ಕರ್ನಾಟಕ; ಮೂರು ವರ್ಷದಲ್ಲಿ 571 ಬಾಲ್ಯ ವಿವಾಹ
ಬೆಂಗಳೂರು, ಮಾರ್ಚ್ 24; ಕರ್ನಾಟಕದಲ್ಲಿ ಮೂರು ವರ್ಷದಲ್ಲಿ 571 ಬಾಲ್ಯ ವಿವಾಹಗಳು ನಡೆದಿವೆ ಎಂದು ಕರ್ನಾಟಕ ಸರ್ಕಾರ ಮಾಹಿತಿ ನೀಡಿದೆ. ಮಂಡ್ಯ ಜಿಲ್ಲೆಯಲ್ಲಿ ಅತ್ಯಧಿಕ ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ.
ವಿಧಾನ ಪರಿಷತ್ನಲ್ಲಿ ವಿರೋಧ ಪಕ್ಷದ ಉಪ ನಾಯಕ ಕೆ. ಗೋವಿಂದರಾಜ್ ಪ್ರಶ್ನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಉತ್ತರ ನೀಡಿದ್ದಾರೆ.
2018-19 ರಿಂದ 2020-21ರ ತನಕ ರಾಜ್ಯದಲ್ಲಿ 571 ಬಾಲ್ಯ ವಿವಾಹಗಳು ನಡೆದಿವೆ. 417 ಪ್ರಕರಣಗಳಲ್ಲಿ ಎಫ್ಐಆರ್ ದಾಖಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಮೂರು ವರ್ಷಗಳಲ್ಲಿ ಯಾವುದೇ ಬಾಲ್ಯ ವಿವಾಹ ಪ್ರಕರಣ ದಾಖಲಾಗಿಲ್ಲ ಎಂದು ಸಚಿವರು ಹೇಳಿದ್ದಾರೆ.

ರಾಷ್ಟ್ರೀಯ ಅಪರಾಧ ಪ್ರಕರಣಗಳ ಬ್ಯರೊ (ಎನ್ಸಿಆರ್ಬಿ) ವರದಿಯ ಪ್ರಕಾರ ಇತರ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕದಲ್ಲಿ ಬಾಲ್ಯ ವಿವಾಹ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ.
ರಾಜ್ಯದಲ್ಲಿ 2108-19ರಲ್ಲಿ 119, 2019-20ರಲ್ಲಿ 156 ಮತ್ತು 2020-21ರಲ್ಲಿ 296 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿವೆ ಎಂದು ಸಚಿವ ಹಾಲಪ್ಪ ಆಚಾರ್ ವಿಧಾನ ಪರಿಷತ್ನಲ್ಲಿ ಉತ್ತರ ಕೊಟ್ಟರು.
ಯಾವ ಜಿಲ್ಲೆಯಲ್ಲಿ ಎಷ್ಟು?; ಮೂರು ವರ್ಷಗಳಲ್ಲಿ ಮಂಡ್ಯ ಜಿಲ್ಲೆಯಲ್ಲಿ 59 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ. ರಾಮನಗರದಲ್ಲಿ 51, ಹಾಸನದಲ್ಲಿ 42, ಮೈಸೂರು 38, ಬೆಳಗಾವಿ ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ತಲಾ 37 ಬಾಲ್ಯ ವಿವಾಹಗಳು ನಡೆದಿವೆ.
ಬಾಲ್ಯ ವಿವಾಹವನ್ನು ತಡೆಯುವ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ರಚನೆ ಮಾಡಲಾಗಿದೆ. ಶಿಶು ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಹಾಗೂ ಹೋಬಳಿ ಮಟ್ಟದಲ್ಲಿನ ಬಾಲ್ಯ ವಿವಾಹ ತಡೆಗಟ್ಟುವ ಸಮಿತಿಯನ್ನು ರಚನೆ ಮಾಡಲಾಗಿದೆ.
ಬಾಲ್ಯ ವಿವಾಹ ತಡೆಯಲು ಮತ್ತು ಜನರಲ್ಲಿ ಜಾಗೃತಿ ಮೂಡಿಸಲು ನಿಯಮಗಳನ್ನು ಉಲ್ಲಂಘಿಸಿ ಬಾಲ್ಯ ವಿವಾಹಕ್ಕೆ ಪ್ರೆರೇಪಣೆ ನೀಡುವವರನ್ನು ಕಾನೂನಿನ ಕಠಿಣ ಕ್ರಮಕ್ಕೆ ಒಳಪಡಿಸಲು ಸಹ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಬಾಲ್ಯ ವಿವಾಹ ಮಾಡುವುದರಿಂದ ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತದೆ. ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳಿಗೆ ವಿವಾಹ ಮಾಡುವ ಪರಿಸ್ಥಿತಿಯನ್ನು ಹೋಗಲಾಡಿಸಲು ಅರಿವು ಕಾರ್ಯಕ್ರಮಗಳನ್ನು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗುತ್ತಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಬಾಲ್ಯ ವಿವಾಹ ಪದ್ದತಿಯು ಜಾರಿಯಲ್ಲಿದೆ. ತಂದೆ-ತಾಯಿಗಳು ಹೆಣ್ಣು ಮಕ್ಕಳು ಹೊರೆ ಎಂದು ಬಾವಿಸಿ ಅವರಿಗೆ 14 ರಿಂದ 15 ವರ್ಷ ತುಂಬಿದ ತಕ್ಷಣ ಮದುವೆ ಮಾಡುತ್ತಿದ್ದರು ಆದರೆ ಕಾಲ ಈಗ ಬದಲಾಗಿದ್ದು ಅನೇಕ ಯೋಜನೆಗಳನ್ನು ಹೆಣ್ಣು ಮಕ್ಕಳ ಭವಿಷ್ಯಕಾಗಿಯೇ ಅನುಷ್ಠಾನಗೊಳಿಸಲಾಗುತ್ತಿದೆ. ಇದರಿಂದಾಗಿ ಬಾಲ್ಯ ವಿವಾಹದ ವಿರುದ್ಧ ಜಾಗೃತಿಯೂ ಹೆಚ್ಚತ್ತಿದೆ.
ಬಾಲ್ಯ ವಿವಾಹದಿಂದ ಮಕ್ಕಳ ಭವಿಷ್ಯ ಕುಂಠಿತಗೊಳ್ಳುತ್ತದೆ. ಇಂತಹ ಅನಿಷ್ಟ ಪದ್ಧತಿ ಸಮಾಜದಲ್ಲಿ ಹೆಮ್ಮರವಾಗಿ ಬೆಳೆಯದಂತೆ ಎಲ್ಲರೂ ಸೇರಿ ತಡೆಯಬೇಕು. ಹೆಣ್ಣು ಮಕ್ಕಳ ಕನಸನ್ನು ನನಸಾಗಿಸಲು ಹಾಗೂ ಸದೃಢ ಸಮಾಜವನ್ನು ನಿರ್ಮಾಣ ಮಾಡಲು ಪ್ರತಿಯೊಬ್ಬರು ಬಾಲ್ಯ ವಿವಾಹ ತಡೆಗೆ ಕೈ ಜೋಡಿಸಬೇಕಿದೆ.
ಕೋವಿಡ್ ಸಂದರ್ಭದಲ್ಲಿ ಹೆಚ್ಚಳ; ಕೋವಿಡ್ ಪರಿಸ್ಥಿತಿಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚಳವಾಗಿದೆ ಎಂದು ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. ಕೋವಿಡ್ ಕಾರಣದಿಂದಾಗಿ ಮನೆಗಳಲ್ಲೇ ಮದುವೆಗಳನ್ನು ಮಾಡಲು ಆರಂಭಿಸಿದ ಮೇಲೆ ಬಾಲ್ಯ ವಿವಾಹಗಳು ಹೆಚ್ಚಿವೆ. ಆರ್ಥಿಕ ಸಂಕಷ್ಟ, ಶಾಲೆಗಳಿಗೆ ರಜೆ ಇದ್ದ ಕಾರಣ ಬಾಲ್ಯ ವಿವಾಹಗಳಿಗೆ ಪೋಷಕರು ಮುಂದಾಗುತ್ತಿದ್ದಾರೆ.
Recommended Video
-
ರಾಜ್ಯದಲ್ಲಿ 4,824 ಕೋಟಿ ರೂ. ಕೈಗಾರಿಕಾ ಹೂಡಿಕೆಗೆ ಸರ್ಕಾರ ಅಸ್ತು; 14,525 ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ












Click it and Unblock the Notifications