5 ಕ್ಷೇತ್ರಗಳ ಉಪ ಚುನಾವಣೆ : ಶೇ 65.57 ರಷ್ಟು ಮತದಾನ
ಬೆಂಗಳೂರು, ನವೆಂಬರ್ 04 : 5 ಕ್ಷೇತ್ರಗಳ ಉಪ ಚುನಾವಣೆ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. 3 ಲೋಕಸಭಾ ಕ್ಷೇತ್ರ ಮತ್ತು 2 ವಿಧಾನಸಭಾ ಕ್ಷೇತ್ರಗಳಿಗೆ ಒಟ್ಟು 65.57ರಷ್ಟು ಮತದಾನ ನಡೆದಿದೆ.
ಬಳ್ಳಾರಿ, ಶಿವಮೊಗ್ಗ, ಮಂಡ್ಯ ಲೋಕಸಭಾ ಕ್ಷೇತ್ರ ಮತ್ತು ಜಮಖಂಡಿ, ರಾಮನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮತದಾನ ನವೆಂಬರ್ 3ರ ಶನಿವಾರ ನಡೆಯಿತು. ಶಾಂತಿಯುತವಾಗಿ ಮತದಾನ ನಡೆದಿದ್ದು, ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ.
ಜಮಖಂಡಿಯಲ್ಲಿ ಅತಿ ಹೆಚ್ಚು ಅಂದರೆ 81.58 ಮತ್ತು ಮಂಡ್ಯದಲ್ಲಿ ಅತಿ ಕಡಿಮೆ ಎಂದರೆ 53.93 ರಷ್ಟು ಮತದಾನವಾಗಿದೆ. ಎಲ್ಲಾ ಕ್ಷೇತ್ರಗಳಲ್ಲಿ ಈಗ ಯಾರು ಗೆಲ್ಲುತ್ತಾರೆ?, ಎಷ್ಟು ಮತಗಳ ಅಂತರದಲ್ಲಿ ಗೆಲ್ಲುತ್ತಾರೆ? ಎಂದು ಲೆಕ್ಕಾಚಾರ ಆರಂಭವಾಗಿದೆ.

ಕರ್ನಾಟಕದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಯಾಗಿ ಸರ್ಕಾರ ನಡೆಸುತ್ತಿವೆ. ಉಪ ಚುನಾವಣೆಯಲ್ಲಿಯೂ ಮೈತ್ರಿ ಮಾಡಿಕೊಂಡು ಮಂಡ್ಯ, ಶಿವಮೊಗ್ಗ, ರಾಮನಗರದಲ್ಲಿ ಜೆಡಿಎಸ್ ಮತ್ತು ಬಳ್ಳಾರಿ, ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಉಪ ಚುನಾವಣೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗೆ ಕಾರಣವಾಗುವ ಸಾಧ್ಯತೆ ಇದೆ. ನವೆಂಬರ್ 6ರ ಮಂಗಳವಾರ ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ. ಯಾರಿಗೆ ದೀಪಾವಳಿ ಉಡುಗೊರೆ ಸಿಗಲಿದೆ? ಎಂದು ಕಾದು ನೋಡಬೇಕು.
ಮತದಾನದ ವಿವರ
* ಜಮಖಂಡಿ ವಿಧಾನಸಭಾ ಕ್ಷೇತ್ರ - 81.58
* ರಾಮನಗರ ವಿಧಾನಸಭಾ ಕ್ಷೇತ್ರ - 73.71
* ಬಳ್ಳಾರಿ ಲೋಕಸಭಾ ಕ್ಷೇತ್ರ 63.85
* ಶಿವಮೊಗ್ಗ ಲೋಕಸಭಾ ಕ್ಷೇತ್ರ 61.05
* ಮಂಡ್ಯ ಲೋಕಸಭಾ ಕ್ಷೇತ್ರ 53.93
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications