾಬಲ ಮುಖ್ಯ ಅಲ್ಲ ಎಂದೂ ಹೇಳಿದ್ದಾರೆ.

ರಾಜಕೀಯ ಚರ್ಚೆ ಆಗಿಲ್ಲ

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಏರ್ಪಡಿಸಿದ್ದ ಔತಣಕೂಟದಲ್ಲಿ 50 ರಿಂದ 60 ಜನ ಶಾಸಕರು ಸೇರಿದ್ದೆವು ಡಿ.ಕೆ.ಶಿವಕುಮಾರ್ ಕರೆದರೆ ಎಲ್ಲಾ 224 ಜನ ಶಾಸಕರೂ ಔತಣಕೂಟಕ್ಕೆ ಬರುತ್ತಾರೆ. ಕಾಂಗ್ರೆಸ್, ಜೆಡಿಎಸ್ ಅಥವಾ ಬಿಜೆಪಿ ಎಂದಲ್ಲ. ವಿಶ್ವಾಸ ಮತ್ತು ಪ್ರೀತಿ ಒಂದು ಬಾಂಧವ್ಯ ಎಂದು ಅವರು ಹೇಳಿದ್ದಾರೆ. ಆದರೆ ನೆನ್ನೆ ನಡೆದ ಔತಣ ಕೂಟದಲ್ಲಿ ರಾಜಕೀಯ ವಿಚಾರ ಚರ್ಚೆ ಆಗಿಲ್ಲ ಎಂದೂ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+